ಪಾತ್ರಧಾರಿ ಇಲ್ಲದ ಮೇಲೆ…

ಕಪಟದ ಹಿಂದಿನ ಮಾತು

Team Udayavani, Sep 27, 2019, 5:00 AM IST

x-29

ಆ ಚಿತ್ರದಲ್ಲಿ ನಟಿಸಿದ ಯಾರೊಬ್ಬ ಕಲಾವಿದರೂ ಇರಲಿಲ್ಲ. ಬದಲಾಗಿ ಸಿನಿಮಾಕ್ಕೆ ಸಂಬಂಧಪಡದ ಮೂವರು ವೇದಿಕೆ ಮೇಲಿದ್ದರು. ಜೊತೆಗೆ ಆ ಸಿನಿಮಾದ ನಿರ್ದೇಶಕ. ಆ ಮೂವರು ಕನ್ನಡ ಚಿತ್ರರಂಗದ ಬಿಝಿ ಇರುವ ವ್ಯಕ್ತಿಗಳು. ಆದರೂ ಹೊಸಬರಿಗೆ, ಹೊಸ ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕೆಂಬ ಉದ್ದೇಶ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಬಂದಿದ್ದರು. ಆದರೆ, ಚಿತ್ರದಲ್ಲಿ ನಟಿಸಿದ ಕಲಾವಿದರಿಗೆ ಮಾತ್ರ ತಮ್ಮ ಸಿನಿಮಾದ ಪ್ರಮೋಶನ್‌ಗೆ ಬರುವಷ್ಟು ಸಮಯವಿರಲಿಲ್ಲ. ಅಂದಹಾಗೆ, ಇದು “ಕಪಟ ನಾಟಕ ಪಾತ್ರಧಾರಿ’ ಸಿನಿಮಾದ ವಿಷಯ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆ ನಡೆಯಿತು. ನಿರ್ದೇಶಕರಾದ ಸಿಂಪಲ್‌ ಸುನಿ, ತರುಣ್‌ ಸುಧೀರ್‌ ಹಾಗೂ ನಟಿ ಸೋನು ಗೌಡ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಹಾರೈಸಿದರು. ಅಂದು ವೇದಿಕೆಯಲ್ಲಿ ಏಕಾಂಗಿಯಾಗಿದ್ದ ಚಿತ್ರದ ನಿರ್ದೇಶಕರಿಗೆ ಸಾಥ್‌ ನೀಡಿ ಧೈರ್ಯ ತುಂಬಿದ್ದು ಕೂಡಾ ಅವರೇ.

ಹೊಸ ಜಾನರ್‌ನಲ್ಲಿ ಗುರುತಿಸಿಕೊಳ್ಳುತ್ತಿರುವ ಸಿನಿಮಾಗಳ ಸಾಲಿನಲ್ಲಿ “ಕಪಟ ನಾಟಕ ಪಾತ್ರಧಾರಿ’ ಕೂಡಾ ಸೇರುತ್ತದೆ. ಚಿತ್ರದ ಟ್ರೇಲರ್‌ ಭರವಸೆಯಿಂದ ಕೂಡಿದೆ. ಇಂತಹ ಸಿನಿಮಾಗಳ ಪ್ರಮೋಶನ್‌ಗೆ ಕಲಾವಿದರು ಬರಬೇಕು ಎನ್ನುವುದು ತರುಣ್‌ ಮಾತು. ನಿರ್ದೇಶಕ ಸುನಿ ಮಾತನಾಡಿ, “ನಾನು ಈ ಸಿನಿಮಾವನ್ನು ನೋಡಿದ್ದೇನೆ. ತುಂಬಾ ಚೆನ್ನಾಗಿ ಮಾಡಿದ್ದಾರೆ. ಸೀಟಿನಂಚಿನಲ್ಲಿ ಕುಳಿತು ನೋಡುವ ಸಿನಿಮಾ. ಸಿನಿಮಾ ನೋಡುತ್ತಾ ನಾವು ಕಥೆಯೊಂದಿಗೆ ಸೇರಿಕೊಳ್ಳುತ್ತೇವೆ’ ಎಂದರು. ನಿರ್ದೇಶಕ ಕ್ರಿಶ್‌ ಕಲಾವಿದರು ಗೈರಾಗಿರುವ ಬಗ್ಗೆ ಹೆಚ್ಚು ಮಾತನಾಡಲಿಲ್ಲ. ಬದಲಾಗಿ ಚಿತ್ರದ ಟ್ರೇಲರ್‌ ಹಾಗೂ ಹಾಡುಗಳನ್ನು ತೋರಿಸಿ, ಚಿತ್ರದ ಬಗ್ಗೆ ಮಾತನಾಡಿದರು. ಇದೊಂದು ಥ್ರಿಲ್ಲರ್‌ ಜಾನರ್‌ ಕಥೆಯಾಗಿದ್ದು, ಒಬ್ಬ ಆಟೋ ಡ್ರೈವರ್‌ ಸುತ್ತ ಸಾಗುತ್ತದೆ. ಚಿತ್ರದಲ್ಲಿ ಲವ್‌ಸ್ಟೋರಿಯನ್ನು ಬೆರೆಸಲಾಗಿದೆ ಎಂದು ವಿವರ ನೀಡಿದರು. ನಿರ್ದೇಶಕ ಕ್ರಿಶ್‌ ಕಥೆ ಮಾಡಿಕೊಂಡು ಈ ಕಥೆಗೆ ಯಾರು ಹೊಂದಿಕೆಯಾಗುತ್ತಾರೆಂದು ಯೋಚಿಸುತ್ತಿದ್ದ ಸಮಯದಲ್ಲಿ ಬಾಲು ನಾಗೇಂದ್ರ ಅವರ “ಹುಲಿರಾಯ’ ಟ್ರೇಲರ್‌ ರಿಲೀಸ್‌ ಆಗಿತ್ತಂತೆ. ಆ ಟ್ರೇಲರ್‌ ನೋಡಿ, “ನನ್ನ ಕಥೆಗೆ ಇವರೇ ಫಿಕ್ಸ್‌’ ಎಂದು ಹೀರೋ ಮಾಡಿದರಂತೆ.

ಚಿತ್ರದಲ್ಲಿ ನಾಯಕ ಬಾಲು ನಾಗೇಂದ್ರ ಅವರಿಗೆ ಸಂಗೀತಾ ಭಟ್‌ ನಾಯಕಿ. ವಿದೇಶದಲ್ಲಿದ್ದ ಕಾರಣ ಸಂಗೀತಾ, ಅಲ್ಲಿಂದಲೇ ವಿಡಿಯೋವೊಂದನ್ನು ಕಳುಹಿಸಿ ಚಿತ್ರಕ್ಕೆ ಶುಭಕೋರಿದರು. ಚಿತ್ರಕ್ಕೆ ಅದಿಲ್‌ ನದಾಫ್ ಸಂಗೀತವಿದೆ.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.