ಕಥೆಗೂ ಶೀರ್ಷಿಕೆಗೂ ಸಂಬಂಧ ಹುಡುಕಬೇಡಿ

ಅರ್ಥವಿಲ್ಲದ ಟೈಟಲ್‌ಗೆ ಮುಹೂರ್ತ ಸಂಭ್ರಮ

Team Udayavani, May 3, 2019, 6:00 AM IST

Suchi-Title

ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಶೀರ್ಷಿಕೆಯನ್ನು ಇಡಬೇಕಾದರೆ, ಚಿತ್ರತಂಡ ಸಾಕಷ್ಟು ಅಳೆದು ಅದಕ್ಕೊಪ್ಪುವ ಹೆಸರನ್ನು ಇಡುತ್ತದೆ. ಕೆಲವರು ಚಿತ್ರಕ್ಕೆ ಮೊದಲೇ ಶೀರ್ಷಿಕೆಯನ್ನಿಟ್ಟು ನಂತರ ಅದರ ಮೇಲೆ ಕಥೆ ಮಾಡಿ, ಅದನ್ನು ಸಿನಿಮಾ ಮಾಡಿದ ನಿದರ್ಶನಗಳೂ ಚಿತ್ರರಂಗದಲ್ಲಿ ಸಾಕಷ್ಟಿದೆ.

ಇನ್ನು ಕೆಲವರು ಬೇಕೆಂದೆ ಒಂದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡು, ಪ್ರಚಾರ ಗಿಟ್ಟಿಸಿಕೊಳ್ಳಲು ತಮ್ಮ ಚಿತ್ರಕ್ಕೆ ಚಿತ್ರ-ವಿಚಿತ್ರ ಟೈಟಲ್‌ಗ‌ಳನ್ನು ಇಡುವುದನ್ನೂ ಚಿತ್ರರಂಗದಲ್ಲಿ ಆಗಾಗ್ಗೆ ಕಾಣುತ್ತೇವೆ. ಆದರೆ ಇಲ್ಲೊಂದು ಚಿತ್ರತಂಡ ಆಡಿಯನ್ಸ್‌ಗೆ ಕ್ಯಾಚಿಯಾಗಿದೆ ಅನ್ನೋ ಏಕೈಕ ಕಾರಣಕ್ಕೆ ತಮ್ಮ ಚಿತ್ರಕ್ಕೆ ವಿಚಿತ್ರ ಹೆಸರನ್ನಿಟ್ಟಿದೆ. ಅಂದಹಾಗೆ, ಆ ಚಿತ್ರದ ಹೆಸರು “ಕಾರ್ಕಿ’.

ಏನಿದು “ಕಾರ್ಕಿ’? ಎಂದರೆ “ಆ ಟೈಟಲ್‌ಗೆ ಅರ್ಥವೇ ಇಲ್ಲ’ ಅಂತಾರೆ ಚಿತ್ರದ ನಿರ್ದೇಶಕರು! “ಇತ್ತೀಚೆಗೆ ವಿಭಿನ್ನ ಟೈಟಲ್‌ಗ‌ಳ ಚಿತ್ರಗಳು ಬರುತ್ತಿರುವುದರಿಂದ, ಆಡಿಯನ್ಸ್‌ಗೆ ಕ್ಯಾಚಿಯಾಗಿ ಕಾಣುತ್ತದೆ. ಟೈಟಲ್‌ ಬೇಗ ಜನರನ್ನ ರೀಚ್‌ ಆಗುತ್ತದೆ ಅನ್ನೋ ಕಾರಣಕ್ಕೆ, ಇಂಥದ್ದೊಂದು ಡಿಫ‌ರೆಂಟ್‌ ಟೈಟಲ್‌ ಇಟ್ಟುಕೊಂಡಿದ್ದೇವೆ’ ಎನ್ನುವುದು ನಿರ್ದೇಶಕ ಲೋಕೇಶ್‌ ಪ್ರಭು ಮಾತು.

ಇತ್ತೀಚೆಗೆ “ಕಾರ್ಕಿ’ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಇದೇ ವೇಳೆ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿಯನ್ನೂ ಕರೆದಿತ್ತು. ಆದರೆ ಚಿತ್ರದ ಬಗ್ಗೆ ಏನಾದರೂ ಹೇಳಬಹುದು ಗಂಟೆಗಟ್ಟಲೆ ಎಲ್ಲರೂ ಕಾದು ಕುಳಿತಿದ್ದರೂ, ಚಿತ್ರದ ನಿರ್ಮಾಪಕರು, ನಿರ್ದೇಶಕರು ಅದ್ಯಾವುದರ ಪರಿವೇ ಇಲ್ಲದಂತೆ ಓಡಾಡಿಕೊಂಡಿದ್ದರು. ಕೊನೆಗೆ ಪತ್ರಿಕಾಗೋಷ್ಠಿಯಲ್ಲಿ ಕಾದು ಕಾದು ಸುಸ್ತಾದ ಪತ್ರಕರ್ತರೇ ನಿರ್ದೇಶಕರು – ನಿರ್ಮಾಪಕರನ್ನು ಕರೆದು ಮಾತನಾಡಿಸಿದರೂ, ಅವರಿಗೆ ಕಾದಿದ್ದು ಮಾತ್ರ ನಿರಾಸೆ.

“ಕಾರ್ಕಿ’ ಚಿತ್ರದ ಒನ್‌ಲೈನ್‌ ಕಥೆ ಏನು? ಚಿತ್ರದಲ್ಲಿ ಏನು ಹೇಳಲು ಹೊರಟಿದ್ದೀರಿ? ಇದು ಯಾವ ಜಾನರ್‌ನ ಸಿನಿಮಾ..? ಹೀಗೆ ಹತ್ತಾರು ಪ್ರಶ್ನೆಗಳು ತೂರಿಬಂದರೂ, ಚಿತ್ರತಂಡ ಮಾತ್ರ “ಅವರನ್‌ ಬಿಟ್‌ ಇವರ್ಯಾರು’ ಎಂಬ “ಕಣ್ಣಾಮುಚ್ಚೆ’ ಆಟದಂತೆ ಒಬ್ಬರ ಮುಖವನ್ನು ಒಬ್ಬರು ನೋಡುತ್ತಾ ಹಲ್ಲು ಕಿರಿಯುತ್ತ “ಊಹ್ನೂ..’ ಎಂದು ತಲೆಯಾಡಿಸುತ್ತ ನಿಂತು ಬಿಟ್ಟಿತು.

ಕೊನೆಗೂ ಪಟ್ಟುಬಿಡದೆ ಒಂದಷ್ಟು ಕೆದಕಿದ ಪತ್ರಕರ್ತರಿಗೆ ಇದೊಂದು ಸೈಕಲಾಜಿಕಲ್‌ ಸಸ್ಪೆನ್ಸ್‌ – ಥ್ರಿಲ್ಲರ್‌ ಚಿತ್ರ. ನಗರ ಪ್ರದೇಶದ ಹುಡುಗರ ಒಂದು ದಿನದ ಕಥೆ. ಚಿತ್ರದಲ್ಲಿದ್ದು, ಈ ಜನರೇಷನ್‌ ಯೋಚನೆ ಹೇಗಿದೆ ಅನ್ನೊದು ಚಿತ್ರ. ಚಿತ್ರದಲ್ಲಿ ಪ್ರತಿ ಪಾತ್ರಕ್ಕೂ 2 ಗೆಟಪ್‌ಗ್ಳಿವೆ. ಬೆಂಗಳೂರು, ದಾಂಡೇಲಿ, ಯಲ್ಲಾಪುರ, ರಾಮೇಶ್ವರಂ ಸುತ್ತಮುತ್ತ ಸುಮಾರು 30 ದಿನ ಚಿತ್ರದ ಶೂಟಿಂಗ್‌ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿತು.

ಇನ್ನು “ವರ್ಲ್ಡ್ ಕ್ಲಾಸ್‌ ಪಿಕ್ಚರ್’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ಕಾರ್ಕಿ’ ಚಿತ್ರವನ್ನು ಆರ್‌.ಎಸ್‌ ಕುಮಾರ್‌, ಸಂಪತ್‌ ಕುಮಾರ್‌, ಕೃಷ್ಣ ಕುಮಾರ್‌, ಅಕ್ಷಯ್‌ ರಾವ್‌ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ರೋಜರ್‌ ನಾರಾಯಣ್‌, ಐಶ್ವರ್ಯಾ, ಪಾವನಾ, ರಿಯಾನ್ಷಿ, ಚಿತ್ರದ ಹಾಡುಗಳಿಗೆ ಯದುನಂದನ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಜಿತಿನ್‌ ದಾಸ್‌ ಛಾಯಾಗ್ರಹಣ, ಮಾಸ್‌ ಮಾದ ಸಾಹಸ, ಪುರುಷೋತ್ತಮ್‌ ಕಲಾ ನಿರ್ದೇಶನವಿದೆ. ಚಿತ್ರಕ್ಕೆ ಲೋಕೇಶ್‌ ಪ್ರಭು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

“ಕಾರ್ಕಿ’ ಚಿತ್ರದ ಮುಹೂರ್ತ ಸಮಾರಂಭದಲ್ಲಿ ನಟ ನೆನಪಿರಲಿ ಪ್ರೇಮ್‌, ಧನಂಜಯ್‌, ನಿರ್ದೇಶಕ ವಿಜಯ ಪ್ರಸಾದ್‌ ಮೊದಲಾದವರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು. ಒಟ್ಟಾರೆ ಯಾವುದೇ ಪೂರ್ವತಯಾರಿ ಇಲ್ಲದೆ ಅವ್ಯವಸ್ಥಿತವಾಗಿ ಶುರುವಾಗಿರುವ “ಕಾರ್ಕಿ’ ಅದೆಷ್ಟರ ಮಟ್ಟಿಗೆ ಪ್ರೇಕ್ಷಕರ ಗಮನ ಸೆಳೆಯುತ್ತದೆಯೋ ದೇವರೇ ಬಲ್ಲ..!

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.