ಐ ಲವ್‌ ಯು ಹಾಡಿಗೆ ದಾವಣಗೆರೆ ಸಾಕ್ಷಿ


Team Udayavani, Feb 8, 2019, 12:30 AM IST

26.jpg

ಸುಮಾರು ಎರಡು ವರ್ಷಗಳ ಬಳಿಕ ಉಪೇಂದ್ರ ತೆರೆಮೇಲೆ ಕಾಣಿಸಿಕೊಳ್ಳುತ್ತಿರುವ “ಐ ಲವ್‌ ಯು’ ಚಿತ್ರದ ಹಾಡುಗಳು ಇತ್ತೀಚೆಗೆ ದಾವಣಗೆರೆಯಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ದಾವಣಗೆರೆಯ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಹಾಕಲಾಗಿದ್ದ ಬೃಹತ್‌ ವೇದಿಕೆಯಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಚಿತ್ರಪ್ರೇಮಿಗಳು, ಸಿನಿರಸಿಕರು ನೆರೆದಿದ್ದು, ಕಾರ್ಯಕ್ರಮವನ್ನು ಕಣ್ತುಂಬಿಕೊಂಡರು. 

ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್‌ ಕಂಠದಲ್ಲಿ ಒಂದೊಂದೆ ಗೀತೆಗಳು ಹೊರಬರುತ್ತಿದ್ದಂತೆ, ವೇದಿಕೆಯ ಮುಂಭಾಗ ನೆರೆದಿದ್ದ ಅಭಿಮಾನಿಗಳು ಕೂಡ ಆ ಹಾಡುಗಳಿಗೆ ಹೆಜ್ಜೆ ಹಾಕಿದರು. ಮೋಹನ್‌ ಸಂಯೋಜಿಸಿದ ನೃತ್ಯಕ್ಕೆ ಹೆಜ್ಜೆ ಹಾಕಿದ ಕಲಾವಿದರು, ನೋಡುಗರಿಂದ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಂಡರು. ಇವರೊಂದಿಗೆ ನಟ ಉಪೇಂದ್ರ, ನಟಿ ರಚಿತಾ ರಾಮ್‌, ಸೋನುಗೌಡ, ಮಯೂರಿ ಸೇರಿದಂತೆ ಅನೇಕರು ವೇದಿಕೆಯಲ್ಲೇ ಹಾಡುಗಳಿಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.

 ಇದೇ ವೇಳೆ ಮಾತನಾಡಿದ “ಐ ಲವ್‌ ಯು’ ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕ ಆರ್‌. ಚಂದ್ರು, “ಬಹಳ ಸಮಯದ ನಂತರ ಉಪೇಂದ್ರ ಅವರೊಂದಿಗೆ ಕೆಲಸ ಮಾಡುವ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ. ಉಪೇಂದ್ರ ಅವರನ್ನು ಇಲ್ಲಿಯವರೆಗೆ ಮಿಸ್‌ ಮಾಡಿಕೊಂಡಿದ್ದ ಅಭಿಮಾನಿಗಳು ಈ ಸಿನಿಮಾದಲ್ಲಿ ಹೊಸ ಗೆಟಪ್‌ನಲ್ಲಿ ಉಪ್ಪಿ ಅವರನ್ನು ನೋಡಿ ಖುಷಿಪಡುತ್ತಾರೆ. ದಾವಣಗೆರೆಯ ಬೆಣ್ಣೆ ಮನಸ್ಸಿನ ಜನರ ಮುಂದೆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ಖುಷಿ ಆಗುತ್ತದೆ. ಚಿತ್ರಕ್ಕೆ ಎಲ್ಲರ ಸಹಕಾರವಿರಲಿ’ ಎಂದರು.

ನಟ ಉಪೇಂದ್ರ ಮಾತನಾಡಿ, “”ಎ’ ಸಿನಿಮಾದ ನೂರನೇ ದಿನದ ಕಾರ್ಯಕ್ರಮವನ್ನು ದಾವಣಗೆರೆಯಲ್ಲಿ ಮಾಡಿದ್ದೆವು. ಆಗಲೂ ಸಾವಿರಾರು ಜನ ಸೇರಿ ನಮ್ಮನ್ನು ಹರಸಿದ್ದರು. ಬಹಳ ವರ್ಷದ ನಂತರ ಮತ್ತೆ ಇಲ್ಲೇ ನಮ್ಮ ಸಿನಿಮಾದ ಕಾರ್ಯಕ್ರಮ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ’ ಎಂದರು. 

ಸಮಾರಂಭದಲ್ಲಿ “ಐ ಲವ್‌ ಯು’ ಚಿತ್ರದ ಕಲಾವಿದರು, ತಂತ್ರಜ್ಞರು ಹಾಜರಿದ್ದು, ಚಿತ್ರದ ಬಗ್ಗೆ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಚಿತ್ರರಂಗದ ಅನೇಕ ಗಣ್ಯರು, ಜನಪ್ರತಿನಿಧಿಗಳು ಹಾಜರಿದ್ದು “ಐ ಲವ್‌ ಯು’ ಚಿತ್ರದ ಹಾಡುಗಳನ್ನು ಹೊರತಂದು ಚಿತ್ರತಂಡಕ್ಕೆ ಶುಭ ಹಾರೈಸಿದರು. 

ಇನ್ನು “ಐ ಲವ್‌ ಯು’ ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು ದಾವಣಗೆರೆಯಲ್ಲಿ ನಡೆದ ಸಮಾರಂಭದಲ್ಲಿ ಕೇವಲ ಮೂರು ಹಾಡುಗಳನ್ನು ಮಾತ್ರ ಬಿಡುಗಡೆಗೊಳಿಸಲಾಗಿದ್ದು, ಬಾಕಿ ಇರುವ ಮೂರು ಹಾಡುಗಳನ್ನು ಮಂಡ್ಯ ಅಥವಾ ಹಳೇ ಮೈಸೂರು ಭಾಗದಲ್ಲಿ ನಡೆಸಲು ಉದ್ದೇಶಿಸಿರುವ ಮತ್ತೂಂದು ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ಉದ್ದೇಶಿಸಿದೆ. 

ಸದ್ಯ ಬಿಡುಗಡೆಯಾಗಿರುವ “ಐ ಲವ್‌ ಯು’ ಹಾಡುಗಳು ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದ್ದು, ನಿಧಾನವಾಗಿ ಜನಪ್ರಿಯವಾಗುತ್ತಿದೆ. ಚಿತ್ರದ ಹಾಡುಗಳಿಗೆ ಡಾ.ಕಿರಣ್‌ ತೋಟಂಬೈಲು ಸಂಗೀತವಿದೆ. ಚಿತ್ರದ ಒಂದು ವಿಶೇಷ ಹಾಡಿಗೆ ಕ್ರೇಜಿಸ್ಟಾರ್‌ ವಿ. ರವಿಚಂದ್ರನ್‌ ರಾಗ ಸಂಯೋಜಿಸಿದ್ದಾರೆ. ಲಹರಿ ಸಂಸ್ಥೆ ಚಿತ್ರದ ಆಡಿಯೋ ರೈಟ್ಸ್‌ ಖರೀದಿಸಿದ್ದು, ಧ್ವನಿ ಸಾಂದ್ರಿಕೆಯನ್ನು ಮಾರುಕಟ್ಟೆಗೆ ತಂದಿದೆ. 

ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.