ರಾಬರ್ಟ್‌ ಮೇಲೆ ಆಶಾ ಭಾವನೆ

ನವನಟಿಯ ಕಣ್ತುಂಬ ಕನಸು...

Team Udayavani, Jan 31, 2020, 5:50 AM IST

youth-26

ಸ್ಟಾರ್‌ಗಳ ಸಿನಿಮಾ ಮೂಲಕ ಎಂಟ್ರಿಕೊಡುವ ನಾಯಕಿ ನಟಿಯರ ಭವಿಷ್ಯದ ಕನಸು ಕೂಡಾ ದೊಡ್ಡದಾಗಿರುತ್ತದೆ. ಅದಕ್ಕೆ ಕಾರಣ ತಾವು ಲಾಂಚ್‌ ಆಗುತ್ತಿರುವ ಸಿನಿಮಾ. ಚಿತ್ರರಂಗದಲ್ಲೊಂದು ನಂಬಿಕೆ ಇದೆ. ಅದೇನೆಂದರೆ ಸ್ಟಾರ್‌ ಸಿನಿಮಾ ಮೂಲಕ ಲಾಂಚ್‌ ಆದ ನಾಯಕಿ ನಟಿಯರು ಮುಂದೆ ಚಿತ್ರರಂಗದಲ್ಲಿ ಗಟ್ಟಿ ನೆಲೆಯೂರುತ್ತಾರೆ ಎಂಬ ವಿಶ್ವಾಸ. ಅದಕ್ಕೆ ಪೂರಕವಾಗಿ ಸ್ಟಾರ್‌ ಸಿನಿಮಾ ಮೂಲಕ ಪರಿಚಯವಾದ ನಾಯಕಿಯರು ಚಿತ್ರರಂಗದಲ್ಲಿ ಬಿಝಿಯಾಗಿದ್ದಾರೆ ಕೂಡಾ. ಈಗ ಈ ಮಾತು ಯಾಕೆ ಎಂದರೆ ಅದಕ್ಕೆ ಕಾರಣ “ರಾಬರ್ಟ್‌’. ದರ್ಶನ್‌ ನಾಯಕರಾಗಿರುವ “ರಾಬರ್ಟ್‌’ ಚಿತ್ರ ಈಗಾಗಲೇ ಚಿತ್ರೀಕರಣ ಮುಗಿಸಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಚಿತ್ರ ಏಪ್ರಿಲ್‌ನಲ್ಲಿ ತೆರೆಕಾಣಲಿದೆ. ಈ ಸಿನಿಮಾ ಮೂಲಕ ನಾಯಕಿಯೊಬ್ಬರು ಕನ್ನಡಕ್ಕೆ ಲಾಂಚ್‌ ಆಗುತ್ತಿದ್ದಾರೆ. ಆ ನಟಿ ಆಶಾ ಭಟ್‌.

ರಾಬರ್ಟ್‌’ ಚಿತ್ರಕ್ಕೆ ಆಶಾ ಭಟ್‌ ಎಂಬ ಹೊಸ ಹುಡುಗಿ ನಾಯಕಿಯಾಗಿ ಆಯ್ಕೆಯಾ ಗಿರುವ ವಿಚಾರ ನಿಮಗೆ ಗೊತ್ತೇ ಇದೆ. ಮೂಲತಃ ಭದ್ರಾವತಿ ಹುಡುಗಿ ಈಕೆ. 2014ರ ಮಿಸ್‌ ಸುಪ್ರಾ ನ್ಯಾಶನಲ್‌ ಪ್ರಶಸ್ತಿ ವಿಜೇತೆ ಯಾದ ಆಶಾ ಭಟ್‌, ಈಗಾಗಲೇ ಹಿಂದಿಯಲ್ಲಿ “ಜಂಗ್ಲಿ’ ಎಂಬ ಚಿತ್ರ ಮಾಡಿ ಕೊಂಚ ಅನುಭವ ಪಡೆದಿದ್ದಾರೆ. ಕನ್ನಡದ ಸ್ಟಾರ್‌ ನಟ ದರ್ಶನ್‌ ಜೊತೆ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಬಿಗ್‌ ಎಂಟ್ರಿ ಕೊಡುವ ಮೂಲಕ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕನ್ನಡದ ಮೊದಲ ಚಿತ್ರ ಇದಾಗಿದ್ದು, ಕನ್ನಡದಲ್ಲೇ ನೆಲೆ ಕಾಣುವ ಆಸೆ ಈ ಕನಸು ಕಂಗಳ ಚೆಲುವೆಯದ್ದು. ಈಗಾಗಲೇ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಂತದಲ್ಲಿರುವ ಈ ಚಿತ್ರದ ಮೇಲೆ ಆಶಾ ಭಟ್‌ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟಿದ್ದಾರೆ. ಈಗಾಗಲೇ ಬಿಡುಗಡೆ ಯಾಗಿರುವ ಫ‌ಸ್ಟ್‌ಲುಕ್‌, ಟೀಸರ್‌ ಮೂಲಕ ಸಿನಿಮಾದ ನಿರೀಕ್ಷೆ ಕೂಡಾ ಹೆಚ್ಚಿದೆ. ಈ ತರಹದ ಬಹುನಿರೀಕ್ಷಿತ ಚಿತ್ರಗಳ ಮೂಲಕ ಲಾಂಚ್‌ ಆದರೆ, ಮುಂದೆ ಚಿತ್ರರಂಗದಲ್ಲಿ ಅದೃಷ್ಟ ಖುಲಾಯಿ ಸುತ್ತದೆ ಎಂಬ ನಂಬಿಕೆ ಕೂಡಾ ಅವರಿಗಿದೆ.

ಆರಂಭದಲ್ಲಿ “ರಾಬರ್ಟ್‌’ ಚಿತ್ರಕ್ಕೆ ತೆಲುಗು ಮೂಲದ ಸ್ಟಾರ್‌ ನಟಿಯೊಬ್ಬಳು ನಾಯಕಿಯಾಗಲಿದ್ದಾರೆ. ತಮಿಳು ನಾಯಕಿಯೊಬ್ಬರು ಬರಲಿದ್ದಾರಂತೆ, ಹಾಗಂತೆ, ಹೀಗಂತೆ ಎಂಬ ಸುದ್ದಿಗಳೇ ಹರಡಿದವು. ಆದರೆ, ಅದ್ಯಾವುದೂ ಪಕ್ಕಾ ಆಗಲಿಲ್ಲ. ಕೊನೆಗೆ ಅಪ್ಪಟ ಕನ್ನಡತಿಯಾಗಿ “ರಾಬರ್ಟ್‌’ ತಂಡಕ್ಕೆ ಎಂಟ್ರಿಕೊಟ್ಟವರು ಆಶಾ. ಇನ್ನು, ಆಶಾ ಈಗಾಗಲೇ ಅಭಿಮಾನಿಗಳ ಜೊತೆ ತಮ್ಮ ತಮ್ಮ ಸಿನಿಮಾ ಅನಿಸಿಕೆಗಳನ್ನು ಕೂಡಾ ಹಂಚಿಕೊಳ್ಳಲಾರಂಭಿಸಿದ್ದಾರೆ. ಸಿನಿಮಾ ತಂಡದ ಜೊತೆಗಿರುವ ಒಂದಷ್ಟು ಫೋಟೋಗಳನ್ನು ಹಾಕಿ, “ನಾವು ಏನು ಮಾತನಾಡುತ್ತಿರಬಹುದೆಂದು ಊಹಿಸಿ’ ಎಂದು ಟ್ಯಾಗ್‌ಲೈನ್‌ ಬೇರೆ ಕೊಟ್ಟಿದ್ದಾರೆ. ಈ ಮೂಲಕ ಸಿನಿಮಾ ಬಿಡುಗಡೆಗೆ ಮುಂಚೆಯೇ ಅಭಿಮಾನಿಗಳ ಜೊತೆ ಆ್ಯಕ್ಟೀವ್‌ ಆಗಿದ್ದಾರೆ ಆಶಾ ಭಟ್‌.

ಇನ್ನು ದರ್ಶನ್‌ “ರಾಬರ್ಟ್‌’ ಚಿತ್ರದಲ್ಲಿ ಹನುಮನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿರುವ ಮೋಶನ್‌ ಪೋಸ್ಟರ್‌ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಚಿತ್ರದ ಎರಡನೇ ಮೋಷನ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ದರ್ಶನ್‌ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಆಂಜನೇಯ ಗೆಟಪ್‌ನಲ್ಲಿ ದರ್ಶನ್‌ ಕಾಣಿಸಿಕೊಂಡರೆ, ಹೆಗಲ ಮೇಲೆ “ಬಾಲ’ರಾಮನಾಗಿ ಮುಂಬೈ ಹುಡುಗ ಕಾಣಿಸಿಕೊಂಡಿದ್ದಾನೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.