![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಈ ವಾರ ತೆರೆಗೆ ನಾಲ್ಕು ಚಿತ್ರಗಳು
Team Udayavani, May 3, 2019, 6:30 AM IST
![Suchi-Tere-4](https://www.udayavani.com/wp-content/uploads/2019/05/Suchi-Tere-4-620x325.jpg)
ಈ ವಾರ ಒಟ್ಟು ನಾಲ್ಕು ಚಿತ್ರಗಳು ಬಿಡುಗಡೆಯಾಗುತ್ತಿವೆ. ಗೋಲ್ದನ್ ಸ್ಟಾರ್ ಗಣೇಶ್, ಜಾಕಿ ಭಾವನ, ಹೇಮಂತ್, ಸಮೀಕ್ಷಾ ಮುಂತಾದವರು ಪ್ರಮುಖ ಭೂಮಿಕೆಯಲ್ಲಿ ಅಭಿನಯಿಸಿರುವ “99′ ಚಿತ್ರ ಈಗಾಗಲೇ ಬಿಡುಗಡೆಯಾಗಿದೆ. ಇಂದು ಕೆ.ಆರ್.ಮುರಳಿ ಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ “ಗರ’ ಚಿತ್ರ ಬಿಡುಗಡೆಯಾಗುತ್ತಿದೆ.
ಈ ಚಿತ್ರದಲ್ಲಿ ರೆಹಮಾನ್ ಹಾಸನ್, ಆವಂತಿಕಾ, ಆರ್ಯನ್, ನೇಹಾ ಪಾಟೀಲ್, ಪ್ರಶಾಂತ್ ಸಿದ್ದಿ, ರಾಮಕೃಷ್ಣ, ರೂಪಾದೇವಿ, ಮನದೀಪ್ ರಾಯ್, ತಬಲ ನಾಣಿ, ರೋಹಿತ್, ಸುನೇತ್ರ ಪಂಡಿತ್, ಸುಚಿತ್ರಾ, ನಿರಂಜನ್, ರಾಜೇಶ್ ರಾವ್, ಸೋನು, ದಯಾನಂದ್, ಗುರುರಾಜ್ ಕಲಾಲ್ಬಂಡಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ವಿಶೇಷ ಜೋಡಿಯಾಗಿ ಖ್ಯಾತ ನಟರಾದ ಜಾನಿ ಲೀವರ್ ಹಾಗೂ ಸಾಧುಕೋಕಿಲ ಕಾಣಿಸಿಕೊಂಡಿದ್ದಾರೆ. ಚಿತ್ರದ ಹಾಡುಗಳಿಗೆ ಸಾಗರ್ ಗುರುರಾಜ್ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ಹೆಚ್.ಸಿ.ವೇಣು ಛಾಯಾಗ್ರಹಣ, ಉಮಾ ಶಂಕರ್ ಬಾಬು ಸಂಕಲನ ಕಾರ್ಯವಿದೆ. ದಿನೇಶ್ ಕಲಾ ನಿರ್ದೇಶನ, ರವರ್ಮ ಸಾಹಸ ನಿರ್ದೇಶನ ಹಾಗೂ ಬಾಲಿವುಡ್ ಖ್ಯಾತಿಯ ಸರೋಜ್ ಖಾನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಇದರೊಂದಿಗೆ ಎಸ್. ಮೋಹನ್ ಕಥೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ “ಲೋಫರ್’ ಮತ್ತು ಸಂತೋಷ್ ಕುಮಾರ್ ಬೆಟಗೇರಿ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ಮಾಣದ ಜೊತೆ ನಿರ್ದೇಶನ ಮಾಡಿರುವ “ಒಂಭತ್ತನೇ ಅದ್ಭುತ’ ಚಿತ್ರಗಳು ಕೂಡ ತೆರೆ ಕಾಣುತ್ತಿವೆ. ಕಳೆದ ಒಂದು ತಿಂಗಳಿನಿಂದ ಚುನಾವಣೆ, ವಿದ್ಯಾರ್ಥಿಗಳ ಪರೀಕ್ಷೆ ಹೀಗೆ ಕೆಲ ಕಾರಣಗಳಿಂದ ತಮ್ಮ ಬಿಡುಗಡೆಯನ್ನು ಮುಂದೂಡುತ್ತ ಬಂದಿರುವ ಅನೇಕ ಚಿತ್ರಗಳು ಈ ವಾರ ಬಳಿಕ ಒಂದೊಂದಾಗಿ ತೆರೆಗೆ ಬರಲು ಸಿದ್ಧತೆ ಮಾಡಿಕೊಂಡಿವೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.