ಅಬಚೂರಿನ ಕಾಲಾಂತಕ

ಜ್ವಲಂತಂ ನಿರ್ದೇಶಕನ ಹೊಸ ಸಿನಿಮಾ

Team Udayavani, Jan 17, 2020, 4:46 AM IST

an-17

“ಕಾಲಾಂತಕ’ ಹೆಸರಿನಲ್ಲಿ ಚಿತ್ರವೊಂದು ತಯಾರಾಗುತ್ತಿದೆ. ಈ ಚಿತ್ರದಲ್ಲಿ ಪುರಾಣದ ಕಥೆಯಲ್ಲಿರುವಂತೆ ಸನ್ನಿವೇಶಗಳು ಇರುವುದರಿಂದ ಚಿತ್ರಕ್ಕೆ “ಕಾಲಾಂತಕ’ ಎಂದು ಹೆಸರಿಡಲಾಗಿದೆ. ಅಂದಹಾಗೆ, ಈ ರೀತಿ ಸಮಯ ಮತ್ತು ಸನ್ನಿವೇಶ ಬಳಸಿಕೊಂಡು ಚಿತ್ರದಲ್ಲಿ “ಕಾಲಾಂತಕ’ ಯಾರು ಆಗುತ್ತಾರೆ ಅನ್ನೋದು ಸಸ್ಪೆನ್ಸ್‌. ಅದನ್ನು ಚಿತ್ರದಲ್ಲೇ ನೋಡಬೇಕು ಎನ್ನುತ್ತದೆ ಚಿತ್ರತಂಡ.

ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಸದ್ದಿಲ್ಲದೆ ಪೂರ್ಣಗೊಳಿಸಿರುವ “ಕಾಲಾಂತಕ’ ಚಿತ್ರದ ಮೊದಲ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಇದೇ ವೇಳೆ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, “ಕಾಲಾಂತಕ’ನ ಬಗ್ಗೆ ಒಂದಷ್ಟು ಮಾತನಾಡಿತು. ಈ ಹಿಂದೆ “ಜ್ವಲಂತಂ’ ಚಿತ್ರವನ್ನು ನಿರ್ದೇಶಿಸಿದ್ದ ಅಂಬರೀಶ್‌ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಅಂಬರೀಶ್‌ “ಅಬಚೂರು ಎಂಬ ಕಾಲ್ಪನಿಕ ಊರಿನಲ್ಲಿ ಈ ಚಿತ್ರದ ಕಥೆ ನಡೆಯುತ್ತದೆ. ಆ ಸ್ಥಳದಲ್ಲಿ ನಡೆಯುವಂಥ ಕೆಲವು ಘಟನೆಗಳಿಗೆ ಯಾರು ಸ್ಪೂರ್ತಿಯಾಗಿರುತ್ತಾರೆ. ಮಾದಕ ದ್ರವ್ಯಗಳನ್ನು ಸಾಗಾಣಿಕೆ ಮಾಡುವ ವ್ಯಾಪಾರಿಯೊಬ್ಬ ಊರನ್ನು ಯಾವ ರೀತಿಯಲ್ಲಿ ಹತೋಟಿಯಲ್ಲಿ ಇಟ್ಟುಕೊಂಡಿರುತ್ತಾನೆ. ಅವನು ಮಾಡುವ ಕೃತ್ಯಗಳು, ಅಲ್ಲಿ ನಡೆಯುವಂತ ವಸ್ತು ವಿಷಯಗಳ ಆಧಾರದ ಮೇಲೆ ಲೇಖಕಿಯೊಬ್ಬಳು ಕಾದಂಬರಿ ಬರೆಯಲು ಶುರು ಮಾಡುತ್ತಾಳೆ. ಇವರಿಬ್ಬರ ಘರ್ಷಣೆ ಮುಂದೆ ಹೇಗೆ ರೂಪ ಪಡೆದುಕೊಳ್ಳುತ್ತದೆ. ಪೆನ್ನು-ಬರಹ, ಸಿಗರೇಟು-ಗಾಂಜಾ, ಇವರೆಡು ಕತೆಯಲ್ಲಿ ಪ್ರಮುಖವಾಗಿ ಬರುವುದರಿಂದ ಪೋಸ್ಟರ್‌ನಲ್ಲಿ ಇದನ್ನೆ ತೋರಿಸಲಾಗಿದೆ. ಸಸ್ಪೆನ್ಸ್‌-ಥ್ರಿಲ್ಲರ್‌ ಜೊತೆಗೊಂದು ಮರ್ಡರ್‌ ಮಿಸ್ಟರಿ ಚಿತ್ರದಲ್ಲಿದೆ. ಚಿತ್ರದಲ್ಲಿ ಕಥೆಯೇ ಹೀರೋ. ಆ ಕಥೆಗೆ ತಕ್ಕಂತೆ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದು ಕಥೆಯ ಬಗ್ಗೆ ವಿವರಣೆ ನೀಡಿದರು.

ಈ ಹಿಂದೆ “ರಂಗ್‌ ಬಿರಂಗಿ’ ಚಿತ್ರ ನಿರ್ಮಿಸಿದ್ದ ಶಾಂತಕುಮಾರ್‌ “ಕಾಲಾಂತಕ’ ಚಿತ್ರಕ್ಕೆ ಬಂಡವಾಳ ಹಾಕಿ¨ªಾರೆ. ಚಿತ್ರದಲ್ಲಿ ಚಿತ್ರ ನಿರ್ದೇಶಕನಾಗಿ ಕೆ.ಎಸ್‌ ಶ್ರೀಧರ್‌, ಫೆಡ್ಲರ್‌ ಪಾತ್ರದಲ್ಲಿ ಯಶ್‌ವಂತ್‌ ಶೆಟ್ಟಿ, ಬರಹಗಾರ್ತಿಯಾಗಿ ಅರ್ಚನಾ ಜೋಯಿಸ್‌ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಕಾರ್ತಿಕ್‌ ಸಾಮಗ, ಸುಶ್ಮಿತಾ ಜೋಷಿ, ಧರ್ಮೇಂದ್ರ ಅರಸ್‌, ಪ್ರಕಾಶ್‌, ಕಡ್ಡಿಪುಡಿ ಚಂದ್ರು, ಶ್ರೀಜಿತ್‌, ಪುನೀತ್‌ ಮುಂತಾದವರು ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರದ ಬಗ್ಗೆ ಸಾಕಷ್ಟು ಭರವಸೆಯ ಮಾತುಗಳನ್ನಾಡುವ ಕಲಾವಿದರು “ಕಾಲಾಂತಕ’ ಪ್ರಯೋಗಾತ್ಮಕ ಮತ್ತು ವಿಭಿನ್ನ ಕಥಾ ವಸ್ತು ಹೊಂದಿರುವ ಚಿತ್ರ. ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎನ್ನುತ್ತಾರೆ.

“ಕಾಲಾಂತಕ’ ಚಿತ್ರಕ್ಕೆ ಹಾಲೇಶ್‌ ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಫಿನ್ನಿ ಕುರಿಯನ್‌ ಸಂಗೀತ ಸಂಯೋಜಿಸಿದ್ದಾರೆ. “ಭಾಸ್ಕರ್‌ ಮೂವೀ ಲೈನ್ಸ್‌’ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗಿದೆ. ಚಿಕ್ಕಮಗಳೂರು, ಬೆಂಗಳೂರು ಸುತ್ತಮುತ್ತ ಸೇರಿದಂತೆ ಸುಮಾರು 40 ದಿನಗಳ ಕಾಲ ಚಿತ್ರವನ್ನು ಚಿತ್ರೀಕರಿಸಲಾಗಿದೆ. ಸದ್ಯ ಮೊದಲ ಟೀಸರ್‌ನಲ್ಲಿ ಒಂದಷ್ಟು ಗಮನ ಸೆಳೆಯುತ್ತಿರುವ “ಕಾಲಾಂತಕ’ ಫೆಬ್ರವರಿ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.