ಕಥೆ ಕಟ್ಟಿದವರ ಕಥೆ!


Team Udayavani, Apr 20, 2018, 6:10 AM IST

Kattu-Kathe_(129)-Soorya-,S.jpg

ಕನ್ನಡದಲ್ಲಿ ಈಗೀಗ ವಿಭಿನ್ನ ಶೀರ್ಷಿಕೆಗಳೊಂದಿಗೆ ಬರುತ್ತಿರುವ ಚಿತ್ರಗಳ ಸಾಲಿಗೆ “ಕಟ್ಟುಕಥೆ’ ಹೊಸ ಸೇರ್ಪಡೆ. ಈಗಾಗಲೇ ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಬಿಡುಗಡೆಗೆ ಅಣಿಯಾಗಿದೆ. ಈ ಚಿತ್ರಕ್ಕೆ “ಕಟ್ಟುಕಥೆ’ ಎಂಬ ಶೀರ್ಷಿಕೆ ಇಟ್ಟಿದ್ದರೂ, “ಎ ರಿಯಲ್‌ ಸ್ಟೋರಿ’ ಎಂಬ ಅಡಿಬರಹವಿದೆ. ರಾಜ್‌ಪ್ರವೀಣ್‌ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 

ಈಗಂತೂ ಯಾರಾದರೂ, ಒಂದು ವಿಷಯ ಹೇಳಿದರೆ, ಅದು ನಿಜವೋ, ಸುಳ್ಳೋ ಎಂಬ ಪ್ರಶ್ನೆಗಳು ಎದುರಾಗುತ್ತವೆ. ಅದರಲ್ಲೂ “ಕಟ್ಟುಕಥೆ’ ಇರಬಹುದೇನೋ ಎಂಬ ಮಾತುಗಳೇ ಹೆಚ್ಚು. ಇದು ನಿಜ ಬದುಕಿನ ಒಂದು ಎಳೆ ಇಟ್ಟುಕೊಂಡು ಕಥೆ ಕಟ್ಟಿದ್ದಾರೆ ನಿರ್ದೇಶಕರು. ನಾಯಕ ಇಲ್ಲಿ ಕಿವುಡ. ಅವನು ಹುಡುಗಿಯೊಬ್ಬಳನ್ನು ಪ್ರೀತಿಸುತ್ತಾನೆ. ಏನೋ ಹೇಳಿದರೆ, ಬೇರೆಯ್ದೆà ಅರ್ಥ ಮಾಡಿಕೊಂಡು, ಇಲ್ಲದ ಅವಾಂತರ ಹುಟ್ಟುಹಾಕುತ್ತಾನೆ. ಆಮೇಲೆ ಏನೆಲ್ಲಾ ನಡೆದುಹೋಗುತ್ತೆ ಎಂಬುದರ ಹೂರಣ “ಕಟ್ಟು ಕಥೆ’ಯಲ್ಲಿದೆ ಎಂಬುದು ನಿರ್ದೇಶಕರ ಹೇಳಿಕೆ.

ಚಿತ್ರದಲ್ಲಿ ರಾಜೇಶ್‌ ನಟರಂಗ ಅವರಿಗೊಂದು ಮುಖ್ಯವಾದ ಪಾತ್ರವಿದೆ. “ಕೆಂಡ ಸಂಪಿಗೆ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿ ಪಾತ್ರ ಮಾಡಿದ್ದರಿಂದ ಬಹುತೇಕ ಅಂತಹ ಪಾತ್ರಗಳೇ ಅವರನ್ನು ಹುಡುಕಿ ಬಂದವಂತೆ.  ಇಲ್ಲೂ ಅಂಥದ್ದೊಂದು ಪಾತ್ರವಿದೆ. ಈಗಿನ ವ್ಯವಸ್ಥೆ ಕುರಿತಾದ ಚಿತ್ರಣ ಇಲ್ಲಿದೆ. ನೋಡುವ ಪ್ರೇಕ್ಷಕರಿಗೆ ಕ್ಲೈಮ್ಯಾಕ್ಸ್‌ ಏನೆಂದು ಗೊತ್ತಾದರೂ, ಅಲ್ಲಿನ ಪಾತ್ರಗಳಿಗೆ ಮಾತ್ರ ಗೊತ್ತಾಗಲ್ಲ. ಇಲ್ಲಿನ ವಿಶೇಷವೆಂದರೆ, ಎಲ್ಲಾ ಪಾತ್ರಗಳ ಹೆಸರು ಭಿನ್ನವಾಗಿವೆ ಎಂಬುದು ಅವರ ಮಾತು.

ಮಸ್ತಿ ಇಲ್ಲಿ, ಸರಳ ಮಾತುಗಳನ್ನು ಪೋಣಿಸಿದ್ದಾರಂತೆ. ಸೂರ್ಯ ಚಿತ್ರದ ನಾಯಕ. ಅವರಿಗೆ ಸ್ವಾತಿ ಕೊಂಡೆ ನಾಯಕಿ. ಬಹುತೇಕ ಇಲ್ಲಿ ರಂಗಭೂಮಿ ಕಲಾವಿದರು ಕಾಣಿಸಿಕೊಂಡಿದ್ದಾರಂತೆ. ಮಿತ್ರ ಅವರಿಗೆ “ರಾಗ’ ನಂತರ ಬಂದ ಅವಕಾಶ ಇದಂತೆ. ಇಲ್ಲೊಂದು ವಿಶೇಷ ಪಾತ್ರವಿದ್ದು, ಅದನ್ನು ಸಿನಿಮಾದಲ್ಲೇ ನೋಡಬೇಕು ಎಂಬುದು ಅವರ ಮಾತು.

ಮಹದೇವ ಮೈಸೂರು ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ಅವರಿಗೆ ನಿರ್ದೇಶಕರು ಏನು ಮಾಡುತ್ತಾರೆ ಎಂಬ ಬಗ್ಗೆ ಗೊಂದಲವಿತ್ತಂತೆ. ಆದರೆ, ಈಗ ಹೇಗೆಲ್ಲಾ ಬಂದಿದೆಯಲ್ಲಾ ಅಂತ ಖುಷಿಯಾಗಿದ್ದಾರಂತೆ ನಿರ್ಮಾಪಕರು. ಇನ್ನು, ಈ ಚಿತ್ರದಿಂದ ಅವರು ಸಾಕಷ್ಟು ತಾಳ್ಮೆ ಕಲಿತಿದ್ದಾರಂತೆ. ಧಾರಾವಾಹಿಯೊಂದನ್ನು ನಿರ್ಮಿಸುವ ಯೋಚನೆ ಇದ್ದ ಸವಿತಾ ಅವರು, ಮಹದೇವ ಅವರನ್ನು ಭೇಟಿ ಮಾಡಿ, ಈ ಕಥೆ ಹೇಳಿದಾಗ, ಅವರು ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರಂತೆ.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.