ಗರದಲ್ಲಿ ಭರಪೂರ ಮನರಂಜನೆ : ನಿರೀಕ್ಷೆಯಲ್ಲಿ ಚಿತ್ರತಂಡ
Team Udayavani, Apr 26, 2019, 6:35 AM IST
‘ಗರ’ ಎಂಬ ಸಿನಿಮಾವೊಂದು ಸೆಟ್ಟೇರಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ 3ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಕೆ.ಆರ್. ಮುರಳಿ ಕೃಷ್ಣ ನಿರ್ದೇಶಿಸಿದ್ದಾರೆ. ಆರ್.ಕೆ.ನಾರಾಯಣ್ ಅವರ ಕಾದಂಬರಿ ಓದುತ್ತಿದ್ದ ಅವರಿಗೆ ಅನೇಕ ಪ್ರಶ್ನೆಗಳು ಕಾಡಿದವಂತೆ. ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ಸಂದರ್ಭದಲ್ಲಿ ಹುಟ್ಟಿದ್ದೇ “ಗರ’. ಈ ಚಿತ್ರ ಇವತ್ತಿನ ಕಾಲಘಟ್ಟಕ್ಕೆ ಹೆಚ್ಚು ಸೂಕ್ತವಾಗಿದೆ ಎನ್ನುವುದು ಅವರ ಮಾತು. “ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ.
ನಾವು ಅವಸರ ಮಾಡಿಕೊಂಡು ಬರುತ್ತಿಲ್ಲ. ತುಂಬಾ ಕೂಲ್ ಆಗಿ ರಿಲೀಸ್ ಮಾಡುತ್ತಿದ್ದೇವೆ. ಹೊಸತನದ ಸಿನಿಮಾಗಳನ್ನು ಕನ್ನಡ ಪ್ರೇಕ್ಷಕ ಸ್ವೀಕರಿಸುತ್ತಾನೆಂಬ ವಿಶ್ವಾಸವಿದೆ’ ಎಂದರು. ಚಿತ್ರದ ಬಿಡುಗಡೆಗೂ ಮೊದಲೇ ಪ್ರೇಕ್ಷಕರು ಮತ್ತು ಚಿತ್ರರಂಗದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮಲ್ಟಿಪ್ಲೆಕ್ಸ್ಗಳು ಕೂಡ ಚಿತ್ರ ಬಿಡುಗಡೆಗೆ ಉತ್ಸುಕವಾಗಿವೆ. ಒಂದು ಒಳ್ಳೆಯ ಚಿತ್ರ ಸರಿಯಾಗಿ ಪ್ರೇಕ್ಷಕರನ್ನು ತಲುಪಬೇಕು ಎನ್ನುವ ಕಾರಣಕ್ಕೆ, ಸಾಕಷ್ಟು ಯೋಜನೆ ಮಾಡಿಕೊಂಡು ಚಿತ್ರವನ್ನು ತೆರೆಗೆ ತರುತ್ತಿದ್ದೇವೆ. ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗುವುದೆಂಬ ನಂಬಿಕೆ ಇದೆ ಎನ್ನಲು ಮರೆಯುವುದಿಲ್ಲ.
ಇತ್ತೀಚೆಗೆ ಚಿತ್ರದ ಥೀಮ್ ಸಾಂಗ್ವೊಂದನ್ನು ಬಿಡುಗಡೆ ಮಾಡಲಾಯಿತು. ಚಿತ್ರದಲ್ಲಿ ನಟಿಸಿರುವ ರೆಹಮಾನ್ಗೂ ಇದೊಂದು ವಿಭಿನ್ನ ಬಗೆಯ ಚಿತ್ರವಾಗಿ ಪ್ರೇಕ್ಷಕರಿಗೆ ಇಷ್ಟವಾಗುವ ವಿಶ್ವಾಸವಿದೆ. ಉಳಿದಂತೆ ಚಿತ್ರದಲ್ಲಿ ಹಿರಿಯ ನಟರಾದ ಉಮೇಶ್, ಮನ್ದೀಪ್ರಾಯ್, ಆವಂತಿಕ, ಆರ್ಯನ್, ನೇಹಾ ಪಾಟೀಲ್, ಪ್ರಶಾಂತ್ ಸಿದ್ದಿ, ರಾಮಕೃಷ್ಣ, ರೂಪಾದೇವಿ, ತಬಲ ನಾಣಿ, ರೊಹೀತ್, ಸುನೇತ್ರ ಪಂಡಿತ್, ಸುಚಿತ್ರ, ನಿರಂಜನ್, ರಾಜೇಶ್ ರಾವ್, ಸೋನು, ದಯಾನಂದ್, ಗುರುರಾಜ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಚಿತ್ರದ ವಿಶೇಷ ಜೋಡಿಯಾಗಿ ಬಾಲಿವುಡ್ನ ಖ್ಯಾತ ನಟ ಜಾನಿ ಲೀವರ್ ಹಾಗೂ ಸಾಧುಕೋಕಿಲ ಅಭಿನಯಿಸಿದ್ದಾರೆ. ಚಿತ್ರದ ದೃಶ್ಯಗಳನ್ನು ಹೆಚ್.ಸಿ ವೇಣು ಛಾಯಾಗ್ರಹಣ, ಸಾಗರ್ ಸಂಗೀತ, ಉಮಾ ಶಂಕರ್ ಬಾಬು ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಉಳಿದಂತೆ ದಿನೇಶ್ ಕಲಾ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
Ritanya Vijay; ದುನಿಯಾ ವಿಜಯ್ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ
DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್ನಲ್ಲಿ ಡೆವಿಲ್ ಬರೋದು ಪಕ್ಕಾ: ದರ್ಶನ್
Kannada Cinema; ರಿಲೀಸ್ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್ಗೆ ಯಶ ನಾಯಕಿ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ