ಮಾಲ್ಗುಡಿ ಡೇಸ್‌ನಲ್ಲಿ ಗೋಲ್ಡನ್ ಕನಸು

ಚಿನ್ನಾರಿ ಮುತ್ತನ ನಿರೀಕ್ಷೆಯ ಸಿನ್ಮಾ

Team Udayavani, Jan 3, 2020, 5:39 AM IST

26

ನಾಯಕನನ್ನು ಇಲ್ಲಿ ಸುಮಾರು 75 ವರ್ಷದ ವ್ಯಕ್ತಿಯನ್ನಾಗಿಸಲು ಸಾಕಷ್ಟು ಯೋಚಿಸಿ, ಚರ್ಚಿಸಿ ಒಳ್ಳೆಯ ಮೇಕಪ್‌ ಮ್ಯಾನ್‌ ಹುಡುಕಿ ಕರೆತರಲಾಗಿದೆ. ಪ್ರತಿ ದಿನ ಈ ಮೇಕಪ್‌ಗಾಗಿಯೇ ಸುಮಾರು 4 ತಾಸು ಸಮಯ ಬೇಕಾಗುತ್ತಿತ್ತು. ನಾಯಕನ ಮುಖಕ್ಕೆ ಹೋಲಿಕೆಯಾಗುವ ಮೇಕಪ್‌ ಹಾಗು ಮೋಲ್ಡ್‌ಗೆ ಒಂದು ತಿಂಗಳ ತಯಾರಿ ಬೇಕು…

ವಿಜಯರಾಘವೇಂದ್ರ ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ಮಾಡಿಕೊಂಡು ಬಂದ ಪಾತ್ರಗಳಿಗೆ ಹೋಲಿಸಿದರೆ, ಇಲ್ಲೊಂದು ಚಿತ್ರದ ಪಾತ್ರ ವಿಭಿನ್ನ ಮತ್ತು ವಿನೋದ ಎನ್ನಬಹುದು. ಅಷ್ಟರಮಟ್ಟಿಗೆ ಅವರು ಈ ಬಾರಿ ಹೊಸ ಆಲೋಚನೆಯುಳ್ಳ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದು ವಿಶೇಷ. ಆ ಚಿತ್ರ ಬೇರಾವುದು ಅಲ್ಲ, “ಮಾಲ್ಗುಡಿ ಡೇಸ್‌’. ಈಗಾಗಲೇ ಚಿತ್ರೀಕರಣ ಪೂರೈಸಿರುವ ಈ ಚಿತ್ರ ಜನವರಿ ಕೊನೆಯ ವಾರದಲ್ಲಿ ತೆರೆಗೆ ಬರಲಿದೆ.

ಅಂದಹಾಗೆ, “ಮಾಲ್ಗುಡಿ ಡೇಸ್‌’ ಅಂದಾಕ್ಷಣ ಶಂಕರ್‌ನಾಗ್‌ ನೆನಪಾಗುತ್ತಾರೆ. ಕಾರಣ, “ಮಾಲ್ಗುಡಿ ಡೇಸ್‌’ ಎಂಬ ಧಾರಾವಾಹಿಯನ್ನು ಶಂಕರ್‌ನಾಗ್‌ ನಿರ್ದೇಶಿಸಿ ನಟಿಸಿ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಈಗ ಅದೇ ಹೆಸರಿನ “ಮಾಲ್ಗುಡಿ ಡೇಸ್‌’ ಚಿತ್ರ ಆಗಿದೆಯಾದರೂ, ಅದಕ್ಕೂ ಇದಕ್ಕೂ ಯಾವ ಸಂಬಂಧವಿಲ್ಲ. ಈಗಾಗಲೇ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದ್ದು, ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಚಿತ್ರವನ್ನು ಕಿಶೋರ್‌ ಮೂಡುಬಿದ್ರೆ ನಿರ್ದೇಶಿಸಿದ್ದಾರೆ. ಆ ಬಗ್ಗೆ ಹೇಳುವ ಕಿಶೋರ್‌ ಮೂಡುಬಿದ್ರೆ, : “ಮಾಲ್ಗುಡಿ ಎಂಬ ಊರಲ್ಲಿ ನಡೆಯುವ ಕಾಲ್ಪನಿಕ ಕಥೆ ಇದು. ಮುಖ್ಯವಾಗಿ ಈ ಚಿತ್ರ ನೆನಪುಗಳ ಸುತ್ತ ಸಾಗಲಿದ್ದು, ಚಿತ್ರ ನೋಡುವ ಪ್ರತಿಯೊಬ್ಬರಿಗೂ ಇದು ತಮ್ಮ ಸುತ್ತಮುತ್ತಲಿನಲ್ಲಿ ನಡೆದ ಕಥೆಯೇನೋ ಎಂಬ ಭಾಸವಾಗುತ್ತದೆ. ಈ ಚಿತ್ರದ ಹೈಲೈಟ್‌ ಅಂದರೆ ವಿಜಯ ರಾಘವೇಂದ್ರ ಅವರು 75 ವರ್ಷ ವ್ಯಕ್ತಿಯಾಗಿ ಕಾಣಿಸಿಕೊಂಡಿರುವುದು. ಪ್ರಾಸ್ಥೆಟಿಕ್‌ ಮೇಕಪ್‌ ಮೂಲಕ ಅವರೊಬ್ಬ ಸಾಹಿತಿಯಾಗಿ ಮೊದಲ ಬಾರಿಗೆ ನಟಿಸಿದ್ದಾರೆ. ಚಿತ್ರದುದ್ದಕ್ಕೂ ವಿಜಯ ರಾಘವೇಂದ್ರ ಅವರು ವಯಸ್ಸಾದ ವ್ಯಕ್ತಿಯ ಗೆಟಪ್‌ನಲ್ಲೇ ಕಾಣುತ್ತಾರೆ. ಕೇರಳ ಮೂಲದ ರೋಶನ್‌ ಆ ಮೇಕಪ್‌ ಮಾಡಿದ್ದಾರೆ. ಇದು ಬಿಟ್ಟರೆ, ಇದರ ನಡುವೆ ಬೇರೆ ಗೆಟಪ್‌ ಇದ್ದರೂ, ಅದು ಸಹ ವಿನೂತನವಾಗಿಯೇ ಇರಲಿದೆ. ಅದನ್ನು ತೆರೆ ಮೇಲೆ ನೋಡಬೇಕೆಂಬುದು ನಿರ್ದೇಶಕರ ಹೇಳಿಕೆ.

ವಿಜಯರಾಘವೇಂದ್ರ ಅವರ ಸಿನಿಜರ್ನಿಯಲ್ಲಿ ಇದೊಂದು ಹೊಸಬಗೆಯ ಚಿತ್ರ ಮತ್ತು ಪಾತ್ರ ಎನ್ನುವ ನಿರ್ದೇಶಕರು, ನಾಯಕನನ್ನು ಇಲ್ಲಿ ಸುಮಾರು 75 ವರ್ಷದ ವ್ಯಕ್ತಿಯನ್ನಾಗಿಸಲು ಸಾಕಷ್ಟು ಯೋಚಿಸಿ, ಚರ್ಚಿಸಿ ಒಳ್ಳೆಯ ಮೇಕಪ್‌ ಮ್ಯಾನ್‌ ಹುಡುಕಿ ಕರೆತರಲಾಗಿದೆ. ಪ್ರತಿ ದಿನ ಈ ಮೇಕಪ್‌ಗಾಗಿಯೇ ಸುಮಾರು 4 ತಾಸು ಸಮಯ ಬೇಕಾಗುತ್ತಿತ್ತು. ನಾಯಕನ ಮುಖಕ್ಕೆ ಹೋಲಿಕೆಯಾಗುವ ಮೇಕಪ್‌ ಹಾಗು ಮೋಲ್ಡ್‌ಗೆ ಒಂದು ತಿಂಗಳ ತಯಾರಿ ಬೇಕು. ವಿಜಯರಾಘವೇಂದ್ರ ಅವರು ಪಾತ್ರಕ್ಕೆ ಸಾಕಷ್ಟು ತಯಾರಿ ನಡೆಸಿದ್ದಾರೆ. ಅಷ್ಟೇ ಪ್ರೀತಿಯಿಂದ ಆ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ತೀರ್ಥಹಳ್ಳಿ, ಮಂಗಳೂರು, ಪಾಂಡಿಚೇರಿ, ಬಾಳೆಹೊನ್ನೂರು, ಕಳಸ, ಶೃಂಗೇರಿ, ಆಗುಂಬೆ ಸುತ್ತಮುತ್ತಲ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ರತ್ನಾಕರ್‌ ನಿರ್ಮಾಪಕರು.

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.