ಹೀರೋ ನಂಬರ್‌ ಒನ್‌: ಡಾ. ಅಬ್ದುಲ್‌ ಕಲಾಂ ಕುರಿತ ಮಕ್ಕಳ ಚಿತ್ರ


Team Udayavani, Jan 26, 2018, 12:17 PM IST

26-36.jpg

ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್‌ ಕಲಾಂ ಕುರಿತಾಗಿ ಸಾಕಷ್ಟು ಪುಸ್ತಕಗಳು, ಅವರ ಜೀವನದ ಕುರಿತ ಬರಹಗಳು ಬಂದಿವೆ. ಅವರ ಜೀವನ ಅನೇಕರಿಗೆ ಪ್ರೇರಣೆ ಎಂದರೆ ತಪ್ಪಿಲ್ಲ. ಈಗ ಕಲಾಂ ಕುರಿತಾಗಿ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗಿದೆ. ಅದು “ಮೈ ಹೀರೋ ಕಲಾಂ’. “ಮೈ ಹೀರೋ ಕಲಾಂ’ ಎಂಬ ಮಕ್ಕಳ ಚಿತ್ರವೊಂದು ಸದ್ದಿಲ್ಲದೇ ತಯಾರಾಗಿದ್ದು, ಈಗ ಸೆನ್ಸಾರ್‌ ಅಂಗಳದಲ್ಲಿದೆ. ಅನೇಕ ಅನೇಕ ಕಮರ್ಷಿಯಲ್‌ ಚಿತ್ರಗಳನ್ನು ನಿರ್ಮಿಸಿರುವ ಅಣಜಿ ನಾಗರಾಜ್‌ ಮೊದಲ ಬಾರಿಗೆ “ಮೈ ಹೀರೋ ಕಲಾಂ’ ಎಂಬ ಮಕ್ಕಳ ಚಿತ್ರವನ್ನು ನಿರ್ಮಿಸಿದ್ದಾರೆ. ಶಿವು ಹಿರೇಮಠ ಈ ಚಿತ್ರದ ನಿರ್ದೇಶಕರು. 

ಈ ಚಿತ್ರದಲ್ಲಿ ಕಲಾಂ ಅವರ ಬಾಲ್ಯ, ಬದುಕು, ಅವರ ಶಾಲಾ ದಿನಗಳು, ಯಾವುದೇ ಬೇಧ-ಭಾವ ಇಲ್ಲದೇ ಬೆರೆಯುತ್ತಿದ್ದ ರೀತಿ, ಮುಂದೆ ಅವರು ಹಳ್ಳಿಯಿಂದ ದಿಲ್ಲಿ ಮಟ್ಟಕ್ಕೆ ಬೆಳೆದ ಪರಿಯನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಮುಖ್ಯವಾಗಿ ಈ ಚಿತ್ರದಲ್ಲಿ ಮಕ್ಕಳಿಗೊಂದು ಸಂದೇಶ ಕೂಡಾ ಹೇಳಿದೆಯಂತೆ ಚಿತ್ರತಂಡ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅಥವಾ ಅನುತ್ತೀರ್ಣರಾದರೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಎಂಬುದನ್ನು ಈ ಚಿತ್ರದ ಮೂಲಕ ಹೇಳಿದ್ದಾರಂತೆ. ಜೊತೆಗೆ ಅಬ್ದುಲ್‌ ಕಲಾಂ ಅವರು ಹೇಗೆ ಇತತರಿಗೆ ಮಾದರಿಯಾಗಿದ್ದರು, ಸರಳವಾಗಿ ಹೇಗೆ ಬದುಕುತ್ತಿದ್ದರು ಎಂಬ ಅಂಶವನ್ನು ಈ ಚಿತ್ರದಲ್ಲಿ ಹೇಳಲಾಗಿದೆಯಂತೆ.  ನಿರ್ದೇಶಕ ಶಿವು ಹಿರೇಮಠ ಅವರಿಗೆ ಕಲಾಂ ಕುರಿತ ಸಿನಿಮಾವನ್ನು ನಿರ್ದೇಶಿಸಿದ ಖುಷಿ ಇದೆ. “ಈ ಚಿತ್ರದಲ್ಲಿ ಕಲಾಂ ಅವರ ಬಾಲ್ಯದ ಸಾಕಷ್ಟು ಅಂಶಗಳನ್ನು ಹೇಳಿದ್ದೇವೆ. ಇವೆಲ್ಲವೂ ಇಂದಿನ ಮಕ್ಕಳಿಗೆ ಪ್ರೇರಣೆಯಾಗಬಲ್ಲ ಅಂಶಗಳು’ ಎಂಬುದು ನಿರ್ದೇಶಕ ಶಿವು ಹಿರೇಮಠ.  

ಕಲಾಂ ಅವರ ಬಗೆಗಿನ ಪುಸ್ತಕ, ವಿಡಿಯೋ ಸೇರಿದಂತೆ ಅನೇಕ ವಿಷಯಗಳನ್ನು ನೋಡಿದ ಅಣಜಿಯವರಿಗೆ ಕಲಾಂ ಬಗ್ಗೆ ಸಿನಿಮಾ ನಿರ್ಮಿಸಬೇಕೆಂಬ ಮನಸ್ಸಾಯಿತಂತೆ. ತಾನು ಇಷ್ಟು ದಿನ ಮಾಡಿದ ಸಿನಿಮಾಗಳನ್ನು ಒಂದು ತಕ್ಕಡಿಯಲ್ಲಿ ಹಾಗೂ “ಮೈ ಹೀರೋ ಕಲಾಂ’ ಅನ್ನು ಮತ್ತೂಂದು ತಕ್ಕಡಿಯಲ್ಲಿಟ್ಟರೆ ಈ ಸಿನಿಮಾವೇ ಜಾಸ್ತಿ ಎಂಬುದು ಅಣಜಿ ಮಾತು. ಚಿತ್ರದಲ್ಲಿ ಚಿನ್ಮಯ್‌ ಹಾಗೂ ದೀಪಕ್‌ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಂಗಡಿ ಶಾಂತಪ್ಪ ಅವರ ಕಥೆಗೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಪಳನಿ ಡಿ ಸೇನಾಪತಿ ಹಿನ್ನೆಲೆ ಸಂಗೀತ, ಆನಂದ್‌ ಛಾಯಾಗ್ರಹಣ ಚಿತ್ರಕ್ಕಿದೆ. 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.