ಐವತ್ತರ ಸಂಭ್ರಮದಲ್ಲಿ ಖನನ


Team Udayavani, Jul 5, 2019, 5:00 AM IST

24

ಕನ್ನಡದಲ್ಲಿ ಹೊಸಬರ ಚಿತ್ರಗಳಿಗೆ ಚಿತ್ರಮಂದಿರಗಳು ಸಿಗುವುದೇ ಕಷ್ಟ. ಸಿಕ್ಕರೂ ಪ್ರೇಕ್ಷಕರನ್ನು ಸೆಳೆಯುವುದು ಇನ್ನೂ ಕಷ್ಟ. ಸೆಳೆದರೂ ಆ ಚಿತ್ರ ಹೆಚ್ಚು ದಿನ ಪೂರೈಸುವುದು ದೂರದ ಮಾತು. ಆದರೆ, ಇಲ್ಲೊಂದು ಹೊಸಬರ ತಂಡ ಇವೆಲ್ಲಾ ಹಂತಗಳನ್ನು ಯಶಸ್ವಿಯಾಗಿ ಮುಗಿಸಿ, ಬರೋಬ್ಬರಿ 50 ದಿನಗಳನ್ನು ಕಂಡಿದೆ. ಹೌದು, ‘ಖನನ’ ಅರ್ಧ ಶತಕ ಬಾರಿಸಿದ ಚಿತ್ರ. ಆ ಖುಷಿಗೆ ಚಿತ್ರತಂಡ, ನೆನಪಿನ ಕಾಣಿಕೆ ವಿತರಿಸುವ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು.

ಅಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಉಪಾಧ್ಯಕ್ಷರಾದ ಉಮೇಶ್‌ ಬಣಕಾರ್‌,ಕಾರ್ಯದರ್ಶಿ ಎನ್‌.ಎಂ.ಸುರೇಶ್‌, ವಿತರಕ ಭಾಷಾ ಇತರರು ಆ ಸಂಭ್ರಮಕ್ಕೆ ಸಾಕ್ಷಿಯಾದರು. ನೆನಪಿನ ಕಾಣಿಕೆ ವಿತರಿಸುವ ಮುನ್ನ, ಚಿತ್ರತಂಡ, ಚಿತ್ರದ ತುಣುಕು ಪ್ರದರ್ಶಿಸಿತು. ಚಿತ್ರ ಶುರುವಾದಾಗಿನಿಂದ ಬಿಡುಗಡೆಯಾಗುವ ತನಕ ಚಿತ್ರದ ಹಂತಗಳನೆಲ್ಲ ಆ ತುಣುಕಿನಲ್ಲಿ ಅಳವಡಿಸಿ, ತೋರಿಸಲಾಯಿತು. ಆ ಕಾರ್ಯಕ್ರಮದ ಅವಧಿಯನ್ನು ಆ ತುಣುಕು ಪ್ರದರ್ಶನವೇ ತಿಂದುಹಾಕಿತು. ನಂತರ ಮಾತಿಗಿಳಿದ ನಿರ್ದೇಶಕ ರಾಧ ಅಂದು ಎಂದಿಗಿಂತಲೂ ಖುಷಿಯಲ್ಲಿದ್ದರು. ಮೊದಲ ಚಿತ್ರ 50 ದಿನ ಪೂರೈಸಿದ್ದು ಆ ಖುಷಿಗೆ ಕಾರಣವಾಗಿತ್ತು. ಅವಕಾಶ ಕೊಟ್ಟ ನಿರ್ಮಾಪಕರಿಗೆ, ಸಹಕರಿಸಿದ ತಂತ್ರಜ್ಞ ರಿಗೆ ಅವರು ಥ್ಯಾಂಕ್ಸ್‌ ಹೇಳಿದರು. ನಿರ್ಮಾಪಕ ಶ್ರೀನಿವಾಸ್‌ರಾವ್‌ ಅವರಿಗೆ ಒಳ್ಳೆಯ ಸಿನಿಮಾ ನಿರ್ಮಿಸಿದ ಖುಷಿ ಒಂದು ಕಡೆಯಾದರೆ, ತಮ್ಮ ಪುತ್ರ ಆರ್ಯವರ್ಧನ್‌ ಅವರನ್ನು ಹೀರೋನನ್ನಾಗಿ ಮಾಡಿದ ಸಂಭ್ರಮ ಇನ್ನೊಂದು ಕಡೆ. ಮೊದಲ ಚಿತ್ರ ಅರ್ಧ ಶತಕ ಬಾರಿಸಿದ ಸಂತಸ ಮತ್ತೂಂದು ಕಡೆ. ನಿರ್ಮಾಪಕರಾದ ತೃಪ್ತಿ ಇದೆ ಎಂದು ಹೇಳಿಕೊಂಡ ಅವರು, ಮಗನಿಗೆ ಮತ್ತೂಂದು ಸಿನಿಮಾ ಮಾಡುವುದನ್ನೂ ಅಂದು ಪ್ರಕಟಿಸಿದರು.

ನಾಯಕ ಆರ್ಯವರ್ಧನ್‌ ಖುಷಿಗೆ ಪಾರವೇ ಇರಲಿಲ್ಲ. ವೇದಿಕೆ ಮೇಲೆ ಅತ್ತಿಂದಿತ್ತ ಓಡಾಡುತ್ತಲೇ, ‘ಮೊದಲ ಲವರ್ ನ ಹೇಗೆ ಮರೆಯಲು ಆಗುವುದಿಲ್ಲವೋ, ಹಾಗೆಯೇ ಈ ಮೊದಲ ಚಿತ್ರದ ಗೆಲುವು ಕೂಡ ಮರೆಯಲು ಆಗಲ್ಲ. ಈ ಯಶಸ್ಸಿನ ಹಿಂದೆ ಇದ್ದ ಎಲ್ಲರಿಗೂ ಥ್ಯಾಂಕ್ಸ್‌ ‘ ಎಂದರು.

ಈ ಸಂದರ್ಭದಲ್ಲಿ ಚಿತ್ರದಲ್ಲಿ ನಟಿಸಿದ ಬ್ಯಾಂಕ್‌ ಜನಾರ್ದನ್‌, ಯುವ ಕಿಶೋರ್‌, ಕಲಾವಿದರು, ತಂತ್ರಜ್ಞ ರಿಗೆ ನೆನಪಿನ ಕಾಣಿಕೆ ವಿತರಿಸಿ ಗೌರವಿಸಲಾಯಿತು. ಕರಿಸುಬ್ಬು ಸೇರಿದಂತೆ ಚಿತ್ರರಂಗದ ಅನೇಕರು ಇದ್ದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.