ಗೂಗಲ್‌ ಡೈರೆಕ್ಟರ್‌!

ನೋಡ್ತಾ ನೋಡ್ತಾ ಸಿನಿಮಾ ಮಾಡಿದ್ರು...

Team Udayavani, Jun 21, 2019, 5:00 AM IST

27

ಕನ್ನಡದಲ್ಲಿ “ಕಾಮನಬಿಲ್ಲು’ ಚಿತ್ರವನ್ನು ನೀವೆಲ್ಲ ನೋಡಿರಬಹುದು. ವರನಟ ಡಾ. ರಾಜಕುಮಾರ್‌, ಅನಂತನಾಗ್‌, ಸರಿತಾ ಮೊದಲಾದ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದ ಈ ಚಿತ್ರ 80ರ ದಶಕದ ಸೂಪರ್‌ ಹಿಟ್‌ ಚಿತ್ರಗಳಲ್ಲಿ ಒಂದಾಗಿತ್ತು. ಈಗ ಅದೇ “ಕಾಮನಬಿಲ್ಲು’ ಅರ್ಥವನ್ನೇ ನೀಡುವ “ಮಳೆಬಿಲ್ಲು’ ಎನ್ನುವ ಹೆಸರಿನಲ್ಲಿ ಚಿತ್ರವೊಂದು ತೆರೆಗೆ ಬರುತ್ತಿದೆ.

ಅಂದಹಾಗೆ ಈಗ ತೆರೆಗೆ ಬರುತ್ತಿರುವ “ಮಳೆಬಿಲ್ಲು’ ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ ಚಿತ್ರ. ಈ ಚಿತ್ರಕ್ಕೆ ನಾಗರಾಜ್‌ ಹಿರಿಯೂರು ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. “ಅನನ್ಯ ಸಿನಿ ಎಂಟರ್‌ಪ್ರೈಸಸ್‌’ ಬ್ಯಾನರ್‌ನಲ್ಲಿ ನಿಂಗಪ್ಪ. ಎಲ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಈ ಹಿಂದೆ “ಕಾ’ ಚಿತ್ರದಲ್ಲಿ ಅಭಿನಯಿಸಿದ್ದ ಶರತ್‌, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿ­ಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಸಂಜನಾ ಆನಂದ್‌, ನಯನಾ, ಸೌಮ್ಯ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಕಿರ್ಲೋಸ್ಕರ್‌ ಸತ್ಯನಾರಾಯಣ್‌, ಶ್ರೀನಿವಾಸ ಪ್ರಭು, ಆಂಜನಪ್ಪ, ಚಂದನ್‌, ಮೈಕೋ ನಾಗರಾಜ್‌, ದಮಯಂತಿ, ರವಿತೇಜ್‌, ಆನಂದ್‌ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಈಗಾಗಲೇ ಶೂಟಿಂಗ್‌, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣ­ಗೊಳಿಸಿರುವ “ಮಳೆಬಿಲ್ಲು’ ಚಿತ್ರತಂಡ, ಸದ್ಯ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ, ಕಾರ್ಯದರ್ಶಿ ಭಾ.ಮಾ ಹರೀಶ್‌, ಖಜಾಂಚಿ ಕೆ.ಎಂ. ವೀರೇಶ್‌, ಶಿಲ್ಪಾ ಶ್ರೀನಿವಾಸ್‌ ಮೊದಲಾದವರು ಹಾಜರಿದ್ದು “ಮಳೆಬಿಲ್ಲು’ ಚಿತ್ರದ ಟ್ರೇಲರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ನಾಗರಾಜ್‌ ಹಿರಿಯೂರು, “ಈ ಚಿತ್ರದಲ್ಲಿ ಕಥೆಯೇ ಹೀರೋ. ನಾನು ಕ್ರೇಜಿಸ್ಟಾರ್‌ ರವಿಚಂದ್ರನ್‌ ಅಭಿಮಾನಿ. ಗೂಗಲ್‌ನಲ್ಲೇ ಚಿತ್ರ ನಿರ್ದೇಶನ ಮಾಡುವುದನ್ನು ಕಲಿತುಕೊಂಡು ನನ್ನ ಮೊದಲ ಚಿತ್ರವನ್ನು ನಿರ್ದೇಶಿಸಿದ್ದೇನೆ. ಹುಡುಗರ ಜೀವನ ಬಿಳಿ ಹಾಳೆ ಇದ್ದಂತೆ. ಅವರ ಲೈಫ್ನಲ್ಲಿ ಹುಡುಗಿಯೊಬ್ಬಳು ಬಂದಾಗ ಅವರ ಜೀವನದಲ್ಲಿ “ಮಳೆಬಿಲ್ಲು’ ಬಂದ ಹಾಗಾಗುತ್ತದೆ. ಆ “ಮಳೆಬಿಲ್ಲು’ ಯಾರು ಅನ್ನೋದೆ ಈ ಚಿತ್ರ. ಇದರಲ್ಲೊಂದು ಪ್ರೇಮಕಥೆ ಇದೆ. “ಮಳೆಬಿಲ್ಲು’ನ್ನು ಒಂದು ಹೆಣ್ಣಿಗೆ ಹೋಲಿಕೆ ಮಾಡಿದ್ದೇವೆ. ಹೈಸ್ಕೂಲ್‌ನಲ್ಲಿ ನಾನು ಕಂಡ ಕೆಲ ಘಟನೆಗಳನ್ನು ಆಧರಿಸಿ ಈ ಚಿತ್ರ ನಿರ್ದೇಶಿಸಿದ್ದೇನೆ’ ಎಂದರು.

ನಿರ್ಮಾಪಕ ನಿಂಗಪ್ಪ ಎಲ್‌. ಮಾತನಾಡಿ, “ಈ ಚಿತ್ರವನ್ನು ಕಳೆದ ವರ್ಷ ಆರಂಭಿಸಿದ್ದೆವು. ಈಗಿನ
ಯೂಥ್ಸ್ಗೆ ಇಷ್ಟವಾಗುವ ಕಥೆ, ಲವ್‌ ಸ್ಟೋರಿ ಜೊತೆಗೆ ಒಂದು ಟ್ವಿಸ್ಟ್‌ ಎಲ್ಲವೂ ಚಿತ್ರದಲ್ಲಿದೆ. ಚಿತ್ರ ಸದ್ಯ ಬಿಡುಗಡೆಗೆ ಸಿದ್ಧವಾಗಿದ್ದು ಸೆನ್ಸಾರ್‌ ಮುಂದಿದೆ. ಇದೇ ಜುಲೈನಲ್ಲಿ ರಿಲೀಸ್‌ ಮಾಡುವ ಯೋಜನೆ ಇದೆ’ ಎಂದು ಹೇಳಿಕೊಂಡರು.

ಕಾರ್ಯಕ್ರಮದಲ್ಲಿ ಹಾಜರಿದ್ದ ನಾಯಕ ಶರತ್‌ನಾಯಕ ಶರತ್‌ ಮಾತನಾಡಿ, “ಹೈಸ್ಕೂಲ್‌ ಹುಡುಗ ಹಾಗೂ ಕಾಲೇಜ್‌ ವಿದ್ಯಾರ್ಥಿಯಾಗಿ ಚಿತ್ರದಲ್ಲಿ ಎರಡು ಶೇಡ್‌ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದು ಹೇಳಿದರು. ನಾಯಕಿ ಸಂಜನಾ ಆನಂದ್‌, ಭಾರ್ಗವಿ ಎಂಬ ಬೋಲ್ಡ್‌ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ವೇದಿಕೆಯಲ್ಲಿ ನಟಿಯರಾದ ನಯನಾ, ಸೌಮ್ಯ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.

ಸಂಗೀತ ನಿರ್ದೇಶಕ ಗಣೇಶ್‌ ನಾರಾಯಣ್‌ ಮಾತನಾಡಿ “ಇದೊಂದು ಮ್ಯೂಸಿಕಲ್‌ ಲವ್‌ಸ್ಟೋರಿ. ಈ ಚಿತ್ರದಲ್ಲಿ 8 ಹಾಡುಗಳನ್ನು ಬರೆದ ನಂತರ ಟ್ಯೂನ್‌ ಮಾಡಿಕೊಂಡು 10 ಹಾಡುಗಳು ಈ ಚಿತ್ರದಲ್ಲಿದ್ದು, ಎಲ್ಲಾ ಹಾಡುಗಳು ಅದ್ಭುತವಾಗಿ ಮೂಡಿ ಬಂದಿವೆ’ ಎಂದು ಹೇಳಿದರು. “ಮಳೆಬಿಲ್ಲು’ ಚಿತ್ರಕ್ಕೆ ಸಿ. ನಾರಾಯಣ್‌ ಛಾಯಾಗ್ರಹಣ, ಸತೀಶ್‌ ಚಂದ್ರಯ್ಯ ಸಂಕಲನವಿದೆ. ಒಟ್ಟಾರೆ “ಮಳೆಬಿಲ್ಲು’ ಹೇಗಿರಲಿದೆ ಅನ್ನೋದು ಇದೇ ಮಾನ್ಸೂನ್‌ ವೇಳೆಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.