ಹೋರಾಟದ ಗೆಲುವು ಮತ್ತು ಮಿಲನಾ ನಗು

ಕೈ ಹಿಡಿದ ಲವ್‌

Team Udayavani, Mar 20, 2020, 10:44 AM IST

ಹೋರಾಟದ ಗೆಲುವು ಮತ್ತು ಮಿಲನಾ ನಗು

“ಇದೊಂಥರ ಹೋರಾಟದ ಗೆಲುವು …’
– ಹೀಗೆ ಹೇಳಿ ನಕ್ಕರು ಮಿಲನಾ ನಾಗರಾಜ್‌. ಯಾವ ಮಿಲನಾ ಎಂದರೆ “ಲವ್‌ ಮಾಕ್ಟೇಲ್‌’ ಚಿತ್ರದ ಬಗ್ಗೆ ಹೇಳಬೇಕು. ಇನ್ನೂ ಅರ್ಥವಾಗದಿದ್ದರೆ “ನಿಧಿ’, “ನಿಧಿಮಾ’ ಎಂದರೆ ಸಿನಿಪ್ರಿಯರಿಗೆ ಬೇಗನೇ ಅರ್ಥವಾಗಬಹುದು. ಹೌದು, ಈ ವರ್ಷದಲ್ಲಿ ಬಿಡುಗಡೆಯಾಗಿ ದೊಡ್ಡ ಹೆಸರು ಮಾಡಿರುವ ಹಾಗೂ ಪ್ರೇಕ್ಷಕ ವಲಯದಲ್ಲಿ ಹೆಚ್ಚು ಚರ್ಚೆಯಾದ ಚಿತ್ರವೆಂದರೆ ಅದು “ಲವ್‌ ಮಾಕ್ಟೇಲ್‌’. ಸಿನಿಮಾ ಬಿಡುಗಡೆಯಾಗುತ್ತಿದ್ದಂತೆ ವಿಮರ್ಶಕರಿಂದ ಆ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು. ಆದರೆ, ಸಿನಿಮಾಕ್ಕೆ ಮಾತ್ರ ಜನ ಬರಲಿಲ್ಲ. ಆದರೆ, ಸಿನಿಮಾ ನೋಡಿದವರಿಂದ ಒಳ್ಳೆಯ ಮಾತುಗಳು ಕೇಳಿಬಂದು, ಆ ಸಿನಿಮಾಕ್ಕೆ ಸಿಕ್ಕ ಬಾಯಿಮಾತಿನ ಪ್ರಚಾರ ದೊಡ್ಡ ವರದಾನವಾಗಿದ್ದು ಸುಳ್ಳಲ್ಲ. ಅಂದಿನಿಂದ “ಲವ್‌ ಮಾಕ್ಟೇಲ್‌’ ಚಿತ್ರ ತಿರುಗಿ ನೋಡಲೇ ಇಲ್ಲ. ಸತತ ಹೌಸ್‌ಫ‌ುಲ್‌ ಶೋ ಮೂಲಕ ಹಿಟ್‌ಲಿಸ್ಟ್‌ ಸೇರಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ, ನಿಧಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡು ಮೆಚ್ಚುಗೆ ಪಡೆದವರು ಮಿಲನಾ ನಾಗರಾಜ್‌. ನಟನೆಯ ಜೊತೆಗೆ ನಿರ್ಮಾಣದಲ್ಲೂ ಕೈ ಜೋಡಿಸಿದ್ದ ಮಿಲನಾ ಈಗ ಖುಷಿಯಾಗಿದ್ದಾರೆ.

“ನಾನು ತುಂಬಾ ಖುಷಿಯಾಗಿದ್ದೇನೆ. ಮೊನ್ನೆವರೆಗೆ ಚಿತ್ರಮಂದಿರದಲ್ಲಿ ಸಿನಿಮಾ ನೋಡಿ ಖುಷಿಪಟ್ಟ ಜನ ಈಗ ಅಮೆಜಾನ್‌ನಲ್ಲಿ ಸಿನಿಮಾ ನೋಡುತ್ತಿದ್ದಾರೆ. ಅನೇಕರು ನನ್ನ ಹೆಸರು ಮಿಲನಾ ಎಂಬುದನ್ನು ಮರೆತೇಬಿಟ್ಟಿದ್ದಾರೆ. ನಿಧಿ, ನಿಧಿಮಾ ಎಂದು ಕರೆಯುವ ಜೊತೆಗೆ ಕೆಲವರು ನಿಧಿ ಎಂದು ಟ್ಯಾಟೋ ಕೂಡಾ ಹಾಕಿಸಿಕೊಂಡಿದ್ದಾರೆ’ ಎನ್ನುತ್ತಾರೆ ಮಿಲನಾ. ಆರಂಭದಲ್ಲಿ ಈ ಸಿನಿಮಾ ನಿಧಾನವಾಗಿ ಪ್ರೇಕ್ಷಕರನ್ನು ಸೆಳೆಯುತ್ತದೆ ಎಂಬುದು ಮಿಲನಾ ಸೇರಿದಂತೆ ಚಿತ್ರತಂಡಕ್ಕೆ ಚೆನ್ನಾಗಿ ಗೊತ್ತಿತ್ತಂತೆ. ಅದೇ ಕಾರಣದಿಂದ ಎದೆಗುಂದದೇ ಸಿನಿಮಾ ಪ್ರಚಾರ ಮಾಡುತ್ತಾ ಬಂದಿದ್ದಾಗಿ ಹೇಳುವ ಮಿಲನಾ, “ಆರಂಭದಲ್ಲಿ ಸ್ಲೋ ಪಿಕ್‌ಆಪ್‌ ತಗೊಂಡರೂ ಆ ನಂತರ ಆರು ವಾರಗಳಲ್ಲಿ ನಮಗೆ ಒಳ್ಳೆಯ ರೆಸ್ಪಾನ್ಸ್‌ ಸಿಕ್ಕಿತು. ಬಹುತೇಕ ಶೋಗಳು ಹೌಸ್‌ಫ‌ುಲ್‌ ಪ್ರದರ್ಶನ ಕಂಡವು. ನಾವಂತು ಖುಷಿಯಾಗಿದ್ದೇವೆ. ಹಾಕಿದ ಬಂಡವಾಳದ ಜೊತೆಗೆ ಒಳ್ಳೆಯ ಲಾಭ ಕೂಡಾ ಬಂತು’ ಎನ್ನುತ್ತಾರೆ ಮಿಲನಾ.

ಸದ್ಯ ಮಿಲನಾ ನಾಗರಾಜ್‌ ಅವರಿಗೆ ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಆದರೆ. ಯಾವುದನ್ನೂ ಮಿಲನಾ ಒಪ್ಪಿಲ್ಲವಂತೆ. “ಸಾಕಷ್ಟು ಕಥೆಗಳು ಬರುತ್ತಿವೆ. ಯಾವುದೂ ಇನ್ನೂ ಅಂತಿಮವಾಗಿಲ್ಲ. ಸದ್ಯ ಚಿತ್ರದ ಗೆಲುವಿನ ಖುಷಿ­ಯಲ್ಲಿದ್ದೇನೆ’ ಎನ್ನು­ತ್ತಾರೆ.

ರವಿ ರೈ

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.