ರಾಮಧಾನ್ಯದಲ್ಲಿ ಕನಕ ದರ್ಶನ


Team Udayavani, May 18, 2018, 6:00 AM IST

k-24.jpg

“ರಾಮ ಧಾನ್ಯ’ ಎಂಬ ಸಿನಿಮಾವೊಂದು ತಯಾರಾಗಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇದೇ 25 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ನೂರಾರು ಪ್ರದರ್ಶನ ಕಂಡು ಎಲ್ಲೆಡೆ ಮೆಚ್ಚುಗೆ ಪಡೆದಿರುವ ನಾಟಕವನ್ನು ಸಿನಿಮಾಗೆ ಅಳವಡಿಸಿದ್ದಾರೆ ಟಿ.ಎನ್‌ .ನಾಗೇಶ್‌. ಜನ ಸಿನಿಮಾವನ್ನು ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲ ನಾಗೇಶ್‌ ಅವರಲ್ಲಿದೆ. 

“ನಾಟಕವನ್ನು ಸಿನಿಮಾ ಮಾಡಿದಾಗ ಸಾಕಷ್ಟು ಭಯವಿತ್ತು. ಆದರೆ, ಸಿನಿಮಾದ ಮೊದಲ ಪ್ರತಿ ನೋಡಿ ನಿರ್ಮಾಪಕರು ಖುಷಿಯಾಗಿದ್ದಾರೆ. ಈ ಚಿತ್ರದಲ್ಲಿ ಕನಕದಾಸರು ಒಬ್ಬ ವೀರಯೋಧರಾಗಿದ ªರು, ಅವರು ಕೂಡಾ ಒಬ್ಬ ದಂಡನಾಯಕ ಎನ್ನುವುದನ್ನು ತೋರಿಸಲಾಗಿದೆ. ಇದು
ಪೌರಾಣಿಕ, ಐತಿಹಾಸಿಕ ಮತ್ತು ಸಾಮಾಜಿಕ ಹೀಗೆ ಮೂರು ಕಾಲಘಟ್ಟದಲ್ಲಿ ನಡೆಯುವ ಕಥೆ ಆಗಿರುವುದರಿಂದ ಅದೇ ರೀತಿಯ ಪಾತ್ರಗಳು, ತಾಣಗಳು ಇಲ್ಲಿರಲಿವೆ. ಕನಕದಾಸರ ಜೀವನದ ಕೆಲವು ಪ್ರಮುಖ ಘಟನೆಗಳು ಇಲ್ಲಿನ ಹೈಲೈಟ್‌. ಚಿತ್ರದ ಕಥೆ ಇಷ್ಟವಾಗಿ ಹತ್ತುಮಂದಿ ನಿರ್ಮಾಪಕರು ಸೇರಿ ಈ ಸಿನಿಮಾ ನಿರ್ಮಿಸಿದ್ದಾರೆ’ ಎಂದು ಹೇಳಿಕೊಂಡರು. ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದರು ಆರು ಮಂದಿ ನಿರ್ಮಾಪಕರು, ಸಿನಿಮಾ ಚೆನ್ನಾಗಿ ಮೂಡಿಬಂದ ಖುಷಿ ಹಂಚಿಕೊಳ್ಳುವ ಜೊತೆಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.

ಚಿತ್ರದಲ್ಲಿ ಯಶಸ್‌ ಸೂರ್ಯ ನಾಯಕರಾಗಿ ನಟಿಸಿದ್ದಾರೆ. ಸಾಮಾನ್ಯ ವ್ಯಕ್ತಿಯೊಬ್ಬ, ಕನಕದಾಸ ಮತ್ತು ದಂಡನಾಯಕನ ಕನಸು ಕಂಡಾಗ ಯಾವ ರೀತಿ ಇರುತ್ತಾರೆ ಎಂಬ ಪಾತ್ರದಲ್ಲಿ ಯಶಸ್‌ ಸೂರ್ಯ ನಟಿಸಿದ್ದಾರೆ. ಅವರಿಗೆ ನಟಿಸುವ ವೇಳೆ, ತಾನು ಯಾವ ಕಾಲಘಟ್ಟದ ಪಾತ್ರ ಮಾಡುತ್ತಿದೇನೆಂದು ಗೊಂದಲವಾಗಿತ್ತಂತೆ. ಚಿತ್ರದ ಬಗ್ಗೆ ಮಾತನಾಡುವ ಅವರು, “ಕಮರ್ಷಿಯಲ್‌ ಸಿನಿಮಾಗಳ ವರ್ಷಕ್ಕೆ ನೂರಕ್ಕೆ ಹೆಚ್ಚು ಬರುತ್ತವೆ. ಇಂತಹ ಸಿನಿಮಾಗಳು ವರ್ಷಕ್ಕೆ ಒಂದೋ, ಎರಡೋ ಬರೋದು ಹೆಚ್ಚು. ಈ ತರಹದ ಸಿನಿಮಾ ನಿರ್ಮಾಣ ಮಾಡಿ¨ ‌ ನಿರ್ಮಾಪಕರ ಧೈರ್ಯ ಮೆಚ್ಚಬೇಕು. ನಿರ್ದೇಶಕರು ಬಂದು ಕಥೆ ಹೇಳಿದಾಗ ಈ ತರಹದ ಪಾತ್ರ ಮಾಡಲು ಸಾಧ್ಯನಾ ಎಂದು ಯೋಚಿಸಿದೆ. ಆಮೇಲೆ ನಾಟಕ
ನೋಡಿ, ಆ ಕಲಾವಿದರಿಂದಲೂ ಸಲಹೆ ಪಡೆದೆ. ಇಲ್ಲಿ ಮೂರು ಶೇಡ್‌ನ‌ಲ್ಲಿ ಕಾಣಿಸಿಕೊಂಡಿದ್ದೇನೆ. ಪ್ರತಿ ಪಾತ್ರಕ್ಕೆ ಬಾಡಿ ಲಾಂಗ್ವೇಜ್‌ ಭಿನ್ನವಾಗಿದೆ’ ಎಂದು ಪಾತ್ರದ ಬಗ್ಗೆ ಹೇಳಿಕೊಂಡರು ಯಶಸ್‌ ಸೂರ್ಯ.

ನಾಯಕಿ ನಿಮಿಕಾ ರತ್ನಾಕರ್‌ಗೆ ಇದು ಮೊದಲ ಕನ್ನಡ ಸಿನಿಮಾ. ಮೊದಲ ಚಿತ್ರದಲ್ಲೇ ನಟನೆಗೆ ಅವಕಾಶವಿರುವ ಪಾತ್ರ ಸಿಕ್ಕ ಖುಷಿಹಂಚಿಕೊಂಡರು ನಿಮಿಕಾ. ಚಿತ್ರದಲ್ಲಿ ಅವರದ್ದು ಕೂಡಾ ಮೂರು ಶೇಡ್‌ನ‌ ಪಾತ್ರವಂತೆ. ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ ವೀರ್‌ ಸಮರ್ಥ್, ಸಂಭಾಷಣೆಕಾರ ಬಸವರಾಜ್‌ ಸೂಳೇರಿಪಾಳ್ಯ ಸೇರಿದಂತೆ ಚಿತ್ರತಂಡದ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.