ಕಾಡಿನ ಹುಡುಗನ ಕಾಡುವ ಕಥೆ

ಕಲಿವೀರನ ಆ್ಯಕ್ಷನ್‌ ಪ್ಯಾಕೇಜ್‌

Team Udayavani, Jan 17, 2020, 6:03 AM IST

an-20

ಕೆಲವರಿಗೆ ಪ್ರತಿಭೆ ಇರುತ್ತೆ. ಅವಕಾಶ ಇರಲ್ಲ. ಇನ್ನೂ ಕೆಲವರಿಗೆ ಅವಕಾಶ ಸಿಕ್ಕರೂ ಪ್ರತಿಭೆ ಮೂಲಕ ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಲ್ಲೊಂದು ಚಿತ್ರತಂಡ ಪ್ರತಿಭಾವಂತನನ್ನು ಗುರುತಿಸಿ, ಆತನಿಗೊಂದು ವೇದಿಕೆ ಕಲ್ಪಿಸುವ ಮೂಲಕ ಚಿತ್ರದ ನಾಯಕನನ್ನಾಗಿಸಿದೆ. ಹೌದು, ಆ ಚಿತ್ರದ ಹೆಸರು “ಕಲಿವೀರ’. ಆ ಪ್ರತಿಭಾವಂತನ ಹೆಸರು ಚಂದ್ರಶೇಖರ್‌.

ಚಂದ್ರಶೇಖರ್‌ ಒಂದು ರೀತಿಯ ಆಧುನಿಕ ಏಕಲವ್ಯನಂತೆ ಎಲ್ಲಾ ಕಲೆಗಳಲ್ಲೂ ಪರಿಣಿತಿ ಹೊಂದಿದ್ದಾರೆ. ಅವರು ರಂಗಕರ್ಮಿ, ಡ್ಯಾನ್ಸ್‌, ಸ್ಟಂಟ್ಸ್‌, ಮಾರ್ಷಲ್‌ ಆರ್ಟ್ಸ್ ಸೇರಿದಂತೆ ಹಲವು ಕಲೆಗಳ ಪ್ರಾಕಾರಗಳನ್ನು ಕಲಿತಿದ್ದಾರೆ. ಸಾಕಷ್ಟು ಸಾಹಸಗಳ ವಿದ್ಯೆಯನ್ನು ಕಲಿತಿದ್ದಾರೆ. ಇವರ ಪ್ರತಿಭೆ ಗಮನಿಸಿದ ನಿರ್ದೇಶಕ ಅವಿನಾಶ್‌ ಭೂಷಣ್‌, “ಕಲಿವೀರ’ ಚಿತ್ರಕ್ಕೆ ಸರಿಹೊಂದುತ್ತಾರೆಂದು ಇವರನ್ನೇ ಹೀರೋ ಮಾಡಿದ್ದಾರೆ. ಇದೊಂದು ಆಕ್ಷನ್‌ ಚಿತ್ರ. ಅದರಲ್ಲೂ ಸಾಕಷ್ಟು ಕುತೂಹಲ ಹಾಗೂ ಹಾಸ್ಯದೊಂದಿಗೆ ಸಾಗುವ ಚಿತ್ರ. ಬಹುತೇಕ ಹೊಸತನ ತುಂಬಿರುವ ಕಥೆಯಲ್ಲಿ ಹಲವು ಏರಿಳಿತಗಳಿವೆ. ರಿಯಲ್‌ ಲೈಫ‌ಲ್ಲೂ ತನ್ನವರು ಯಾರೂ ಇಲ್ಲದಿರುವ ಹೀರೋ, ಚಿತ್ರದಲ್ಲೂ ಅನಾಥರಾಗಿರುವ ಪಾತ್ರ ಮಾಡಿದ್ದಾರೆ. ಅವರು ಕಾಡೊಂದರಲ್ಲಿ ವಾಸಿಸುವ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಚಿತ್ರೀಕರಣ ಮುಗಿದಿದ್ದು, ಪ್ರೇಕ್ಷಕರ ಎದುರು ಬರಲು ತಯಾರಿ ನಡೆಸುತ್ತಿದೆ ಚಿತ್ರತಂಡ.

ಚಿತ್ರಕ್ಕೆ ಡಿಫ‌ರೆಂಟ್‌ ಡ್ಯಾನಿ ಸ್ಟಂಟ್ಸ್‌ ಮಾಡಿಸಿದ್ದಾರೆ. ಅವರ ಮೂರು ದಶಕಗಳ ಅನುಭವದಲ್ಲಿ ಸುಮಾರು 600 ಚಿತ್ರಗಳಿಗೆ ಸ್ಟಂಟ್‌ ಮಾಡಿಸಿದ್ದಾರೆ. ಈ ಚಿತ್ರದ ಹೀರೋ ಮಾಡುವ ಸಾಹಸ ಕಂಡು ಖುಷಿಯಲ್ಲೇ ಅವರಿಗೆ ಬಾಳೆಕಾಯಿ ಮಂಡಿ, ಸುರಿಯೋ ಮಳೆ, ಬೆಂಕಿ ಹಾಗೂ ಕಲರಿ ಕಲೆಗಳೊಂದಿಗೆ ಭರ್ಜರಿ ಫೈಟ್ಸ್‌ ಮಾಡಿಸಿದ್ದಾರಂತೆ.

ಚಿತ್ರಕ್ಕೆ ಚಿರಶ್ರೀ ಅಂಚನ್‌ ನಾಯಕಿಯಾಗಿದ್ದಾರೆ. ಪಾವನ ಗೌಡ ಅವರಿಲ್ಲಿ ಲಾಯರ್‌ ಆಗಿ ಕಾಣಿಸಿಕೊಂಡರೆ, ನೀನಾಸಂ ಅಶ್ವತ್ಥ್ ಅವರಿಲ್ಲಿ ನೆಗೆಟಿವ್‌ ಶೇಡ್‌ ಇರುವ ಪೊಲೀಸ್‌ ಅಧಿಕಾರಿ ಪಾತ್ರ ಮಾಡಿದ್ದಾರೆ. ತಬಲನಾಣಿಗೂ ಇಲ್ಲೊಂದು ವಿಶೇಷ ಪಾತ್ರವಿದೆಯಂತೆ. ದಾಂಡೇಲಿ ಸುತ್ತಮುತ್ತಲಿರುವ ಅರಣ್ಯ ಪ್ರದೇಶಗಳು, ಶಿವಮೊಗ್ಗ, ಕನಕಪುರ, ಬೆಂಗಳೂರು ಹಾಗೂ ಮುತ್ತತ್ತಿ ಭಾಗದಲ್ಲಿ ಚಿತ್ರೀಕರಣ ನಡೆಸಲಾಗಿದೆ.

ವಿ.ಮನೋಹರ್‌ ಸಂಗೀತವಿದೆ. ನಾಗೇಂದ್ರಪ್ರಸಾದ್‌, ಅರಸು ಅಂತಾರೆ ಗೀತೆ ರಚಿಸಿದ್ದಾರೆ. ಹಾಲೇಶ್‌ ಛಾಯಾಗ್ರಹಣ ಮಾಡಿದರೆ, ಎ.ಆರ್‌.ಕೃಷ್ಣ ಸಂಕಲನ ಮಾಡಿದ್ದಾರೆ. ಮುರಳಿ ನೃತ್ಯ ಸಂಯೋಜಿಸಿದ್ದಾರೆ. ಅಂದಹಾಗೆ, ಪ್ರತಿಭಾವಂತ ಹುಡುಗನನ್ನು ನೋಡಿದ ರಾಣೆಬೆನ್ನೂರಿನ ಶ್ರೀನಿವಾಸ್‌ ಹಾಗು ಮೂವರು ಗೆಳೆಯರು ಜ್ಯೋತಿ

ಆರ್ಟ್ಸ್ ಬ್ಯಾನರ್‌ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇವರೆಲ್ಲರಿಗು ಇದು ಮೊದಲ ಅನುಭವ. ಇತ್ತೀಚೆಗೆ ತಮ್ಮ ಚಿತ್ರದ ಕುರಿತು ಹೇಳಿಕೊಳ್ಳಲೆಂದೇ ಇಡೀ ಚಿತ್ರತಂಡ ಪತ್ರಕರ್ತರ ಎದುರು ಬಂದಿತ್ತು. ಎಲ್ಲವನ್ನೂ ಹೇಳಿಕೊಳ್ಳುವ ಮೂಲಕ ಹೊಸಬರ ಚಿತ್ರವನ್ನು ಬೆಂಬಲಿಸಿ ಎಂಬ ಮನವಿಯನ್ನು ಇಟ್ಟಿತು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.