ಇಂದಿನಿಂದ ಕಾಳಿದಾಸ ಮೇಷ್ಟ್ರ ಕ್ಲಾಸ್‌

ನೈಜ ಘಟನೆಯ ಸುತ್ತ ಜಗ್ಗೇಶ್‌ ಚಿತ್ರ

Team Udayavani, Nov 22, 2019, 5:09 AM IST

pp-27

ಜಗ್ಗೇಶ್‌ ನಾಯಕರಾಗಿರುವ “ಕಾಳಿದಾಸ ಕನ್ನಡ ಮೇಷ್ಟ್ರು’ ಚಿತ್ರ ಇಂದು ತೆರೆಕಾಣುತ್ತಿದೆ. ಕವಿರಾಜ್‌ ನಿರ್ದೇಶಿಸಿರುವ ಈ ಚಿತ್ರದಲ್ಲಿ ಮೇಘನಾ ರಾಜ್‌ ನಾಯಕಿ. ಈಗಾಗಲೇ ಚಿತ್ರದ ಹಾಡು ಹಾಗೂ ಟ್ರೇಲರ್‌ ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡಕ್ಕೆ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿದೆ. ಕಾಮಿಡಿ ಹಿನ್ನೆಲೆಯಲ್ಲಿ ಸಾಗುವ ಈ ಸಿನಿಮಾದಲ್ಲಿ ಗಂಭೀರ ವಿಷಯವನ್ನು ಹೇಳಲಾಗಿದೆಯಂತೆ.

ಕವಿರಾಜ್‌ ನಿರ್ದೇಶನದ ಈ ಚಿತ್ರ ನೈಜ ಘಟನೆಯನ್ನು ಆಧರಿಸಿ ಮಾಡಲಾಗಿದೆ. ದುಬೈನಲ್ಲಿ ಎಂಟನೆ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿಯೇ ನಿರ್ದೇಶಕರಿಗೆ ಕಥೆ ರಚಿಸಲು ಕಾರಣವಾಯಿತಂತೆ. ಆ ಅಂಶವನ್ನಿಟ್ಟುಕೊಂಡು ಕವಿರಾಜ್‌ ಈ ಸಿನಿಮಾ ಮಾಡಿದ್ದಾರೆ. ಹಾಗಂತ ಇದು ಗಂಭೀರ ಸಿನಿಮಾವಲ್ಲ. ಚಿತ್ರದಲ್ಲಿ ಸಾಕಷ್ಟು ಮನರಂಜನೆಯ ಅಂಶಗಳನ್ನು ಸೇರಿಸಲಾಗಿದೆ.

ಜಗ್ಗೇಶ್‌ ಅವರು ಈ ಚಿತ್ರದಲ್ಲಿ ಕನ್ನಡ ಶಿಕ್ಷಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮರ್ಥ್ಯ ಮೀರಿ ಮಕ್ಕಳನ್ನು ದೊಡ್ಡ ಶಾಲೆಗೆ ಸೇರಿಸುವ ಪೋಷಕರು, ಶಿಕ್ಷಣ ವ್ಯವಸ್ಥೆಯ ದುರುಪಯೋಗ, ಮಧ್ಯಮ ವರ್ಗದ ತೊಂದರೆ ಸೇರಿದಂತೆ ಹಲವು ಅಂಶಗಳ ಸುತ್ತ ಈ ಸಿನಿಮಾ ಸಾಗುತ್ತದೆಯಂತೆ. ಗಂಭೀರ ವಿಷಯವನ್ನು ಹಾಸ್ಯಮಯವಾಗಿ ಹೇಳುವ ಜೊತೆಗೆ ಚಿತ್ರದಲ್ಲೊಂದು ಸಂದೇಶವನ್ನು ನೀಡಲಾಗಿದೆಯಂತೆ.

ಜೊತೆಗೆ ಈ ಚಿತ್ರದ ಪ್ರಮೋಶನ್‌ ಸಾಂಗ್‌ನಲ್ಲಿ ಕನ್ನಡದ 19ಕ್ಕೂ ಹೆಚ್ಚು ನಟಿಯರು ಹೆಜ್ಜೆ ಹಾಕಿದ್ದಾರೆ. ಚಿತ್ರದಲ್ಲಿ ಮೇಘನಾ ಅವರಿಗೂ ಒಳ್ಳೆಯ ಪಾತ್ರವಿದೆಯಂತೆ. ತಮ್ಮ ಪಾತ್ರದ ಬಗ್ಗೆ ಮಾತಾನಡುವ ಮೇಘನಾ, “ಅದೊಂದು “ಕಾಳಿ’ ತರಹದ ಪಾತ್ರ. ಒಂದರ್ಥದಲ್ಲಿ ಕಾಳಿ ಅಂದುಕೊಂಡರೂ ತಪ್ಪಿಲ್ಲ. ಕಥೆಯಲ್ಲಿ ಕಾಳಿ ಇದ್ದಂತೆ. ಕನ್ನಡ ಮೇಷ್ಟ್ರು ಒಬ್ಬರ ವಿರುದ್ದವಾಗಿ ಇರುವ ಪಾತ್ರವದು. ಇಂಗ್ಲೀಷ್‌
ತುಂಬ ಓದಿಕೊಂಡವಳು. ಒಂದು ರೀತಿಯ ಹೈಫೈ ಹುಡುಗಿ. ಈಗಿನ ಟ್ರೆಂಡ್‌ ಸ್ಟೋರಿ.  ನ್ನಡದವರಾಗಿದ್ದೂ ಇಂಗ್ಲೀಷ್‌ ವ್ಯಾಮೋಹ ಬೆಳೆಸಿಕೊಂಡಂತವಳು. ತನ್ನ ಮಗುವಿಗೂ ಇಂಗ್ಲೀಷ್‌ ಕಲಿಸಬೇಕು, ಆ ಶಾಲೆನೇ ಬೇಕೆಂಬ ಆಸೆ ಪಡುವ ಪಾತ್ರ. ಹಾಗಾಗಿ ಅದು ಕಾಳಿಯಂತೆ ಕಾಣುತ್ತೆ’ ಎನ್ನುತ್ತಾರೆ.

ಚಿತ್ರದಲ್ಲಿ ಅಂಬಿಕ, ತಬಲಾ ನಾಣಿ, ಟಿ ಎಸ್‌ ನಾಗಾಭರಣ, ಸುಂದರ್‌, ಯತಿರಾಜ್‌, ಉಷಾ ಭಂಡಾರಿ, ರಘು ರಾಮನಕೊಪ್ಪ ಸೇರಿದಂತೆ ಅನೇಕರು ನಟಿಸಿದ್ದಾರೆ. ಯು. ಆರ್‌ ಉದಯ ಕುಮಾರ್‌ ಈ ಚಿತ್ರದ ನಿರ್ಮಾಪಕರು. ಚಿತ್ರಕ್ಕೆ ಗುರುಕಿರಣ್‌ ಸಂಗೀತ, ಗುಂಡ್ಲುಪೇಟೆ ಸುರೇಶ್‌ ಛಾಯಾಗ್ರಹಣ, ಕೆ ಎಂ ಪ್ರಕಾಶ್‌ ಸಂಕಲನ, ಥ್ರಿಲ್ಲರ್‌ ಮಂಜು ಸಾಹಸ, ಮೋಹನ್‌ ಬಿ ಕೆರೆ ಕಲಾ ನಿರ್ದೇಶನವಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.