ಒಳ್ಳೆಯದು-ಕೆಟ್ಟದರ ಸಮ್ಮಿಲನ


Team Udayavani, Jan 18, 2019, 12:30 AM IST

23.jpg

“ಗರ’ ಚಿತ್ರದ ಆಡಿಯೋ ಮತ್ತು ಟ್ರೇಲರ್‌ ಇತ್ತೀಚೆಗೆ ಅದ್ಧೂರಿಯಾಗಿ ಹೊರಬಂದಿದೆ. ನಟಿ ತಾರಾ ಅನುರಾಧ ಮತ್ತು ಗಾಯಕಿ ಮಂಜುಳಾ ಗುರುರಾಜ್‌ ಕವಡೆ  ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಟ ಶಿವರಾಜಕುಮಾರ್‌ ಚಿತ್ರದ ಟ್ರೇಲರ್‌ನ್ನು ಬಿಡುಗಡೆಗೊಳಿಸಿದರು. 

ಬಳಿಕ ಮಾತನಾಡಿದ ಶಿವರಾಜಕುಮಾರ್‌, “ನಾನು ಮೊದಲಿನಿಂದಲೂ ನಟ ಜಾನಿ ಲಿವರ್‌ ಅವರ ಅಭಿಮಾನಿ. ಅವರ ಸಿನಿಮಾಗಳನ್ನು, ಅವರ ಹಾಸ್ಯ ಪ್ರವೃತ್ತಿಯನ್ನು ತುಂಬ ಎಂಜಾಯ್‌ ಮಾಡುತ್ತೇನೆ. ರೆಹಮಾನ್‌ ಸಿಕ್ಕಾಗಲೆಲ್ಲಾ ಯಾವಾಗ ಹೀರೋ ಆಗುತ್ತಿಯಾ ಅಂತ ಕೇಳುತ್ತಿದ್ದೆ. ಸಾಧುಕೋಕಿಲ ನೋಡಿದರೆ ನಗುತರಿಸುತ್ತದೆ. ವೇಣು ಕ್ಯಾಮರ ಕೆಲಸ ಚಿತ್ರದಲ್ಲಿ ಅದ್ಭುತವಾಗಿದೆ. ಚಿತ್ರರಂಗದಲ್ಲಿ ಯಾರನ್ನು ಕೀಳಾಗಿ ನೋಡಬಾರದು. ಇಲ್ಲಿ ಯಾರು ಏನಾಗುತ್ತಾರೆಂದು ಯಾರಿಗೂ ತಿಳಿಯದು. ಹೊಸದಾಗಿ ಬರುವವರನ್ನು ನಾವು ಪ್ರೋತ್ಸಾಹಿಸಬೇಕು. ಸಿನಿಮಾದಲ್ಲಿ ಯಾವುದು ದೊಡ್ಡದು, ಚಿಕ್ಕದು ಅಂತಿರುವುದಿಲ್ಲ. ಪ್ರೇಕ್ಷಕ ಇಷ್ಟಪಟ್ಟರೆ ಚಿತ್ರ ನಮ್ಮನ್ನು ಎಲ್ಲಿಗೋ ತೆಗೆದುಕೊಂಡು ಹೋಗುತ್ತದೆ’ ಎಂದರು.  

ಚಿತ್ರದ ಟೈಟಲ್‌ ಮತ್ತು ಸಬೆjಕ್ಟ್ ಬಗ್ಗೆ ಮಾತನಾಡಿದ ನಿರ್ದೇಶಕ ಕೆ.ಆರ್‌ ಮುರಳಿ ಕೃಷ್ಣ, “ಪ್ರಾರಂಭದಲ್ಲಿ “ಗರ’ ಶೀರ್ಷಿಕೆ ಕೇಳಿದಾಗ ಕೆಲವರು ನಕಾರಾತ್ಮಕ ಸಂದೇಶ ತರುತ್ತದೆಂದು ಹೇಳಿದರು.  

ನೆಗಟಿವ್‌ನಿಂದ ಪಾಸಿಟಿವ್‌ ಹುಡುಕುವ ಮನುಷ್ಯನಾಗಿದ್ದರಿಂದ, ಇದೇ ಸೂಕ್ತವಾದ ಶೀರ್ಷಿಕೆ ಎಂದೆನಿಸಿತು. ನಾವುಗಳು ಸ್ವಾರ್ಥಕ್ಕಾಗಿ ಗರ ಹಾಕುತ್ತೇವೆ. ಆದರೆ ದೇವರು ಹಾಕುವ “ಗರ’ದಿಂದ ಯಾರೂ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಪ್ರತಿಯೊಬ್ಬರಲ್ಲೂ ಎರಡು ಮನಸ್ಸುಗಳು ಇರುತ್ತವೆ. ಒಳ್ಳೆಯವನು ಕೆಟ್ಟವನಾಗಬಹುದು. ಅದೇ ರೀತಿಯಲ್ಲಿ ಕೆಟ್ಟವನೂ ಒಳ್ಳೆಯವನಾಗಬಹುದು. ಕಥೆಯಲ್ಲಿ ಬರುವ ರಂಗಸ್ವಾಮಿ, ಭಗೀರಥ ಎರಡು ಪಾತ್ರಗಳಲ್ಲಿ ಯಾರು ಯಾರ ಮೇಲೆ “ಗರ’ ಹಾಕುತ್ತಾರೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಜಾನಿ ಲಿವರ್‌ ಅವರಂಥ ದೊಡ್ಡ ಕಲಾವಿದರು ಚಿತ್ರದಲ್ಲಿ ನಟಿಸಿದ್ದರಿಂದ ಚಿತ್ರಕ್ಕೆ ತೂಕ ಬಂದಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.  

ಇನ್ನು ತಮ್ಮ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡಿದ ನಟ ಜಾನಿ ಲಿವರ್‌, “ನನಗೆ ಕನ್ನಡದಲ್ಲಿ ಇದೊಂದು ಹೊಸಥರದ ಅನುಭವ ಕೊಟ್ಟ ಸಿನಿಮಾ. ನೋಡುಗರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆಯಿದೆ. ಪ್ರೇಕ್ಷಕರು ಸಿನಿಮಾ ನೋಡಿ ಖುಷಿಪಟ್ಟರೆ ನಮ್ಮ ಪ್ರಯತ್ನ ಸಾರ್ಥಕವಾದಂತೆ’ ಎಂದರು. ಸಮಾರಂಭದಲ್ಲಿ ಹಾಜರಿದ್ದ ನಟ ಸಾಧು ಕೋಕಿಲ, ನಟಿ ನೇಹಾ ಪಾಟೀಲ್‌ ಮತ್ತಿತರರು ಚಿತ್ರದ ಬಗ್ಗೆ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಂಡರು. 

“ಗರ’ ಚಿತ್ರದ ಹಾಡುಗಳಿಗೆ ಮಂಜುಳಾ ಗುರುರಾಜ್‌ ಪುತ್ರ ಸಾಗರ್‌ ಗುರುರಾಜ್‌ ಸಂಗೀತ ಸಂಯೋಜಿಸಿದ್ದಾರೆ. ಸುಮಾರು ಎರಡು ವರ್ಷಗಳ ಹಿಂದೆಯೇ ಸೆಟ್ಟೇರಿದ್ದ “ಗರ’ ಚಿತ್ರ ಅಂತಿಮವಾಗಿ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿದ್ದು, ಮುಂಬರುವ 
ಮಾರ್ಚ್‌ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ. ಚಿತ್ರದಲ್ಲಿ   ನೇಹಾ ಪಾಟೀಲ್‌, ಪ್ರದೀಪ್‌ ಆರ್ಯನ್‌, ತಬಲನಾಣಿ, ಅವಂತಿಕಾ ಮೋಹನ್‌ ನಟಿಸಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.