ಜರ್ಕ್‌ನಲ್ಲಿ ನಿಂತ ಜೀವನ‌


Team Udayavani, Jul 26, 2019, 5:00 AM IST

m-14

ಮೆಟ್ರೋ ಉದ್ಯೋಗಿಯ ಸಿನಿ ಕನಸು

ಸಿನಿಮಾ ಆರಂಭವಾದ ವೇಗವನ್ನು ನೋಡಿದರೆ “ಜರ್ಕ್‌’ ಎಂಬ ಚಿತ್ರ ಯಾವಾಗಲೋ ಬಿಡುಗಡೆಯಾಗಬೇಕಿತ್ತು. ಆದರೆ ಬಹುತೇಕ ಎಲ್ಲಾ ಹೊಸಬರಿಗೂ ಎದುರಾಗುವಂತಹ ಸಮಸ್ಯೆ ಈ ಚಿತ್ರಕ್ಕೂ ತಲೆದೋರಿದ್ದರಿಂದ ಚಿತ್ರ ನಿಧಾನವಾಗಿದೆ. ಈಗ ಎಲ್ಲಾ ಸಮಸ್ಯೆಗಳನ್ನು ಬದಿಗೊತ್ತಿ ಚಿತ್ರ, ಬಿಡುಗಡೆಯ ಹಂತಕ್ಕೆ ಬಂದಿದ್ದು, ಇಂದು ಬಿಡುಗಡೆಯಾಗುತ್ತಿದೆ. ಈ ಮೂಲಕ ಒಂದಷ್ಟು ಹೊಸ ಪ್ರತಿಭೆಗಳು ಚಿತ್ರರಂಗಕ್ಕೆ ಪರಿಚಯವಾಗುತ್ತವೆ.

ಸಾಮಾನ್ಯವಾಗಿ ಜರ್ಕ್‌ ಎಂಬ ಪದವನ್ನು ವಾಹನಗಳ ವಿಷಯದಲ್ಲಿ ಬಳಸುತ್ತಾರೆ. “ಜರ್ಕ್‌ ತಗೋತ್ತಿದೆ’ ಎಂಬುದು ಸಾಮಾನ್ಯ. ಇದೇ ವಿಷಯವನ್ನು ಜೀವನಕ್ಕೆ ಅನ್ವಯಿಸಿ ನಿರ್ದೇಶಕರು ಸಿನಿಮಾ ಮಾಡಿದ್ದಾರೆ. ಮಹಾಂತೇಶ್‌ ಮದಕರಿ ಈ ಚಿತ್ರದ ನಿರ್ದೇಶಕರು. ಬೆಂಗಳೂರು ಮೆಟ್ರೋ ಸಂಚಾರ ವ್ಯವಸ್ಥೆಯ ಉದ್ಯೋಗಿಯಾಗಿರುವ ಇವರಿಗೆ ಸಿನಿಮಾ, ಬರವಣಿಗೆಯ ಮೇಲೆ ಆಸಕ್ತಿ. ಅದು ಇವತ್ತು ಅವರನ್ನು ನಿರ್ದೇಶಕರನ್ನಾಗಿಸಿದೆ. ಜೀವನದಲ್ಲಿ ಎಲ್ಲರಿಗೂ ಒಂದಲ್ಲ ಒಂದು ರೀತಿಯಲ್ಲಿ “ಜರ್ಕ್‌’ ಇದ್ದೇ ಇರುತ್ತದೆ. ಅದು ಹೇಗೆ, ಯಾಕೆ, ಏನು ಎಂಬ ಅಂಶವನ್ನೇ ಇಟ್ಟುಕೊಂಡು “ಜರ್ಕ್‌’ ಚಿತ್ರ ಮಾಡಿದ್ದಾರಂತೆ. ಕನಸುಗಳನ್ನು ಕಟ್ಟಿಕೊಂಡು ಬೆಂಗಳೂರಿಗೆ ಬರುವ ನಾಯಕ, ಮುಂದೆ ಏನೇನು ಸಮಸ್ಯೆಗಳನ್ನು ಎದುರಿಸುತ್ತಾನೆ ಮತ್ತು ಅದರಿಂದ ಹೇಗೆ ಹೊರಬರುತ್ತಾನೆ ಎಂಬ ಅಂಶವೂ ಚಿತ್ರದಲ್ಲಿ ಪ್ರಮುಖವಾಗಿದೆ. ಚಿತ್ರದಲ್ಲಿ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ನಿರ್ದೇಶಕರ ಪ್ರತಿಭೆ ಬಗ್ಗೆ ಮೆಚ್ಚುಗೆ ಸೂಚಿಸಿದರು ಅವರು.

ಚಿತ್ರವನ್ನು ಕಂಪಲಿ ಚಾರಿ ಹಾಗೂ ರವಿಕುಮಾರ್‌ ಸೇರಿ ನಿರ್ಮಿಸಿದ್ದಾರೆ. “ತಿಥಿ’ ಖ್ಯಾತಿಯ ನಟ ಗಡ್ಡಪ್ಪ, ಕೃಷ್ಣ ರಾಜ್‌, ನಿತ್ಯಾರಾಜ್‌, ಆಶಾ ಭಂಡಾರಿ, ಸಚಿನ್‌, ಬುಲೆಟ್‌ ಪ್ರಕಾಶ್‌, ಪವನ್‌, ಬಿರಾದರ್‌, ಎಂ.ಎಸ್‌ ಉಮೇಶ್‌, ಕುರಿ ರಂಗ, ಅರಸು, ಮನು ಪಾಂಡು ಮೊದಲಾದವರು “ಜರ್ಕ್‌’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಎಡ್ವರ್ಡ್‌ ಷಾ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಚಂದ್ರು ಸೊಂಡೆಕೊಪ್ಪ ಛಾಯಾಗ್ರಹಣ, ಮಂಜುನಾಥ್‌ ಕಾಲಮನೆ ಸಂಕಲನ, ಥ್ರಿಲ್ಲರ್‌ ಮಂಜು ಸಾಹಸ ಚಿತ್ರದಲ್ಲಿದೆ. “ಜರ್ಕ್‌’ ರಾಜ್ಯಾದ್ಯಂತ ಸುಮಾರು ಐವತ್ತಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಗೆ ಬರುತ್ತಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.