ಹಾಡಲ್ಲಿ ಗೋವಿಂದನ ಗುಣಗಾನ: ಸುಮಂತ್ ನಟನೆಯ ಹೊಸ ಚಿತ್ರ
Team Udayavani, Mar 26, 2021, 4:33 PM IST
ಕಾಮಿಡಿ ಕಂ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಗೋವಿಂದ ಗೋವಿಂದ’ ಚಿತ್ರ ತೆರೆಗೆ ಬರಲು ತಯಾರಾಗಿದೆ ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಆಡಿಯೋವನ್ನು ಬಿಡುಗಡೆ ಮಾಡಿದೆ. ಶಾಸಕ ಕೆ.ಎನ್ ರಾಜಣ್ಣ ಮತ್ತು ನಿರ್ದೇಶಕ ಲಿಂಗದೇವರು ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದು, ಚಿತ್ರದ ಹಾಡುಗಳ ಅನಾವರಣ ಮಾಡಿದರು.
ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ರವಿ ಆರ್. ಗರಣಿ, “ಈ ಸಿನಿಮಾ ಶುರುವಾಗಿದ್ದು ಒಂದು ಆಕಸ್ಮಿಕ. ಮೊದಲು ವಿಜಯ್ ಸೇತುಪತಿ ಸಿನಿಮಾ ಮಾಡುವ ಪ್ಲಾನ್ ಇತ್ತು. ಕೊನೆಗೆ ಕೊರೊನಾದಿಂದ ಎಲ್ಲವೂ ಬದಲಾಯಿತು. ಆಗ ಶುರುವಾಗಿದ್ದೇ ಈ ಸಿನಿಮಾ, ತುಂಬ ಅಚ್ಚುಕಟ್ಟಾಗಿ ಚೆನ್ನಾಗಿ ಮೂಡಿಬಂದಿದೆ’ ಎಂದರು.
ಚಿತ್ರದ ಬಗ್ಗೆ ಮಾತನಾಡಿ ನಿರ್ದೇಶಕ ತಿಲಕ್, “ಇದೊಂದು ಪಕ್ಕಾ ಕೌಟುಂಬಿಕ ಕಥಾ ಹಂದರ ಹೊಂದಿರುವ ಸಿನಿಮಾ. ಕಾಮಿಡಿ, ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ. ಸಿನಿಮಾದಲ್ಲಿ ಒಟ್ಟು ಆರು ಹಾಡುಗಳಿವೆ. ಪ್ರೇಕ್ಷಕರಿಗೆ ಸಿನಿಮಾ ಸಂಪೂರ್ಣ ಮನರಂಜನೆ ನೀಡಲಿದೆ’ ಎಂದರು.
ನಾಯಕ ನಟರಾದ ಸುಮಂತ್ ಶೈಲೇಂದ್ರ, ರೂಪೇಶ್ ಶೆಟ್ಟಿ, ನಾಯಕಿ ಕವಿತಾ ಗೌಡ, ಸಂಗೀತ ನಿರ್ದೇಶಕ ಹಿತನ್ ಹಾಸನ್ ಚಿತ್ರದ ಬಗ್ಗೆ ತಮ್ಮ ಅನುಭವ ಮತ್ತು ಅನಿಸಿಕೆ ಹಂಚಿಕೊಂಡರು. “ಗೋವಿಂದ ಗೋವಿಂದ’ ಚಿತ್ರದಲ್ಲಿ ಸುಮಂತ್ ಶೈಲೇಂದ್ರ ಹಾಗೂ ರೂಪೇಶ್ ಶೆಟ್ಟಿ ನಾಯಕ ನಟರಾಗಿ ಕಾಣಿಸಿಕೊಂಡಿದ್ದು, ಕವಿತಾ ಗೌಡ, ಭಾವನಾ ಮೆನನ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಉಳಿದಂತೆ ಪವನ್ ಕುಮಾರ್, ವಿಜಯ್ ಚೆಂಡೂರ್, ಅಚ್ಯುತ ಕುಮಾರ್, ವಿ. ಮನೋಹರ್, ಕೆ. ಮಂಜು, ಕಡ್ಡಿಪುಡಿ ಚಂದ್ರು, ಪದ್ಮಾ ವಾಸಂತಿ, ಶ್ರೀನಿವಾಸ ಪ್ರಭು, ಸುನೇತ್ರಾ ಪಂಡಿತ್, ಗೋವಿಂದೇ ಗೌಡ, ಯಮುನಾ ಶ್ರೀನಿಧಿ ಮುಂತಾದವರು “ಗೋವಿಂದ ಗೋವಿಂದ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರಕ್ಕೆ ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ರವಿಚಂದ್ರನ್ ಸಂಕಲನವಿದೆ. ಪ್ರದೀಪ್ ವರ್ಮಾ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. “ಶೈಲೇಂದ್ರ ಪ್ರೊಡಕ್ಷನ್ಸ್’, “ಎಲ್.ಜಿ. ಕ್ರಿಯೇಷನ್ಸ್’, “ರವಿ ಗರಣಿ ಪ್ರೊಡಕ್ಷನ್ಸ್’ ಸಹಯೋಗ ದೊಂದಿಗೆ ನಿರ್ಮಾಣವಾಗಿರುವ “ಗೋವಿಂದ ಗೋವಿಂದ’ ಚಿತ್ರಕ್ಕೆ ಶೈಲೇಂದ್ರ ಬಾಬು, ಕಿಶೋರ್ ಎಂ.ಕೆ ಮಧುಗಿರಿ ಹಾಗೂ ರವಿ ಆರ್. ಗರಣಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಅಂದಹಾಗೆ, “ಗೋವಿಂದ ಗೋವಿಂದ’ ಚಿತ್ರ ಇದೇ ಏ. 16ರಂದು ಬಿಡುಗಡೆ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ