ಯಜಮಾನ ದರ್ಶನ ಭಾಗ್ಯ


Team Udayavani, Mar 1, 2019, 12:30 AM IST

v-30.jpg

ಕೊನೆಗೂ ಕಾಯುವಿಕೆಗೆ ತೆರೆಬಿದ್ದಿದೆ. ಇನ್ನೇನಿದ್ದರೂ ಥಿಯೇಟರ್‌ನತ್ತ ದಾಪುಗಾಲು ಹಾಕುವ ಸಮಯ …
– ಹೌದು, ದರ್ಶನ್‌ ಅಭಿಮಾನಿಗಳಿಗೆ ಹಬ್ಬ. ಅದಕ್ಕೆ ಕಾರಣ ದರ್ಶನ್‌ ನಟಿಸಿರುವ “ಯಜಮಾನ’ ಚಿತ್ರ ಇಂದು ಬಿಡುಗಡೆಯಾಗುತ್ತಿರುವುದು. ದರ್ಶನ್‌ ಸಿನಿಮಾ ಬಿಡುಗಡೆಯಾಗದೇ ಸುಮಾರು ಒಂದೂವರೆ ವರ್ಷ ದಾಟಿತ್ತು. ಒಬ್ಬ ಸ್ಟಾರ್‌ ನಟನ ಸಿನಿಮಾ ವರ್ಷಕ್ಕೆ ಒಂದಾದರೂ ಬಿಡುಗಡೆಯಾಗದೇ ಹೋದರೆ ಸಹಜವಾಗಿಯೇ ಅಭಿಮಾನಿಗಳು ನಿರಾಸೆಗೊಳ್ಳುತ್ತಾರೆ. ತಮ್ಮ ನೆಚ್ಚಿನ ನಟನ ಸಿನಿಮಾವನ್ನು ಯಾವಾಗ ಕಣ್ತುಂಬಿಕೊಳ್ಳುವುದು ಎಂದು ಬೇಸರಿಸಿಕೊಳ್ಳುತ್ತಾರೆ. ದರ್ಶನ್‌ ವಿಷಯದಲ್ಲಿ ಇದೇ ಆಗಿತ್ತು. “ತಾರಕ್‌’ ನಂತರ ದರ್ಶನ್‌ ಅವರ ಯಾವ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. “ಕುರುಕ್ಷೇತ್ರ’ವನ್ನು ಕಣ್ತುಂಬಿಕೊಳ್ಳಬಹುದೆಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ಆ ಅವಕಾಶ ಸಿಗಲೇ ಇಲ್ಲ. ಹೀಗಿರುವಾಗಲೇ ಅಭಿಮಾನಿಗಳ ಮುಖದಲ್ಲಿ ನಗು ತಂದಿದ್ದು “ಯಜಮಾನ’. ಟೀಸರ್‌, ಹಾಡು, ಟ್ರೇಲರ್‌ … ಹೀಗೆ ಚಿತ್ರದ ಒಂದೊಂದೇ ಅಂಶಗಳು ಕುತೂಹಲ ಹೆಚ್ಚಿಸುತ್ತಾ ಹೋಗಿವೆ. ಅದೇ ಕಾರಣದಿಂದ ಅಭಿಮಾನಿಗಳು ಸಿನಿಮಾವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ದರ್ಶನ್‌ ಕೂಡಾ ಈ ಚಿತ್ರ ಅಭಿಮಾನಿಗಳ ನಿರೀಕ್ಷೆಯನ್ನು ಸುಳ್ಳು ಮಾಡಲ್ಲ ಎಂಬ ಭರವಸೆ ನೀಡಿದ್ದಾರೆ. “ಯಜಮಾನ’ ಒಂದು ಅದ್ಭುತವಾದ ಕಥೆ. ಇವತ್ತಿನ ಸಂದರ್ಭಕ್ಕೆ ತುಂಬಾ ಹೊಂದಿಕೆಯಾಗುತ್ತದೆ. ಅಭಿಮಾನಿಗಳು ಈ ಚಿತ್ರದ ಮೇಲೆ ಏನು ನಿರೀಕ್ಷೆ ಇಟ್ಟಿದ್ದಾರೋ ಆ ನಿರೀಕ್ಷೆ ಸುಳ್ಳಾಗಲ್ಲ’ ಎನ್ನುತ್ತಾರೆ ದರ್ಶನ್‌. ಈ ಚಿತ್ರದ ಮತ್ತೂಂದು ವಿಶೇಷವೆಂದರೆ “ಯಜಮಾನ’ ಮೂಲಕ ಸಂಗೀತ ನಿರ್ದೇಶಕ ಹರಿಕೃಷ್ಣ ನಿರ್ದೇಶಕರಾಗಿದ್ದಾರೆ. ಪಿ.ಕುಮಾರ್‌ ಜೊತೆ ಹರಿಕೃಷ್ಣ ಅವರಿಗೆ ನಿರ್ದೇಶನದ ಕ್ರೆಡಿಟ್‌ ಸಿಕ್ಕಿದೆ. ಸಹಜವಾಗಿಯೇ ಹರಿಕೃಷ್ಣ ಅವರಿಗೆ ಯಾಕೆ ನಿರ್ದೇಶಕನ ಕ್ರೆಡಿಟ್‌ ಎಂಬ ಪ್ರಶ್ನೆ ಇದೆ. ಇದಕ್ಕೂ ದರ್ಶನ್‌ ಉತ್ತರಿಸುತ್ತಾರೆ. “ಯಜಮಾನ’ ಚಿತ್ರದ ನಿರ್ದೇಶನದಲ್ಲಿ ಹರಿಕೃಷ್ಣ ಅವರ ಹೆಸರು ಸೇರುತ್ತಿದ್ದಂತೆ ಅನೇಕರಲ್ಲಿ ಯಾಕೆ ಎಂಬ ಪ್ರಶ್ನೆ ಇದೆ. ಈ ಸಿನಿಮಾಕ್ಕೆ ಓಂಕಾರ ಹಾಕಿದ ದಿನದಿಂದಲೂ ಹರಿಕೃಷ್ಣ ಸಂಪೂರ್ಣವಾಗಿ ತೊಡಗಿಸಿ ಕೊಂಡಿದ್ದಾರೆ. ಅವರ ಬೇರೆ ಕೆಲಸಗಳನ್ನು ಬದಿಗಿಟ್ಟು, ರಾತ್ರಿ ಹಗಲು ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಈ ಚಿತ್ರಕ್ಕೆ ಅವರ ಪ್ರಯತ್ನ ಅಗಾಧವಾದುದು, ಅಮೋಘವಾದುದು ಮತ್ತು ತುಂಬಾ ದೊಡ್ಡದು. 

ಹಾಗಾಗಿ, ಇಡೀ ತಂಡ ಸೇರಿ ಚರ್ಚಿಸಿ, ಅವರಿಗೆ ಕ್ರೆಡಿಟ್‌ ಕೊಟ್ಟೆವು’ ಎನ್ನುವುದು ದರ್ಶನ್‌ ಮಾತು. ಇನ್ನು ಚಿತ್ರದ ಟೈಟಲ್‌ ಬಗ್ಗೆ ಮಾತನಾಡುವ ದರ್ಶನ್‌, “ಈ ಕಥೆಗೆ ಟೈಟಲ್‌ ತುಂಬಾ ಹೊಂದಿಕೆಯಾಗುತ್ತದೆ ಎಂಬ ಕಾರಣಕ್ಕೆ ಇಟ್ಟೆವು. ಅದು ಬಿಟ್ಟು ವಿಷ್ಣುವರ್ಧನ್‌ ಅವರ “ಯಜಮಾನ’ಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಯಾವತ್ತಿದ್ದರೂ ಅವರೇ “ಯಜಮಾನ’ ಎನ್ನುತ್ತಾರೆ ದರ್ಶನ್‌. “ಯಜಮಾನ’ ಒಂದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾವಾಗಿದ್ದು, ಹೈವೋಲ್ಟೆàಜ್‌ ಫೈಟ್‌ಗಳಿವೆ. ಚಿತ್ರದಲ್ಲಿರುವ ಫೈಟ್‌ಗಳಲ್ಲಿ ದರ್ಶನ್‌ ಅವರಿಗೆ ಸಾಹಸ ನಿರ್ದೇಶಕ ವಿನೋದ್‌ ಮಾಡಿರುವ ಫೈಟ್‌ ತುಂಬಾ ಇಷ್ಟವಂತೆ. “ಚಿತ್ರದಲ್ಲಿರುವ ಫೈಟ್‌ಗಳಲ್ಲಿ ನನಗೆ ವೈಯಕ್ತಿಕವಾಗಿ ಸ್ಟಂಟ್‌ ಮಾಸ್ಟರ್‌ ವಿನೋದ್‌ ಮಾಡಿರುವ ಫೈಟ್‌ ತುಂಬಾ ಇಷ್ಟ. ವಿನೋದ್‌ ನಮ್ಮ ಬೆಂಗಳೂರು ಹುಡುಗ. ನಾವು ಹೊರಗಡೆಯಿಂದ ಕರೆದುಕೊಂಡು ಬಂದವರಿಗೆ ಪ್ಯಾಂಟಮ್‌ ಕ್ಯಾಮರಾ ಸೇರಿದಂತೆ ಅವರು ಕೇಳಿದ್ದನ್ನು ಕೊಡುತ್ತೇವೆ. ಹಾಗಾಗಿ, ಶೈಲಜಾ ಮೇಡಂ ಅವರಲ್ಲಿ, ಫೈಟ್‌ ಸಿಚುವೇಶನ್‌ಗೆ ವಿನೋದ್‌ ಕೇಳುವುದನ್ನು ನೀಡಿ ಎಂದಿದ್ದೆ. ತುಂಬಾ ಅದ್ಭುತವಾಗಿ ಬಂದಿದೆ ಆ ಫೈಟ್‌’ ಎನ್ನುತ್ತಾರೆ. 

ಮೀಡಿಯಾ ಹೌಸ್‌ ಬ್ಯಾನರ್‌ನಲ್ಲಿ ಶೈಲಜಾ ನಾಗ್‌ ಹಾಗೂ ಬಿ.ಸುರೇಶ್‌ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ತಾನ್ಯಾ, ದೇವರಾಜ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. 

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.