ಜಸ್ಟ್‌ ಪಾಸ್‌ ಆಗುವವರ ಕಥೆ


Team Udayavani, Jan 18, 2019, 12:30 AM IST

22.jpg

ಪರೀಕ್ಷೆಯಲ್ಲಿ ಅನುತ್ತಿರ್ಣರಾದ ವಿದ್ಯಾರ್ಥಿಗಳು ಖನ್ನತೆಗೆ ಒಳಗಾಗುವುದು, ಆತ್ಮಹತ್ಯೆಗೆ ಮುಂದಾಗುವುದು, ಇಂತಹ ಸುದ್ದಿಗಳನ್ನು ಆಗಾಗ್ಗೆ  ಪ್ರತಿಕೆಗಳಲ್ಲಿ, ಮಾಧ್ಯಮಗಳಲ್ಲಿ ನೋಡಿರುತ್ತೀರಿ. ಪ್ರತಿಬಾರಿ ಶೈಕ್ಷಣಿಕ ವರ್ಷಾಂತ್ಯಕ್ಕೆ, ಫ‌ಲಿತಾಂಶಗಳು ಪ್ರಕಟವಾಗುವ ವೇಳೆಗೆ ಇಂತಹ ಸುದ್ದಿಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿರುತ್ತವೆ. ಈ ಬಗ್ಗೆ ಸರ್ಕಾರ, ಸಂಘ-ಸಂಸ್ಥೆಗಳು ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದರೂ, ಆತ್ಮಹತ್ಯೆ ಮಾಡಿಕೊಳ್ಳುವ, ಖನ್ನತೆಗೆ ಒಳಗಾಗುವ  ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಈಗ ಇದೇ ವಿಷಯವನ್ನು ಇಟ್ಟುಕೊಂಡು ಇಲ್ಲೊಂದು ಸಿನಿಮಾಸಕ್ತರ ತಂಡ, ಇದನ್ನು ಸಿನಿಮಾವಾಗಿ ತೆರೆಮೇಲೆ ತರುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು “ಸಪ್ಲೆಮೆಂಟರಿ’.

ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವವಿರುವ ತುಮಕೂರು ವಿಶ್ವವಿದ್ಯಾಲಯದ ಪ್ರೊಫೆಸರ್‌, ಡಾ. ದೇವರಾಜ್‌.ಎಸ್‌, “ಸಪ್ಲೆಮೆಂಟರಿ’ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿದ್ದಾರೆ. ಚಿತ್ರದಲ್ಲಿ 4 ಹಾಡುಗಳಿದ್ದು ಅವುಗಳಿಗೂ ಸಾಹಿತ್ಯ ಮತ್ತು ಸಂಗೀತವನ್ನು ಡಾ. ದೇವರಾಜ್‌ ಅವರೇ ನೀಡಿದ್ದಾರೆ. 

ಇನ್ನು “ಸಪ್ಲೆಮೆಂಟರಿ’ ಚಿತ್ರಕ್ಕೆ “ಜಸ್ಟ್‌ ಪಾಸ್‌ ಮಗಾ’ ಎಂದು ಅಡಿಬರಹವಿದೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಡಾ. ದೇವರಾಜ್‌, “ಇದೊಂದು ಶಿಕ್ಷಣ ವಿಷಯಕ್ಕೆ ಸಂಬಂಧಿಸಿದ ಚಿತ್ರ. ಇಂದಿನ ಗುರು-ಶಿಷ್ಯರ ಸಂಬಂಧ, ಶಿಕ್ಷಣದ ವ್ಯವಸ್ಥೆ ಮೊದಲಾದ ಸಂಗತಿಗಳು ಚಿತ್ರದಲ್ಲಿವೆ. ಪರೀಕ್ಷೆಯಲ್ಲಿ ಅನುತ್ತಿìಣರಾದಾಗ ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ ಎಂಬ ಸಂದೇಶ ಕೂಡ ಚಿತ್ರದಲ್ಲಿದೆ. ಈ ಚಿತ್ರದ ಕಥೆಯಲ್ಲಿ ಪರೀಕ್ಷೆ ಅಥವಾ ಬದುಕು ಯಾವುದು ಎಂಬುದನ್ನು ಹೇಳಲಾಗಿದೆ. ಪ್ರತಿಯೊಬ್ಬರ ಜೀವನದಲ್ಲೂ ಎರಡು ರೀತಿಯ ಪರೀಕ್ಷೆಗಳು ಬರುತ್ತವೆ. ಮುಖ್ಯ ಪರೀಕ್ಷೆಯಲ್ಲಿ ಅನುತ್ತಿರ್ಣವಾದರೆ, ಮರಳಿ ಯತ್ನವ ಮಾಡು ಎನ್ನುವ ಹಾಗೆ ಸಪ್ಲಿಮೆಂಟ್‌ನಲ್ಲಿ ಪಾಸ್‌ ಆಗಬಹುದು. ಅದರಂತೆ ಬದುಕಿನಲ್ಲೂ ಸೋಲುಂಡರೆ ಎದೆಗುಂದಬಾರದು ಎಂಬ ಹಲವು ಅಂಶಗಳು ಚಿತ್ರದಲ್ಲಿವೆ. ಮನರಂಜನೆಯ ಮೂಲಕ ಒಂದೊಳ್ಳೆ ಸಂದೇಶವನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ’ ಎನ್ನುತ್ತಾರೆ. 

ಇನ್ನು ಈ ಚಿತ್ರದಲ್ಲಿ ಖುಷ್‌ ನಾಯಕನಾಗಿ, ಶ್ರದ್ಧಾ ಭಟ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕಾಲೇಜಿನಲ್ಲಿದ್ದಾಗ ಗುರುಗಳಿಂದ ಬುದ್ದಿವಾದ ಹೇಳಿಕೊಂಡು, ಮುಂದೆ ಗುರುಗಳು ಆತ್ಮಹತ್ಯೆ ಮಾಡಿಕೊಳ್ಳುವಾಗ ಅವರಿಗೆ ಧೈರ್ಯ ತುಂಬುವ ಎರಡು ಶೇಡ್‌ನ‌ ಪಾತ್ರದಲ್ಲಿ ನಾಯಕ ಖುಷ್‌ ಕಾಣಿಸಿಕೊಂಡರೆ, ಕಾಲೇಜು ಹುಡುಗಿಯಿಂದ ಮಧ್ಯ ವಯಸ್ಕ ಮಹಿಳೆಯವರೆಗೆ ಶ್ರದ್ಧಾ ಭಟ್‌ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪ್ರೊಫೆಸರ್‌ ಪಾತ್ರದಲ್ಲಿ  ನಿರ್ಮಾಪಕ  ಮಹೇಂದ್ರ ಮುನೊಟ್‌ ಅಭಿನಯಿಸಿದ್ದಾರೆ. ಚಿತ್ರಕ್ಕೆ ಶಿವು ತುಮಕೂರು ಛಾಯಾಗ್ರಹಣವಿದೆ. ಚಿತ್ರವು ಮುಂಬರುವ ಜನವರಿ 25ರಂದು ತೆರೆ ಕಾಣುತ್ತಿದೆ. 

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.