ಸ್ಪಷ್ಟತೆ ಇಲ್ಲದೆ ಹುಡುಕಾಟ


Team Udayavani, Dec 20, 2019, 12:08 PM IST

cinema-tdy-5

ಒಂದು ಚಿತ್ರಕ್ಕೆ ಒಬ್ಬನೇ ವ್ಯಕ್ತಿ ನಾಯಕ, ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕನಾಗಿ ಹೀಗೆ ತೆರೆಹಿಂದೆ ಹಲವು ರೋಲ್‌ಗ‌ಳಲ್ಲಿ ಕಾಣಿಸಿಕೊಳ್ಳುವ ಉದಾಹರಣೆಗಳನ್ನು ಆಗಾಗ್ಗೆ ಚಿತ್ರರಂಗದಲ್ಲಿ ನೋಡುತ್ತಿರುತ್ತೇವೆ. ಈಗ ಅಂಥದ್ದೇ ಮತ್ತೂಂದು ಚಿತ್ರ ಚಿತ್ರೀಕರಣಕ್ಕೆ ಅಣಿಯಾಗಿದೆ. ಅಂದಹಾಗೆ, ಆ ಚಿತ್ರದ ಹೆಸರು “ಹುಡುಕಾಟ’ “ವಸುಂಧರ ಕ್ರಿಯೇಶನ್ಸ್‌’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ “ಹುಡುಕಾಟ’ ಚಿತ್ರಕ್ಕೆ ರವಿ ಮುಲಕಲಪಲ್ಲಿ ಕಥೆ, ಚಿತ್ರಕಥೆ ಬರೆದು, ಹಾಡುಗಳಿಗೆ ಸಂಗೀತ ಸಂಯೋಜಿಸಿ, ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಜೊತೆಗೆ ನಿರ್ಮಾಣದ ಹೊಣೆಯನ್ನೂ ತಾವೇ ಹೊತ್ತುಕೊಂಡಿರುವ ರವಿ, ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಬಹುತೇಕ “ಒನ್‌ ಮ್ಯಾನ್‌ ಶೋ’ ಥರ ಕಾಣುವ ಈ ಚಿತ್ರ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆನಿರ್ಮಾಣವಾಗುತ್ತಿದೆಯಂತೆ. ಇತ್ತೀಚೆಗೆ “ಹುಡುಕಾಟ’ ಚಿತ್ರ ಮುಹೂರ್ತವನ್ನು ಆಚರಿಸಿಕೊಂಡಿತು. ಹಿರಿಯ ನಿರ್ದೇಶಕ ಸಿ.ವಿ ಶಿವಶಂಕರ್‌, ಎಂ.ಡಿ ಕೌಶಿಕ್‌ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದು, ಚಿತ್ರೀಕರಣಕ್ಕೆ ಚಾಲನೆ ನೀಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ವೇಳೆ ಮಾತನಾಡಿದ ನಿರ್ದೇಶಕ, ನಿರ್ಮಾಪಕ ಕಂ ನಾಯಕ ರವಿ ಮುಲಕಲಪಲ್ಲಿ, “ಇತ್ತೀಚಿನ ದಿನಗಳಲ್ಲಿ ದೇಶದ ಹಲವೆಡೆ ಹೆಣ್ಣುಮಕ್ಕಳ ಅಪಹರಣ, ಅತ್ಯಾಚಾರ ಪ್ರಕರಣಗಳು ಸುದ್ದಿಯಾಗುತ್ತಿವೆ. ಈಗ ಇದೇ ವಿಷಯವನ್ನು ಆಧರಿಸಿ ಸಿನಿಮಾ ಮಾಡುತ್ತಿದ್ದೇವೆ. ಹಳ್ಳಿಯೊಂದರಲ್ಲಿ ಸೀತಾ ಮತ್ತು ಸಾವಿತ್ರಿ ಎಂಬ ಇಬ್ಬರು ಕುರಿ ಕಾಯುವ ಹುಡುಗಿಯರು ಇದ್ದಕ್ಕಿದ್ದಂತೆ ನಾಪತ್ತೆಯಾಗುತ್ತಾರೆ. ಆ ನಂತರ ಅವರ ಕಥೆ ಏನಾಗುತ್ತದೆ ಅನ್ನೋದೆ ಚಿತ್ರದ ಕಥೆಯ ಒಂದು ಎಳೆ’ ಎಂದು ಚಿತ್ರದ ಕಥಾಹಂದರ ತೆರೆದಿಟ್ಟರು.

ಇನ್ನು “ಹುಡುಕಾಟ’ ಚಿತ್ರಕ್ಕೆ “ಪ್ರತಿ ಕ್ಷಣವೂ ಹೋರಾಟ’ ಎಂಬ ಟ್ಯಾಗ್‌ ಲೈನ್‌ ಇದ್ದು, ಚಿತ್ರದಲ್ಲಿ ರವಿ ಮುಲಕಲಪಲ್ಲಿ ಅವರೊಂದಿಗೆ ಅಭಿಷೇಕ್‌ ಕನ್ನೆಲೂರಿ, ಪ್ರಜ್ವಲ್‌ ಕುಮಾರ್‌ ಎಸ್‌, ಶ್ರೀಧರ ಕುಮಾರ್‌, ಮಧುಪ್ರಿಯಾ, ಪೂಜಿತಾ, ದಿವ್ಯಾ ಭಾರ್ಗವಿ, ಲಲಿತಾ, ನಾಗೇಶ್ವರ ರಾವ್‌, ಸುಜಾತ, ಸಂತೋಷ್‌, ಮಂಜುನಾಥ್‌, ರಮಣ, ಭಾಸ್ಕರ್‌, ಚರಣ್‌, ರಾಕ್‌ ವೇಣು, ಟೈಗರ್‌ ಬಾಬು, ಧನಂಜಯ್‌, ಗಿರಿ ಸೇರಿದಂತೆ ಕನ್ನಡ ಮತ್ತು ತೆಲುಗಿನ ಹಲವು ಕಲಾವಿದರು ಇತರ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರಕ್ಕೆ ಆರ್ಯನ್‌ ಛಾಯಾಗ್ರಹಣ, ಎಂ.ಎನ್‌.ಆರ್‌ ಸಂಕಲನವಿದೆ. ಡಿ.ಎಸ್‌.ಬಿ ಉಪ್ಪಾರ್‌ ಚಿತ್ರದ ಹಾಡುಗಳಿಗೆ ಸಾಹಿತ್ಯ ಮತ್ತು ದೃಶ್ಯಗಳಿಗೆ ಸಂಭಾಷಣೆ ಬರೆಯುತ್ತಿದ್ದಾರೆ. ಮೈಸೂರು, ಮಡಿಕೇರಿ, ಮಂಡ್ಯ, ಬೆಂಗಳೂರು ಸುತ್ತಮುತ್ತ “ಹುಡುಕಾಟ’ ಚಿತ್ರದ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ.

ಒಟ್ಟಾರೆ ಬಹುತೇಕ ಹೊಸಬರೆ ಸೇರಿ ನಿರ್ಮಿಸುತ್ತಿರುವ “ಹುಡುಕಾಟ’ ತೆರೆಗೆ ಯಾವಾಗ ಮುಗಿಯುತ್ತದೆ ಅನ್ನೋದರ ಬಗ್ಗೆ ಚಿತ್ರತಂಡಕ್ಕೇ ಸ್ಪಷ್ಟತೆ ಇಲ್ಲದಿರುವುದರಿಂದ, ಚಿತ್ರ ಯಾವಾಗ ತೆರೆಗೆ ಬರಬಹುದು ಅನ್ನೋದರ ಬಗ್ಗೆ ಸದ್ಯಕ್ಕೆ ಏನೂ ಹೇಳುವಂತಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.