ಐದು ಕಥೆಗಳ ಸುತ್ತ ‘ಪೆಂಟಗನ್’..: ತೆರೆಯತ್ತ ವಿಭಿನ್ನ ಪ್ರಯತ್ನ


Team Udayavani, Apr 7, 2023, 12:23 PM IST

kannada movie pentagon ready to release

ಗುರುದೇಶಪಾಂಡೆ ನಿರ್ಮಾಣ, ನಿರ್ದೇಶನದ “ಪೆಂಟಗನ್‌’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಏಕಕಾಲಕ್ಕೆ ಐದು ಕಥೆಗಳನ್ನು ತೆರೆಮೇಲೆ ಹೇಳಲಾಗುತ್ತಿದೆ. ಇತ್ತೀಚೆಗೆ ಚಿತ್ರದ ಹಾಡುಗಳು ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿರುವುದು ಚಿತ್ರತಂಡದ ಖುಷಿಗೆ ಕಾರಣವಾಗಿದೆ. “ಪೆಂಟಗನ್‌’ ಸಿನಿಮಾದಲ್ಲಿ ಬರುವ ಒಂದು ಕಥೆಯನ್ನು ಗುರು ದೇಶಪಾಂಡೆ ನಿರ್ದೇಶಿಸಿದರೆ, ಇನ್ನುಳಿದ ನಾಲ್ಕು ಕಥೆಗಳಿಗೆ ಆಕಾಶ್‌ ಶ್ರೀವತ್ಸ, ರಾಘು ಶಿವಮೊಗ್ಗ, ಚಂದ್ರ ಮೋಹನ್‌ ಮತ್ತು ಕಿರಣ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ.

ಐದೂ ಕಥೆಗಳ ಕಥಾವಸ್ತು ಬೇರೆಯಾಗಿದ್ದರೂ, ಎಲ್ಲದರಲ್ಲೂ ಒಂದು ಸಾಮಾನ್ಯ ವಿಷಯ ಅಡಕವಾಗಿದೆ. ಈ ವಿಷಯವೇ ಎಲ್ಲ ಕಥೆಗಳಿಗೂ ಒಂದು ಕಾಮನ್‌ ಕೊಂಡಿಯಾಗಿರುತ್ತದೆ ತಮ್ಮ ಬ್ಯಾನರ್‌ ಬಗ್ಗೆ ಮಾತನಾಡುವ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್‌ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾ ವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್‌ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ’ ಎನ್ನುತ್ತಾರೆ.

ಇದನ್ನೂ ಓದಿ:ತಪ್ಪಿದ congress ಟಿಕೆಟ್: ಅಭಿಮಾನಿಗಳ ಸಭೆ ಕರೆದ ದತ್ತಾ ಮೇಷ್ಟ್ರು

ಇನ್ನು, “ಪೆಂಟಗನ್‌’ ಸಿನಿಮಾದ ಮೂರನೇ ಕಥೆಯಲ್ಲಿ ಬರುವ “ಕಾಮನಬಿಲ್ಲು ಮೂಡುತಿದೆ…’ ಎಂಬ ರೊಮ್ಯಾಂಟಿಕ್‌ ಲಿರಿಕಲ್‌ ವಿಡಿಯೋ ಹಾಡು ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿದೆ. ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಗೀತೆಗೆ ನಾಗಾರ್ಜುನ ಶರ್ಮಾ ಸಾಹಿತ್ಯವಿದೆ. ಸಂತೋಷ ವೆಂಕಿ ಮತ್ತು ಇಂಚರ ರಾವ್‌ ಗೀತೆಗೆ ಧ್ವನಿಯಾಗಿದ್ದಾರೆ.

ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಮೂಡಿ ಬಂದಿರುವ “ಪೆಂಟಗನ್‌’ ಮೂರನೇ ಅಧ್ಯಾಯದಲ್ಲಿ ಪ್ರಕಾಶ್‌ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ, ಸಾಗರ್‌, ರಾಕೇಶ್‌ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯುವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ ಎಂಬುದು ಚಿತ್ರತಂಡ ಮಾಹಿತಿ. ಈ ಅಧ್ಯಾಯಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣ, ವೆಂಕಟೇಶ ಯುಡಿವಿ ಸಂಕಲನವಿದೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.