ಗಡಿನಾಡ ಲವ್ ಸ್ಟೋರಿ


Team Udayavani, Jan 10, 2020, 5:41 AM IST

20

ಗಡಿ ವಿಷಯ ಕುರಿತ ಚಿತ್ರಗಳು ಬಂದಿವೆ. ಆ ಸಾಲಿಗೆ ಈಗ “ಗಡಿನಾಡು’ ಸಿನಿಮಾ ಕೂಡ ಸೇರಿದೆ. ಚಿತ್ರ ಜನವರಿ 24 ರಂದು ಬಿಡುಗಡೆಯಾಗುತ್ತಿದೆ. ತಮ್ಮ ಸಿನಿಮಾ ಬಗ್ಗೆ ವಿಷಯ ಹಂಚಿಕೊಳ್ಳಲೆಂದೇ ನಿರ್ದೇಶಕರು ತಂಡದ ಜೊತೆ ಆಗಮಿಸಿದ್ದರು.

ಮೊದಲು ಚಿತ್ರದ ಬಗ್ಗೆ ನಿರ್ಮಾಪಕ ವಸಂತ ಮುರಾರಿ ದಳವಾಯಿ ಮಾತನಾಡಿದರು.”ಇದೊಂದು ಮರಾಠಿ ಹುಡುಗಿ ಮತ್ತು ಕನ್ನಡ ಹುಡುಗನ ಪ್ರೀತಿ ಪ್ರೇಮ ಹೊಂದಿರುವ ಚಿತ್ರ. ಗಡಿಭಾಗದ ಸಮಸ್ಯೆ ಬಗ್ಗೆ ಎಳೆ ಎಳೆಯಾಗಿ ಹೇಳಲಾಗಿದೆ. ಸೂಕ್ಷ್ಮವಿಷಯಗಳೊಂದಿಗೆ ಮನರಂಜನೆಯೂ ಇಲ್ಲಿದೆ’ ಎಂದರು.

ನಿರ್ದೇಶಕ ನಾಗ್‌ ಹುಣಸೋಡು ಮಾತನಾಡಿ, “ಚಿತ್ರದ ಹೈಲೈಟ್‌ “ಗಡಿನಾಡು’ ಶೀರ್ಷಿಕೆ. ಉಳಿದಂತೆ ಸೂಕ್ಷ್ಮ ವಿಷಯಗಳೊಂದಿಗೆ ಚಿತ್ರ ಸಾಗಲಿದೆ. ಕೆಲವು ಸತ್ಯ ಘಟನೆಗಳು ಇಲ್ಲಿವೆ. ಸಿನಿಮಾ ಕಥೆ ಕೇಳಿದ ಅನೇಕರು ಸಿನಿಮಾ ಮಾಡುವ ಮನಸ್ಸು ಮಾಡಿದ್ದರೂ, ಕೊನೆಯಲ್ಲಿ ವಿವಾದ ಮೈಮೇಲೆ ಎಳೆದುಕೊಳ್ಳುವುದು ಬೇಡ ಅಂತ ಸುಮ್ಮನಾದರು. ಕೊನೆಗೆ ವಸಂತ ಮುರಾರಿ ದಳವಾಯಿ ಅವರು ಮುಂದೆ ಬಂದು ಚಿತ್ರ ಮಾಡಿದ್ದಾರೆ. ಅಂದುಕೊಂಡಿದ್ದಕ್ಕಿಂತಲೂ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇಲ್ಲಿ ಏನೆಲ್ಲಾ ಇದೆ ಅನ್ನುವುದಕ್ಕೆ ಚಿತ್ರ ನೋಡಬೇಕು. ಒಟ್ಟಾರೆ, ಕನ್ನಡಿಗರಿಗೆ ಬೇಕಾದ ಎಲ್ಲಾ ಅಂಶಗಳೂ ಇಲ್ಲಿವೆ. ಬೆಳಗಾವಿಯಲ್ಲಿ ಇಂದು ಸಮಸ್ಯೆಗಳು ಸಾಕಷ್ಟಿವೆ. ಅದು ಭಾಷೆ ಸಮಸ್ಯೆ ಇರಬಹುದು, ಗಡಿ ಸಮಸ್ಯೆ ಇರಬಹುದು ಹೀಗೆ ಹಲವು ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದರ ಜೊತೆಯಲ್ಲಿ ಪರಿಹಾರವನ್ನೂ ಸೂಚಿಸುವ ಪ್ರಯತ್ನ ಮಾಡಲಾಗಿದೆ. ಇದರೊಂದಿಗೆ ಮರಾಠಿ ಹುಡುಗಿ ಜೊತೆ ಕನ್ನಡ ಹುಡುಗನ ಪ್ರೀತಿ ಶುರುವಾಗುತ್ತೆ. ಅದು ಇನ್ನೊಂದು ಸಮಸ್ಯೆಗೂ ಕಾರಣವಾಗುತ್ತೆ. ಆಮೇಲೆ ಏನೆಲ್ಲಾ ನಡೆದುಹೋಗುತ್ತೆ ಎಂಬುದು ಕಥೆ’ ಎಂದರು ನಿರ್ದೇಶಕರು.

ನಾಯಕ ಪ್ರಭುಸೂರ್ಯ ಅವರಿಗೆ ಇದು ಎರಡನೇ ಸಿನಿಮಾ. “ನನಗೆ ಇಲ್ಲಿ ಎರಡು ಶೇಡ್‌ ಇದೆ. ಚಿತ್ರದಲ್ಲಿ ಹೀರೋ ಬೆಂಗಳೂರಲ್ಲಿ ವಿದ್ಯಾಭ್ಯಾಸ ಮುಗಿಸಿ, ಬೆಳಗಾವಿಗೆ ಹೋಗುತ್ತಾನೆ. ಅಲ್ಲಿ ಗಡಿ ಸಮಸ್ಯೆಗಳನ್ನು ಕಂಡು, ಒಂದು ಸೇನೆ ಕಟ್ಟುತ್ತಾನೆ. ಅಲ್ಲೊಂದಷ್ಟು ಖಳಟನರು ಎದುರಾಗುತ್ತಾರೆ. ಅದು ಗಲಾಟೆಗೆ ತಿರುಗುತ್ತದೆ. ಆಮೇಲೆ ಏನಾಗುತ್ತೆ ಎಂಬುದು ಕಥೆ. ನಿರ್ಮಾಪಕರ ಬೆಂಬಲ ಇರದಿದ್ದರೆ ಈ ರೀತಿಯ ಸಿನಿಮಾ ಮಾಡಲು ಆಗುತ್ತಿರಲಿಲ್ಲ. ಫೈಟ್ಸ್‌, ಸಾಂಗ್‌ ವಿಶೇಷವಾಗಿವೆ. ಅದೇ ಇಲ್ಲಿ ಹೈಲೈಟ್‌’ ಎಂದರು ಪ್ರಭು ಸೂರ್ಯ.

ನಾಯಕಿ ಸಂಚಿತಾ ಪಡುಕೋಣೆ ಅವರಿಗೆ “ಗಡಿನಾಡು’ ಚಿತ್ರ ಬಿಡುಗಡೆಯಾಗುತ್ತಿರುವುದೇ ಖುಷಿಯ ಸಂಗತಿಯಂತೆ. ಈ ಪಾತ್ರ ಹೊಸತಾಗಿದೆ. ಸಿನಿಮಾ ನೋಡಿದವರಿಗೆ ಭಾಷೆ, ನೆಲ ಮತ್ತು ಜಲ ಬಗ್ಗೆ ಇನ್ನಷ್ಟು ಪ್ರೀತಿ ಮೂಡುತ್ತೆ. ನಾನಿಲ್ಲಿ ದಿಶಾ ಎಂಬ ಮರಾಠ ಹುಡುಗಿಯಾಗಿ ನಟಿಸಿದ್ದೇನೆ. ಮನರಂಜನೆಗೆ ಕೊರತೆ ಇಲ್ಲ. ಫ್ಯಾಮಿಲಿ ಕುಳಿತು ನೋಡುವ ಚಿತ್ರವಿದು’ ಎಂದರು ಸಂಚಿತಾ ಪಡುಕೋಣೆ.

ಚಿತ್ರಕ್ಕೆ ಎಲ್ವಿನ್‌ ಜೋಶ್ವ ಸಂಗೀತವಿದೆ. ಗೌರಿ ವೆಂಕಟೇಶ್‌, ರವಿಸುವರ್ಣ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ಚರಣ್‌ರಾಜ್‌, ದೀಪಕ್‌ಶೆಟ್ಟಿ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.