ದೋಸ್ತಿಗಳ ಹಾಡು-ಪಾಡು : ಪೊಲೀಸ್‌-ಲಾಯರ್‌ ಜೊತೆಯಾದ್ರು


Team Udayavani, Apr 5, 2019, 6:30 AM IST

Suchi-Dosthi-726

ನಟ ಕಂ ನಿರ್ದೇಶಕ ಮೋಹನ್‌ ನಿರ್ದೇಶನದ “ಲೋಫ‌ರ್’ ಚಿತ್ರ ತೆರೆಗೆ ಬರುವ ಸಿದ್ಧತೆಯಲ್ಲಿದೆ. ಇದರ ನಡುವೆಯೇ ಮೋಹನ್‌ ಸದ್ದಿಲ್ಲದೆ ಮತ್ತೂಂದು ಚಿತ್ರದ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದಾರೆ. ಅಂದಹಾಗೆ, ಸದ್ಯ ಮೋಹನ್‌ ನಿರ್ದೇಶಿಸುತ್ತಿರುವ ಚಿತ್ರದ ಹೆಸರು “ಜಿಗರಿ ದೋಸ್ತ್’. ಯಾವುದೇ ಸದ್ದು ಗದ್ದಲವಿದೆ ಈಗಾಗಲೇ ಈ ಚಿತ್ರದ ಮುಕ್ಕಾಲು ಭಾಗದಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ ನಿರ್ದೇಶಕ ಮೋಹನ್‌ ಮತ್ತು ನಿರ್ಮಾಪಕ ಬಿ.ಎನ್‌ ಗಂಗಾಧರ್‌, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಇತ್ತೀಚೆಗೆ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ಗೆ ಪತ್ರಕರ್ತರು ಮತ್ತು ಮಾಧ್ಯಮಗಳನ್ನು ಆಹ್ವಾನಿಸಿದ್ದರು.

ಅದೇ ವೇಳೆ “ಜಿಗರಿ ದೋಸ್ತ್’ ಚಿತ್ರದಲ್ಲಿ ಬರುವ “ಅಚ್ಚು ಅಚ್ಚು ಅಚ್ಚು… ನೀ ನಂಗೆ ಅಚ್ಚು ಮೆಚ್ಚು…’ ಎನ್ನುವ ಸಾಲುಗಳಿಂದ ಶುರುವಾಗುವ ಹಾಡಿನ ಚಿತ್ರೀಕರಣ ಜೋರಾಗಿ ನಡೆಯುತ್ತಿತ್ತು. ನೃತ್ಯ ನಿರ್ದೇಶಕರಾದ ಮದನ್‌-ಹರಿಣಿ ನೃತ್ಯ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಹಾಡಿಗೆ ನಾಯಕ ನಟರಾದ ಸ್ಕಂದ ಅಶೋಕ್‌, ಚೇತನ್‌ ಮತ್ತು ನಾಯಕಿಯರಾದ ಸುಷ್ಮಾ ರಾಜ್‌, ಅಕ್ಷತಾ ಭರ್ಜರಿಯಾಗಿ ಹೆಜ್ಜೆ ಹಾಕುತ್ತಿದ್ದರು. ಡಿ. ಪ್ರಸಾದ್‌ ಬಾಬು ತಮ್ಮ ಕ್ಯಾಮರಾದಲ್ಲಿ ಹಾಡಿನ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದರು. ಬಳಿಕ ಚಿತ್ರೀಕರಣಕ್ಕೆ ಕೊಂಚ ಬ್ರೇಕ್‌ ಕೊಟ್ಟ ಚಿತ್ರತಂಡ ಚಿತ್ರದ ಬಗ್ಗೆ ಮಾತಿಗಿಳಿಯಿತು.


ಮೊದಲು ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಮೋಹನ್‌, “ನಾವು ಬಯಸಿದ್ದು ನಮಗೆ ಸಿಗುತ್ತೆ ಅಂದ್ರೆ ಅದು ದೋಸ್ತಿ ಮಾತ್ರ. ಸರಿಯಾದ ಫ್ರೆಂಡ್ಸ್‌ ಸೆಲೆಕ್ಟ್ ಮಾಡಿಕೊಂಡ್ರೆ ಜೀವನ ಖುಷಿಯಾಗಿರುತ್ತೆ. ಪ್ರೀತಿಗಿಂತ ಸ್ನೇಹ ದೊಡ್ಡದು ಅನ್ನೋದು ಈ ಚಿತ್ರದ ತಿರುಳು. ಹೆಸರೇ ಹೇಳುವಂತೆ ಇದೊಂದು ಫ್ರೆಂಡ್‌ ಶಿಪ್‌ ಕುರಿತಾದ ಚಿತ್ರ. ಇಬ್ಬರು ಪ್ರಾಣ ಸ್ನೇಹಿತರು, ಅವರ ನಡುವಿನ ಪ್ರೀತಿ – ಸ್ನೇಹ, ಸಂಬಂಧವನ್ನು ಚಿತ್ರದಲ್ಲಿ ನೋಡಬಹುದು. ಒಬ್ಬ ಪೊಲೀಸ್‌, ಮತ್ತೂಬ್ಬ ಲಾಯರ್‌ ಆಗಿರುವ ಈ ಇಬ್ಬರು ಸ್ನೇಹಿತರು ಹೇಗೆ ತಮ್ಮ ಚಾಣಾಕ್ಷತೆಯಿಂದ ಅಪರಾಧಿಗಳನ್ನು ಶಿಕ್ಷಿಸುತ್ತಾರೆ ಅನ್ನೋದೆ ಚಿತ್ರದ ಕಥೆ. ಇಂಟಲಿಜೆಂಟ್‌ ಕೋರ್ಟ್‌ ಕೇಸ್‌ಗಳು ಚಿತ್ರದಲ್ಲಿವೆ. ಚಿತ್ರದ ಬಹುಭಾಗ ಕೋರ್ಟ್‌ ನಲ್ಲಿ ನಡೆಯುತ್ತದೆ. ಒಟ್ಟಾರೆ ಇದೊಂದು ಪಕ್ಕಾ ಫ್ಯಾಮಿಲಿ ಎಂಟರ್‌ಟೈನ್ಮೆಂಟ್‌ ಚಿತ್ರ. ಇಂದಿನ ಆಡಿಯನ್ಸ್‌ ಬಯಸುವ ಲವ್‌, ಸೆಂಟಿಮೆಂಟ್‌, ಕಾಮಿಡಿ, ಆ್ಯಕ್ಷನ್‌ ಎಲ್ಲವೂ ಈ ಚಿತ್ರದಲ್ಲಿದೆ. ಈಗಾಗಲೇ 32 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ’ ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಮಾತನಾಡಿದ ನಿರ್ಮಾಪಕ ಗಂಗಾಧರ್‌, “ಇದು ನನ್ನ ನಿರ್ಮಾಣದ 27ನೇ ಚಿತ್ರ. ಚಿತ್ರದ ಕಥೆ ಮತ್ತು ಅದರ ಅಂಶಗಳು ಇಷ್ಟವಾಗಿದ್ದರಿಂದ ಈ ಚಿತ್ರವನ್ನು ನಿರ್ಮಿಸಲು ಮುಂದಾದೆ. ಎಲ್ಲಾ ಕಲಾವಿದರು ಮತ್ತು ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬರುತ್ತಿದೆ. ಈಗಾಗಲೇ ನಾವು ಅಂದುಕೊಂಡಂತೆ “ಜಿಗರಿ ದೋಸ್ತ್’ ಚಿತ್ರದ ಮಾತಿನ ಭಾಗ ಪೂರ್ಣಗೊಂಡಿದೆ. ಸದ್ಯ ಬಾಕಿಯಿರುವ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಕೆಲ ದಿನಗಳಲ್ಲೆ ಚಿತ್ರೀಕರಣ ಮುಕ್ತಾಯವಾಗಲಿದೆ. ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತೇವೆ. ಇಂದು ಚಿತ್ರ ಮಾಡುವುದು ಸುಲಭ ಆದ್ರೆ ಅದನ್ನು ತೆರೆಗೆ ತರುವುದೇ ಸವಾಲಿನ ಕೆಲಸ­ವಾಗಿದೆ. ಸಿನಿಮಾವನ್ನು ವೃತ್ತಿಪರವಾಗಿ ಮಾಡುವವರು ಕಡಿಮೆಯಾಗಿದ್ದಾರೆ’ ಎಂದರು.

ಚಿತ್ರದ ನಾಯಕರಲ್ಲಿ ಸ್ಕಂದ ಅಶೋಕ್‌ ಲಾಯರ್‌ ಪಾತ್ರಕ್ಕೆ ಬಣ್ಣ ಹಚ್ಚಿದರೆ, ಮತ್ತೂಬ್ಬ ನಾಯಕ ಚೇತನ್‌ ಪೊಲೀಸ್‌ ಅಧಿಕಾರಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ನಾಯಕಿಯರ ಪೈಕಿ ಸುಷ್ಮಾ ರಾಜ್‌ ಪತ್ರಕರ್ತೆಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಅಕ್ಷತಾ ಬಜಾರಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಇಬ್ಬರೂ ನಾಯಕರು ಮತ್ತು ಇಬ್ಬರು ನಾಯಕಿಯರು ಚಿತ್ರದಲ್ಲಿ ತಮ್ಮ ಪಾತ್ರ ಮತ್ತು ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು.

ಇನ್ನು “ಜಿಗರಿ ದೋಸ್ತ್’ನಲ್ಲಿ ವಿನೋದ್‌ ಆಳ್ವಾ, ಮಂಜುನಾಥ್‌, ಇರ್ಫಾನ್‌, ಅನಂತ ವೇಲು ಮೊದಲಾದ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ಭರದಿಂದ ಚಿತ್ರೀಕರಣದಲ್ಲಿ ನಿರತವಾಗಿರುವ “ಜಿಗರಿ ದೋಸ್ತ್’ ಮುಂಬ­ರುವ ಆಗಸ್ಟ್‌ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ. ಒಟ್ಟಾರೆ “ಜಿಗರಿ ದೋಸ್ತ್’ಗಳ ಕಮಾಲ್‌ ಹೇಗಿರಲಿದೆ ಅನ್ನೋದು ಗೊತ್ತಾಗಬೇಕಾದರೆ ಚಿತ್ರ ತೆರೆಗೆ ಬರುವವರೆಗೆ ಕಾಯಬೇಕು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.