ಹಾರರ್‌ ಡೇ! ಪ್ಯಾಟೆ ಹುಡ್ಗಿರ ಜನ್ಮಾಂತರದ ಕಥೆ


Team Udayavani, Sep 1, 2017, 6:30 AM IST

Womens-Day_(119).jpg

ಕನ್ನಡದಲ್ಲಿ ಮಹಿಳಾ ಪ್ರಧಾನ ಚಿತ್ರಗಳು ಹೊಸದೇನಲ್ಲ. ಆದರೆ, ಹುಡುಗಿಯರೇ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಚಿತ್ರಗಳ ಉದಾಹರಣೆ ಕೊಂಚ ಕಡಿಮೆ ಅನ್ನಬಹುದು. ಬಂದಿದ್ದರೂ, ಇತ್ತೀಚೆಗೆ ನಾಯಕಿಯರ ಚಿತ್ರಗಳು ಬಂದಿಲ್ಲ. ಆ ಸಾಲಿಗೆ ಈಗ “ವುಮೆನ್ಸ್‌ ಡೇ’ ಸೇರಿದೆ. ಇಲ್ಲಿ ಐವರು ನಾಯಕಿರಿದ್ದಾರೆ. ಹಾಗಂತ, ಅವರೆಲ್ಲರಿಗೂ ನಾಯಕರು ಇರುತ್ತಾರೆಯೇ ಎಂಬ ಪ್ರಶ್ನೆ ಎದುರಾಗೋದು ಸಹಜ. ಅದಕ್ಕೆ ಚಿತ್ರದಲ್ಲೇ ಉತ್ತರ ಸಿಗಲಿದೆ ಎಂಬುದು ಚಿತ್ರತಂಡದ ಹೇಳಿಕೆ. 

ಅಂದಹಾಗೆ, ಚಿತ್ರೀಕರಣ ಪೂರ್ಣಗೊಂಡು, ಈಗ ರಿಲೀಸ್‌ಗೆ ರೆಡಿಯಾಗಿದೆ. ಇತ್ತೀಚೆಗೆ ಚಿತ್ರದ ಬಗ್ಗೆ ಮಾಹಿತಿ ಕೊಡಲೆಂದೇ ನಿರ್ದೇಶಕ ಈಶ, ತಮ್ಮ ತಂಡದೊಂದಿಗೆ ಆಗಮಿಸಿದ್ದರು. ಇದ್ದದ್ದು ಎಂಟು ಮಂದಿ, ಎಲ್ಲರೂ ಒಂದೊಂದು ನಿಮಿಷ ಮಾತನಾಡಿ ಮುಗಿಸಿದರು. ಕೇವಲ ಹತ್ತೇ ನಿಮಿಷದಲ್ಲಿ ಪತ್ರಿಕಾಗೋಷ್ಠಿಗೂ ತೆರೆಬಿತ್ತು. ಆದರೆ, ಹತ್ತು ನಿಮಿಷದ ಮಾತುಗಳನ್ನು ಕೇಳ್ಳೋಕೆ, ಪತ್ರಕರ್ತರು ಕಾದಿದ್ದು ಬರೋಬ್ಬರಿ ಎರಡೂವರೆ ತಾಸು!

ಮೊದಲು ಮಾತಿಗೆ ನಿಂತದದ್ದು ನಿರ್ದೇಶಕ ಈಶ, “ಚಿತ್ರದ ಶೀರ್ಷಿಕೆಗೂ ಮಹಿಳಾ ದಿನಾಚರಣೆಗೂ ಸಂಬಂಧವಿಲ್ಲ. ಆದರೆ, ಇದು ಹೆಣ್ಣುಮಕ್ಕಳ ಕುರಿತಾದ ಕಥೆ. ಐವರು ನಾಯಕಿಯರ ನಡುವೆ ನಡೆಯುವಂತಹ ಸನ್ನಿವೇಶಗಳೇ ಚಿತ್ರದ ಜೀವಾಳ. ಸಿಟಿಯಲ್ಲಿರುವ ಐವರು ಹೆಣ್ಣುಮಕ್ಕಳು ಹಳ್ಳಿಗೆ ಬಂದಾಗ ನಡೆಯುವಂತಹ ವಿಚಿತ್ರ ಅನುಭವಗಳು ಚಿತ್ರದ ಹೈಲೈಟ್‌. ಐವರು ನಾಯಕಿಯರು ಒಂದು ಘಟನೆಯಲ್ಲಿ ಸಿಲುಕುತ್ತಾರೆ. ಅದರಿಂದ ಹೇಗೆ ಹೊರಬರುತ್ತಾರೆ ಎಂಬುದು ಸಸ್ಪೆನ್ಸು. ಇನ್ನು, ಇದೊಂದು ಪುನರ್ಜನ್ಮದ ಕಥೆ. ಮೊದಲರ್ಧ ಒಂದು ರೀತಿಯ ಕಥೆ ಸಾಗಿದರೆ, ದ್ವಿತಿಯಾರ್ಧ ಇನ್ನೊಂದು ರೀತಿಯ ಕಥೆ ತೆರೆದುಕೊಳ್ಳುತ್ತದೆ. ಸಾಗರ ಸುತ್ತಮುತ್ತ ಚಿತ್ರೀಕರಣವಾಗಿದೆ ಎನ್ನುತ್ತಾರೆ ಅವರು.

ಆರ್‌.ಜಿ.ಗೌಡ ಈ ಚಿತ್ರದ ನಿರ್ಮಾಪಕರು. ಅವರಿಗೆ ಇದು ಎರಡನೇ ಸಿನಿಮಾ. ಈ ಹಿಂದೆ ಅವರು “ಗೌರ್‌°ಮೆಂಟ್‌’ ಎಂಬ ಚಿತ್ರ ಮಾಡಿದ್ದರು. “ಪುನರ್ಜನ್ಮದ ಕಥೆಯಲ್ಲಿ ಸಾಕಷ್ಟು ತಿರುವುಗಳಿವೆ. ಸಾಯಿಕುಮಾರ್‌ ಇಲ್ಲೊಂದು ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ಸೆನ್ಸಾರ್‌ ಮಂಡಳಿ “ಎ’ ಸರ್ಟಿಫಿಕೆಟ್‌ ನೀಡಿದೆ. ಕಾರಣ, ಇಲ್ಲಿ ಹಾರರ್‌ ಸ್ಪರ್ಶವೂ ಇದೆ. ಆ ಕಾರಣದಿಂದ ಎ ಪ್ರಮಾಣ ಪತ್ರ ನೀಡಿದೆ’ ಎನ್ನುತ್ತಾರೆ ಅವರು.

ಚಿತ್ರದಲ್ಲಿ ನಟಿಸಿರುವ ಸನಿಹ, ಸುಹಾನ, ಸ್ನೇಹಾ ನಾಯರ್‌ ತಮ್ಮ ಪಾತ್ರಗಳ ಕುರಿತು ಮಾತನಾಡಿದರು. ಎಲ್ಲರಿಗೂ ಈ ಚಿತ್ರ ಹೊಸ ಅನುಭವ ಕಟ್ಟಿಕೊಟ್ಟಿದೆ ಎಂಬುದು ಅವರ ಮಾತು. ಚಿತ್ರದಲ್ಲಿ ನಟಿಸಿರುವ ರಿಪ್ಪು ರಾಮ್‌ ಸಿಂಗ್‌ ಕೂಡ ತಮ್ಮ ಅನುಭವ ಹಂಚಿಕೊಂಡರು. ಚಿತ್ರಕ್ಕೆ ಕೌಶಿಕ್‌ ಹರ್ಷ ಸಂಗೀತ ನೀಡಿದ್ದು, ಟಪ್ಪಾಂಗುಚ್ಚಿ, ಕ್ಲಾಸಿಕಲ್‌ ಹಾಡುಗಳು ಇಲ್ಲಿವೆ. ಕನ್ನಡ ಗಾಯಕರೇ ಇಲ್ಲಿ ಧ್ವನಿಗೂಡಿಸಿದ್ದಾರೆ. ಆನಂದಪ್ರಿಯ, ಮುನಿಸ್ವಾಮಿ ಗೀತೆ ರಚಿಸಿದ್ದಾರೆ ಅಂತ ಹೇಳಿಕೊಳ್ಳುವ ಹೊತ್ತಿಗೆ ಪತ್ರಿಕಾಗೋಷ್ಠಿಗೆ ತೆರೆಬಿತ್ತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.