ಆಹಾರ ಜಾಗೃತಿ: ಹಸಿವಿನ ಬಗ್ಗೆ ಅರಿವಿರಲಿ…


Team Udayavani, Jul 27, 2018, 6:00 AM IST

24.jpg

ಕಪಿಲ್‌ ಈ ಹಿಂದೆ “ಹಳ್ಳಿ ಸೊಗಡು’ ಎಂಬ ಸಿನಿಮಾ ನಿರ್ದೇಶಿಸಿದ್ದರು. ಆ ಚಿತ್ರ ಬಿಡುಗಡೆಯಾಗುತ್ತಿದ್ದಂತೆ ಹೊಸ ಸಿನಿಮಾ ಕೈಗೆತ್ತಿಕೊಂಡ ಕಪಿಲ್‌ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ್ದಾರೆ. ಕಪಿಲ್‌ ಮಾಡಿರುವ ಹೊಸ ಸಿನಿಮಾ “ಹಸಿವು ಮತ್ತು ಅರಿವು’. ಚಿತ್ರದ ಶೀರ್ಷಿಕೆ ಕೇಳಿದಾಗ ನಿಮಗೆ ಇದೊಂದು ಆಹಾರದ ಬಗ್ಗೆ ಜಾಗೃತಿ ಮೂಡಿಸುವ ಸಿನಿಮಾ ಎಂಬುದು ಸ್ಪಷ್ಟವಾಗುತ್ತದೆ. ಆಹಾರವನ್ನು ಯಾವತ್ತೂ ಬಿಸಾಕಬಾರದು, ಎಷ್ಟು ಬೇಕೋ ಅಷ್ಟೇ ತಿನ್ನಬೇಕು. ಅನೇಕರು ಆಹಾರವಿಲ್ಲದೇ ಹಸಿವಿನಿಂದಿದ್ದಾರೆ. ಅಂಥವರಿಗೆ ಸಹಾಯ ಮಾಡಬೇಕೆಂಬ ಕಾನ್ಸೆಪ್ಟ್ ಇಟ್ಟುಕೊಂಡು ಕಪಿಲ್‌ ಈ ಸಿನಿಮಾ ಮಾಡಿದ್ದಾರೆ. 

“ನನಗೆ ಈ ಕಥೆ ಐದು ನಿಮಿಷದಲ್ಲಿ ಹೊಳೆಯಿತು. ಅದೊಮ್ಮೆ ಊಟ ಮಾಡುವಾಗ ಬೇಡ ಎಂದರೂ ಹೆಚ್ಚು ಅನ್ನ ಬಡಿಸಿದರು. ಅದನ್ನು ಬಿಸಾಕಲು ಮನಸ್ಸಾಗದೇ ತಿಂದೆ. ಆ ನಂತರ ಹಸಿವು ಮತ್ತು ಆಹಾರವನ್ನಿಟ್ಟುಕೊಂಡು ಕತೆ ರೆಡಿಮಾಡಿಕೊಂಡೆ. ನನ್ನ ಕಥೆಗೆ ಡಾ.ರಾಜ್‌ಕುಮಾರ್‌ ಸ್ಫೂರ್ತಿ. ಅವರು ತಟ್ಟೆಯಲ್ಲಿ ಒಂದೇ ಒಂದು ಅನ್ನವನ್ನು ಬಿಡದೇ ಊಟ ಮಾಡುತ್ತಿದ್ದರು. ಅವರ ಸ್ಫೂರ್ತಿಯೊಂದಿಗೆ ಈ ಸಿನಿಮಾ ಮಾಡಿದ್ದೇನೆ’ ಎಂದು ಹೇಳಿಕೊಂಡರು ಕಪಿಲ್‌. ಈ ಚಿತ್ರ ಎಲ್ಲಾ ಭಾಷೆಗಳಿಗೂ ತಲುಪಬೇಕೆಂಬ ಕಾರಣಕ್ಕೆ ಬೇರೆ ಬೇರೆ ಭಾಷೆಗಳಿಗೆ ಡಬ್‌ ಮಾಡುವ ಆಲೋಚನೆಯೂ ಅವರಿಗಿದೆ. ನಿರ್ದೇಶನದ ಜೊತೆಗೆ ಚಿತ್ರವನ್ನು ಕಪಿಲ್‌ ನಿರ್ಮಿಸಿದ್ದಾರೆ. ನಿರ್ಮಾಣದಲ್ಲಿ ಇವರಿಗೆ ರಾಘವೇಂದ್ರ ಹಾಗೂ ಪ್ರಸನ್ನ ಸಾಥ್‌ ನೀಡಿದ್ದಾರೆ. ಅವರು ಕೂಡಾ ಚಿತ್ರದ ಬಗ್ಗೆ ಮಾತನಾಡಿದರು. ಕಪಿಲ್‌ ಮಾಡಿಕೊಂಡಿರುವ ಕಾನ್ಸೆಪ್ಟ್ ಇಷ್ಟವಾಗಿ ಸಿನಿಮಾ ನಿರ್ಮಾಣಕ್ಕೆ ಕೈ ಜೋಡಿಸಿದ್ದಾಗಿ ಹೇಳಿಕೊಂಡರು.

ಚಿತ್ರದಲ್ಲಿ ಗುಬ್ಬಿ ನಟರಾಜ್‌ ಹಾಗೂ ಕೃಷ್ಣಮೂರ್ತಿ ತಳಾಲು ಪ್ರಮುಖ ಪಾತ್ರ ಮಾಡಿದ್ದಾರೆ. ಅವರಿಲ್ಲಿ ತಂದೆ-ಮಗನಾಗಿ ನಟಿಸಿದ್ದಾರೆ. ಅಂಗವಿಕಲ ಮಗನೊಬ್ಬ ಹೇಗೆ ಹಸಿವು ಹಾಗೂ ಆಹಾರದ ಬಗ್ಗೆ ಜಾಗೃತಿ ಮೂಡಿಸುತ್ತಾನೆಂಬ ಅಂಶದೊಂದಿಗೆ ಸಾಗುವ ಸಿನಿಮಾವನ್ನು ಕಪಿಲ್‌ ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆ ಎನ್ನುತ್ತಾರೆ ಅವರು. ಚಿತ್ರಕ್ಕೆ ನರಸಿಂಹಮೂರ್ತಿಯವರ ಚಿತ್ರಕಥೆ- ಸಂಭಾಷಣೆ ಇದೆ. “ಕಪಿಲ್‌ ಅವರ ಕಾನ್ಸೆಪ್ಟ್ ಇಷ್ಟವಾಯಿತು. ಮನುಷ್ಯನ ಪ್ರತಿ ಅಪರಾಧಕ್ಕೂ ಶಿಕ್ಷೆ ಇದೆ. ಆದರೆ, ಅನ್ನವನ್ನು ಬಿಸಾಕೋದು ಕೂಡಾ ಒಂದು ಅಪರಾಧ. ಅದಕ್ಕೆ ಯಾವುದೇ ಶಿಕ್ಷೆಯಿಲ್ಲ. ಆ ಅಂಶವನ್ನು ಕೂಡಾ ಇಲ್ಲಿ ಹೈಲೈಟ್‌ ಮಾಡಿದ್ದೇವೆ’ ಎಂದರು ನರಸಿಂಹಮೂರ್ತಿ. ಚಿತ್ರದಲ್ಲಿ ನಟಿಸಿರುವ ಮೈಸೂರು ರಮಾನಂದ್‌ ಸೇರಿದಂತೆ ಇತರರು ತಮ್ಮ ಅನುಭವ ಹಂಚಿಕೊಂಡರು. 

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.