ವಿಕ್ರಮ ಪರಾಕ್ರಮ

ಖಾಕಿ ಪ್ರಜ್ವಲಿಸುತ್ತಿದೆ..

Team Udayavani, Jul 12, 2019, 5:00 AM IST

u-29

ಖಾಕಿ ಪ್ರಜ್ವಲಿಸುತ್ತಿದೆ...

ಒಂದರ ಹಿಂದೊಂದರಂತೆ ತನ್ನ ಸಿನಿಮಾದ ಟ್ರೇಲರ್‌, ಟೀಸರ್‌, ಫ‌ಸ್ಟ್‌ಲುಕ್‌ ರಿಲೀಸ್‌ ಆದರೆ, ಯಾವ ನಟ ತಾನೇ ಖುಷಿಯಾಗಿರಲ್ಲ ಹೇಳಿ. ಈ ಖುಷಿ ಈ ಬಾರಿ ಪ್ರಜ್ವಲ್ ಅವರದ್ದಾಗಿತ್ತು. ಅವರ ನಟನೆಯ ಎರಡ್ಮೂರು ಸಿನಿಮಾಗಳು ಟೀಸರ್‌ ರಿಲೀಸ್‌ ಮಾಡಿವೆ…

ಇಲ್ಲಿಯವರೆಗೆ ಹಲವು ಪಾತ್ರಗಳಿಗೆ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದ ನಟ ಪ್ರಜ್ವಲ್ ದೇವರಾಜ್‌, ಮೊದಲ ಬಾರಿಗೆ ಖಾಕಿ ತೊಟ್ಟು ಖಡಕ್‌ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರೋದಕ್ಕೆ ರೆಡಿಯಾಗುತ್ತಿದ್ದಾರೆ. ಹೌದು, ಬಹು ಸಮಯದ ನಂತರ ಪ್ರಜ್ವಲ್ ದೇವರಾಜ್‌ ಅಭಿನಯಿಸುತ್ತಿರುವ ಆ್ಯಕ್ಷನ್‌ ಚಿತ್ರ ‘ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರ ತೆರೆಗೆ ಬರಲು ತಯಾರಿ ನಡೆಸುತ್ತಿದೆ. ಈಗಾಗಲೇ ತನ್ನ ಮೊದಲ ಟೀಸರ್‌ ಬಿಡುಗಡೆ ಮಾಡಿ ಒಂದಷ್ಟು ಆ್ಯಕ್ಷನ್‌ ಪ್ರಿಯರ ಗಮನ ಸೆಳೆದಿದ್ದ ಚಿತ್ರ, ಇತ್ತೀಚೆಗೆ ನಟ ಪ್ರಜ್ವಲ್ ದೇವರಾಜ್‌ ಬರ್ತ್‌ಡೇ ಪ್ರಯುಕ್ತ ತನ್ನ ಎರಡನೇ ಟೀಸರ್‌ ಅನ್ನು ಬಿಡುಗಡೆಗೊಳಿಸಿದೆ.

ಬ್ಯಾಗ್‌ಪೈಪರ್‌ ಸೋಡಾ ಮತ್ತು ವಿಖ್ಯಾತ್‌ ಚಿತ್ರ ಸಂಸ್ಥೆಯ ಜಂಟಿನಿರ್ಮಾಣದಲ್ಲಿ ಮೂಡಿಬಂದಿರುವ ‘ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರಕ್ಕೆ ನಿರ್ದೇಶಕ ನರಸಿಂಹ ಆ್ಯಕ್ಷನ್‌-ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಪ್ರಜ್ವಲ್ ದೇವರಾಜ್‌ಗೆ ನಾಯಕಿಯಾಗಿ ಭಾವನಾ ಮೆನನ್‌ ಜೋಡಿಯಾಗಿದ್ದಾರೆ. ರಘು ಮುಖರ್ಜಿ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಚಿತ್ರದಲ್ಲಿ ಗೆಸ್ಟ್‌ ಅಪಿಯರೆನ್ಸ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸ್ವಾತಂತ್ರ ಹೋರಾಟಗಾರ ಭಗತ್‌ ಸಿಂಗ್‌ ಪಾತ್ರಕ್ಕೆ ದರ್ಶನ್‌ ಬಣ್ಣ ಹಚ್ಚಿದ್ದಾರೆ.

ಇದೇ ವೇಳೆ ‘ಇನ್ಸ್‌ಪೆಕ್ಟರ್‌ ವಿಕ್ರಂ’ ಪಾತ್ರದ ಬಗ್ಗೆ ಮಾತನಾಡಿದ ನಟ ಪ್ರಜ್ವಲ್ ದೇವರಾಜ್‌, ‘ನಾನು ಇದುವರೆಗೂ ಮಾಡದಿರುವ ಪಾತ್ರ ಈ ಚಿತ್ರದಲ್ಲಿ ಸಿಕ್ಕಿದೆ. ವಿಕ್ರಂ ಎನ್ನುವ ಹೆಸರಿನ ಟಫ್ ಕಾಪ್‌ ಪಾತ್ರ ನನ್ನದು. ಹುಡುಗಾಟದ ಸ್ವಭಾವವಿರುವ, ಕೆಲಸದ ವಿಷಯಕ್ಕೆ ಬಂದ್ರೆ, ಅಷ್ಟೇ ಪ್ರಾಮಾಣಿಕವಾಗಿರುವಂಥ ಪಾತ್ರ ಇದು. ಆ್ಯಕ್ಷನ್‌ ಜೊತೆಗೆ ಒಂದೊಳ್ಳೆ ಕಥೆ, ಮೆಸೇಜ್‌ ಕೂಡ ಚಿತ್ರದಲ್ಲಿದೆ’ ಎಂದು ಚಿತ್ರದ ಬಗ್ಗೆ ವಿವರಣೆ ನೀಡಿದರು.

ಇನ್ನು ‘ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ವಿಖ್ಯಾತ್‌ ಮತ್ತು ನಿರ್ದೇಶಕ ನರಸಿಂಹ, ‘ಚಿತ್ರ ಹೊಸತರದಲ್ಲಿ ಮೂಡಿಬಂದಿದ್ದು ಎಲ್ಲಾ ವರ್ಗದ ಪ್ರೇಕ್ಷಕ­ರಿಗೂ ಇಷ್ಟವಾಗಲಿದೆ. ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್‌ ಪೊಲೀಸ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿಮಾನಿಗಳಿಗೂ ಇಷ್ಟವಾಗಲಿದೆ. ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರಲಿದ್ದೇವೆ’ ಎಂದು ಮಾಹಿತಿ ನೀಡಿದರು.

‘ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದ ಹಾಡುಗಳಿಗೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಟೀಸರ್‌ನಲ್ಲಿರುವ ಹಿನ್ನೆಲೆ ಸಂಗೀತಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದ್ದು, ಅನೂಪ್‌ ಖುಷಿಯಾಗಿದ್ದಾರೆ. ಚಿತ್ರದ ಟೀಸರ್‌ನಲ್ಲಿ ಭರ್ಜರಿ ಆ್ಯಕ್ಷನ್‌ ಮತ್ತು ಖಡಕ್‌ ಡೈಲಾಗ್ಸ್‌ನಿಂದ ಮಾಸ್‌ ಆಡಿಯನ್ಸ್‌ ಗಮನ ಸೆಳೆಯುತ್ತಿರುವ ‘ಇನ್ಸ್‌ಪೆಕ್ಟರ್‌ ವಿಕ್ರಂ’ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗಲಿದ್ದಾನೆ ಅನ್ನೋದು ಬಿಡುಗಡೆ­ಯಾದ ಮೇಲಷ್ಟೇ ಗೊತ್ತಾಗ­ಲಿದೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.