ಖಾಲಿ ದೋಸೆ ಮಸಾಲೆ ಚಟ್ನಿ

ನೈಜ ಘಟನೆಯೇ ಸಿನಿಮಾದ ಜೀವಾಳ

Team Udayavani, Sep 27, 2019, 5:15 AM IST

x-34

ಕಳೆದ ಐದಾರು ವರ್ಷಗಳಿಂದಲೂ ಚಿತ್ರರಂಗದಿಂದ ದೂರವೇ ಉಳಿದಿದ್ದ ನಿರ್ದೇಶಕ ಶರಣ್‌ ಕಬ್ಬೂರು, ಈಗ “ಖಾಲಿದೋಸೆ’ ಉಣಬಡಿಸಲು ಬಂದಿದ್ದಾರೆ. ಹೀಗೆಂದಾಕ್ಷಣ, ಇನ್ನೇನೋ ಅರ್ಥ ಕಲ್ಪಿಸಿಕೊಳ್ಳಬೇಕಿಲ್ಲ. ಹೌದು, ಶರಣ್‌ ಕಬ್ಬೂರು ಈ ಹಿಂದೆ ಐದು ಚಿತ್ರಗಳಿಗೆ ಆ್ಯಕ್ಷನ್‌-ಕಟ್‌ ಹೇಳಿದವರು. ಈಗ ತಮ್ಮ “ಖಾಲಿದೋಸೆ ಕಲ್ಪನ’ ಸಿನಿಮಾ ಮೂಲಕ ಮತ್ತೆ ಬಂದಿದ್ದಾರೆ. ಇತ್ತೀಚೆಗೆ ಚಿತ್ರಕ್ಕೆ ಚಾಲನೆಯೂ ಸಿಕ್ಕಿದೆ. ಚಿತ್ರದ ಕುರಿತು ಶರಣ್‌ ಕಬ್ಬೂರು ಹೇಳಿದ್ದಿಷ್ಟು.

“ನಾನು ಸ್ವಲ್ಪ ಗ್ಯಾಪ್‌ ಪಡೆದು ಉದ್ಯಮದ ಕಡೆ ಮುಖ ಮಾಡಿದ್ದೆ. ಈಗ ಹೊಸ ಕಥೆ ಮೂಲಕ ಬರುತ್ತಿದ್ದೇನೆ. “ಖಾಲಿದೋಸೆ ಕಲ್ಪನ’ ಇದು ನೈಜ ಘಟನೆಯ ಚಿತ್ರ. ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆ ಇಟ್ಟುಕೊಂಡು ಚಿತ್ರ ಮಾಡುತ್ತಿದ್ದೇನೆ. ಉತ್ತರ ಕರ್ನಾಟಕದ ಫ್ಯಾಮಿಲಿಯೊಂದು ಶಿವಮೊಗ್ಗ ಜಿಲ್ಲೆಯ ಊರಲ್ಲೊಂದು ಹೋಟೆಲ್‌ ಇಟ್ಟುಕೊಂಡು ಕೆಲಸ ನಡೆಸುತ್ತಿರುತ್ತೆ. ಆ ಹೊಟೇಲ್‌ ಮನೆಯಲ್ಲೊಂದು ಬಲಿ ಕೊಟ್ಟರೆ, ಒಂದು ಬೆಲೆಬಾಳುವ ವಸ್ತು ಸಿಗುತ್ತೆ ಅನ್ನುವ ಅಂಶ ಗೊತ್ತಾದಾಗ, ಆಮೇಲೆ ಏನಾಗುತ್ತೆ ಅನ್ನೋದೇ ಒನ್‌ಲೈನ್‌. ಇದೊಂದು ಥ್ರಿಲ್ಲರ್‌, ಕಾಮಿಡಿ, ಎಮೋಶನಲ್‌, ಹಾರರ್‌ ಟಚ್‌ ಇರುವ ಕಥೆ. ತನಿಖೆಯ ಸುತ್ತ ಸಾಗುವ ಅಂಶಗಳು ಇಲ್ಲಿವೆ. ಶಿವಮೊಗ್ಗ ಜಿಲ್ಲೆ, ಉತ್ತರ ಕರ್ನಾಟಕ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ’ ಎಂದರು ಶರಣ್‌ ಕಬ್ಬೂರು.

ಚಿತ್ರದಲ್ಲಿ ಶುಭಾಪೂಂಜಾ ಪ್ರಮುಖ ಆಕರ್ಷಣೆ. ಹಾಗಾದರೆ, ಅವರೇ ಇಲ್ಲಿ ಕಲ್ಪನ ಪಾತ್ರ ನಿರ್ವಹಿಸುತ್ತಿದ್ದಾರಾ? ಇದಕ್ಕೆ ಉತ್ತರಿಸುವ ಶುಭಾ, “ನಾನಿಲ್ಲಿ ಸಿನಿಮಾದೊಳಗೆ ಸಿನಿಮಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಕಲ್ಪನ ನಾನಾ ಅಥವಾ ಬೇರೆ ಯಾರಾದರು ಇದ್ದಾರಾ ಅನ್ನೋದ್ದಕ್ಕೆ ಸಿನಿಮಾ ನೋಡಬೇಕು. ಒಂದೊಳ್ಳೆಯ ಮನರಂಜನೆ ಅಂಶಗಳು ಇಲ್ಲಿವೆ. ಕಳೆದ 9 ವರ್ಷಗಳ ಹಿಂದೆಯೇ ನಾನು ಶರಣ್‌ ಸರ್‌ ಅವರ “ಹನಿ ಹನಿ’ ಚಿತ್ರದಲ್ಲಿ ನಟಿಸಬೇಕಿತ್ತು. ಆಗ, ಬೇರೊಂದು ಚಿತ್ರದಲ್ಲಿದ್ದರಿಂದ ಡೇಟ್‌ ಸಮಸ್ಯೆಯಾಗಿ, ಮಾಡಲು ಸಾಧ್ಯವಾಗಿರಲಿಲ್ಲ. ಈಗ ಅವರ ನಿರ್ದೇಶನದಲ್ಲಿ ಕೆಲಸ ಮಾಡುತ್ತಿದ್ದೇನೆ’ ಎಂದರು ಶುಭ.

ಸಂಜಯ್‌ ಗೌಡ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. “ಕಥೆ ಕೇಳಿದಾಗ, ಇಷ್ಟವಾಯ್ತು. ಆರು ತಿಂಗಳ ಕಾಲ ನಾನು ಪಾತ್ರಕ್ಕೆ ಬೇಕಾದ ತಯಾರಿ ಮಾಡಿಕೊಂಡೆ. ಸಾಧ್ಯವಾದಷ್ಟು ಪಾತ್ರಕ್ಕೆ ನ್ಯಾಯ ಸಲ್ಲಿಸುವ ಪ್ರಯತ್ನ ಮಾಡ್ತೀನಿ. ಮೊದಲ ಹೆಜ್ಜೆ ಇದು. ಹಾಗಾಗಿ ನಿಮ್ಮೆಲ್ಲರ ಸಹಕಾರ, ಬೆಂಬಲ, ಪ್ರೋತ್ಸಾಹ ಇರಲಿ’ ಎಂದರು ಅವರು.

ಅಭಿಮನ್‌ ರಾಯ್‌ ಸಂಗೀತ ನೀಡಿದ್ದು, ಅವರಿಗೆ ಶರಣ್‌ ಕಬ್ಬೂರು ಜೊತೆಗೆ ಇದು 3 ನೇ ಕಾಂಬಿನೇಷನ್‌ ಸಿನಿಮಾವಂತೆ. ಕಥೆ ಚೆನ್ನಾಗಿದೆ. ಹಾಡುಗಳು ಸಹ ಹೊಸತನದಿಂದ ಕೂಡಿವೆ. ರಾಜೇಶ್‌ ಸಂಭಾಷಣೆ ಜೊತೆ ಗೀತೆ ರಚಿಸಿದ್ದಾರೆ. ಈ ರೀತಿಯ ಚಿತ್ರಗಳಲ್ಲಿ ಕೆಲಸ ಮಾಡಲು ಖುಷಿಯಾಗುತ್ತಿದೆ. ಒಳ್ಳೆಯ ತಂಡದಿಂದ ಒಳ್ಳೆಯ ಸಿನಿಮಾ ಬರುತ್ತೆ ಎಂಬ ವಿಶ್ವಾಸ ನನ್ನದು’ಎಂದರು ಅಭಿಮಾನ್‌ ರಾಯ್‌.

ಸಂಭಾಷಣೆ ಮತ್ತು ಹಾಡು ಬರೆದಿರುವ ರಾಜೇಶ್‌, “ನಾನೊಂದು ದಿನ ನಿರ್ದೇಶಕರ ಜೊತೆ ಈ ಕಥೆ ಕೇಳಿದೆ. ಚೆನ್ನಾಗಿತ್ತು. ಅವರು ನೀನೇ ಸಂಭಾಷಣೆ ಬರೆಯಬೇಕು ಅಂದರು. ಆ ಜವಾಬ್ದಾರಿಯನ್ನು ನೀಟ್‌ ಆಗಿ ನಿಭಾಯಿಸುವ ನಂಬಿಕೆ ಇದೆ’ ಎಂದರು ರಾಜೇಶ್‌. ನಿರ್ಮಾಪಕರಾದ ನಳಿನ ಗೌಡ, ರಾಜೇಶ್‌, ಮೇಘನಾ ಶಿವರಾಜ್‌ ರವಿಕುಮಾರ್‌ ಸಿನಿಮಾ ಕುರಿತು ಮಾತಾಡಿದರು. ಈ ಪೈಕಿ ರವಿಕುಮಾರ್‌ ಇಲ್ಲಿ ಒಂದು ಪಾತ್ರ ನಿರ್ವಹಿಸುತ್ತಿದ್ದು, ಸಿನಿಮಾದೊಳಗೂ ನಿರ್ಮಾಪಕರಾಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.