ತ್ರಿಭಾಷಾ ಖನನ : ಪಾಪ, ಶಾಪ ಮತ್ತು ಪ್ರತಿಫ‌ಲ


Team Udayavani, Apr 5, 2019, 6:10 AM IST

Suchi-Khanana

ಕನ್ನಡದಲ್ಲೀಗ ಹೊಸಬರು ಒಂದು ಚಿತ್ರ ಮಾಡಿ ಬಿಡುಗಡೆ ಮಾಡುವುದೇ ದೊಡ್ಡ ಕಷ್ಟ ಆಗಿರುವಾಗ, ಕನ್ನಡ ಸೇರಿದಂತೆ ಮೂರು ಭಾಷೆಯಲ್ಲೂ ಚಿತ್ರೀಕರಣ ನಡೆಸಿ ಬಿಡುಗಡೆ ಮಾಡುವುದು ದೊಡ್ಡ ಸಾಹಸವೇ ಸರಿ. ಹೌದು, ಅಂಥದ್ದೊಂದು ಕೆಲಸಕ್ಕೆ ಕಾರಣವಾಗಿರುವುದು “ಖನನ’ ಎಂಬ ಹೊಸಬರ ಚಿತ್ರ. ಇದು ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ತಯಾರಾಗಿದೆ. ಹಾಗಾಗಿ ಇತ್ತೀಚೆಗೆ ಮೂರು ಭಾಷೆಯಲ್ಲೂ ಆಡಿಯೋ ಸಿಡಿ ಹೊರಬಂದಿದ್ದು ವಿಶೇಷ. ಫಿಲಂ ಚೇಂಬರ್‌ನ ಭಾ.ಮ.ಹರೀಶ್‌ ಕನ್ನಡ ಭಾಷೆಯ ಹಾಡು ಬಿಡುಗಡೆ ಮಾಡಿದರೆ, ಲಹರಿ ವೇಲು ಅವರು ತೆಲುಗು ಹಾಗು ತಮಿಳು ಭಾಷೆಯ ಆಡಿಯೋ ಬಿಡುಗಡೆ ಮಾಡಿ “ಮೂರು ಭಾಷೆಯಲ್ಲೂ ಚಿತ್ರ ಯಶಸ್ಸು ಗಳಿಸಲಿ’ ಎಂದು ಚಿತ್ರತಂಡಕ್ಕೆ ಶುಭಹಾರೈಸಿದರು.

ನಿರ್ದೇಶಕ ರಾಧಾ ಅವರಿಗೆ ಇದು ಮೊದಲ ಚಿತ್ರ. ಚಿತ್ರಕಥೆ, ಸಂಭಾಷಣೆಯೊಂದಿಗೆ ನಿರ್ದೇಶನ ಮಾಡಿರುವ ಅವರು, ಚಿತ್ರ ರೆಡಿಯಾಗಲು ಸಹಕರಿಸಿದ ನಿರ್ಮಾಪಕ ಶ್ರೀನಿವಾಸ್‌ ಅವರಿಗೆ ಕೃತಜ್ಞತೆ ಸಲ್ಲಿಸಿದರು. “ಖನನ’ ಸಂಸ್ಕೃತ ಪದ. ಹೂತಾಕು ಅಥವಾ ಮುಚ್ಚಾಕು ಎಂಬ ಅರ್ಥವಿದೆ. ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆಯಾಗಿದ್ದು, ನಿತ್ಯ ಬದುಕಿನಲ್ಲಿ ನಡೆಯುವ ಒಂದು ಸನ್ನಿವೇಶದ ಎಳೆ ಈ ಚಿತ್ರದಲ್ಲಿದೆ. ನಾವು ಮಾಡಿದ ಪಾಪ ಶಾಪವಾಗಿ ಹಿಂಬಾಲಿಸುತ್ತದೆ. ಕೊನೆಯಲ್ಲೊಂದು ಪ್ರತಿಫ‌ಲವೂ ಸಿಗುತ್ತದೆ. ಅದು ಘೋರವಾಗಿರುತ್ತೋ ಅಥವಾ ನೆಮ್ಮದಿ ಕೊಡುವಂತಿರುತ್ತದೆಯೋ ಎಂಬುದು ಸಾರಾಂಶ’ ಎಂದರು.

ನಾಯಕ ಆರ್ಯವರ್ಧನ್‌ಗೆ ಇದು ಮೊದಲ ಚಿತ್ರ. ಐಟಿ ಕ್ಷೇತ್ರದಲ್ಲಿದ್ದ ಅವರಿಗೆ ನಟನೆ ಆಸಕ್ತಿ ಇತ್ತು. ಕಾಲೇಜು ದಿನಗಳಿಂದಲೂ ಸಿನಿಮಾ ಹುಚ್ಚು ಹೆಚ್ಚಿಸಿಕೊಂಡಿದ್ದ ಅವರಿಗೆ ನಿರ್ದೇಶಕರು ಈ ಕಥೆ ಹೇಳಿದಾಗ, ಏನೂ ಅರ್ಥ ಆಗಲಿಲ್ಲವಂತೆ. ಕೊನೆಗೆ ಎಲ್ಲವನ್ನೂ ಅರ್ಥಮಾಡಿಕೊಂಡ ಬಳಿಕ “ಖನನ’ ಚಿತ್ರ ಮಾಡಿದೆ. ಇಲ್ಲಿ ನಾಯಿ ಒಂದು ಪ್ರಮುಖ ಪಾತ್ರ ಮಾಡಿದೆ. ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಚಿತ್ರ ಮೂಡಿಬಂದಿದೆ. ಮೊದಲ ಚಿತ್ರವಾದ್ದರಿಂದ ನಿಮ್ಮೆಲ್ಲರ ಸಹಕಾರ ಇರಲಿ’ ಎಂದರು ಆರ್ಯವರ್ಧನ್‌.

ನಿರ್ಮಾಪಕ ಶ್ರೀನಿವಾಸ್‌ ಅವರಿಗೆ ಚಿತ್ರರಂಗ ಹೊಸದಲ್ಲ. ಎರಡು ದಶಕಗಳಿಂದಲೂ ಕ್ಯಾಮೆರಾ ಬಾಡಿಗೆ ಕೊಡುವ ಕಾಯಕ ಮಾಡುತ್ತಿರುವ ಶ್ರೀನಿವಾಸ್‌, ತಮ್ಮ ಪುತ್ರ ಆರ್ಯವರ್ಧನ್‌ಗಾಗಿ ಮಾಡಿದ ಚಿತ್ರವಿದು. ನನಗೂ ಚಿಕ್ಕಂದಿನಿಂದ ಸಿನಿಮಾ ಆಸಕ್ತಿ ಇತ್ತು. ಆ ಆಸೆ ಮಗನ ಮೂಲಕ ಈಡೇರಿದೆ. ಮಗ ಎಲ್ಲವನ್ನೂ ಕರಗತ ಮಾಡಿಕೊಂಡೇ ಕ್ಯಾಮೆರಾ ಮುಂದೆ ನಿಂತಿದ್ದಾನೆ. ಚಿತ್ರ ಚೆನ್ನಾಗಿ ಬಂದಿದೆ. ತಡವಾಗಲು ಕಾರಣ ಸೆನ್ಸಾರ್‌ ಮಂಡಳಿ ಬೇಗ ಚಿತ್ರಕ್ಕೆ ಅಸ್ತು ಅನ್ನಲಿಲ್ಲ. ಮೊದಲು “ಎ’ಪ್ರಮಾಣ ಪತ್ರ ಕೊಟ್ಟರು. ಆ ಬಳಿಕೆ ನಾವು ರಿವೈಸಿಂಗ್‌ ಕಮಿಟಿಗೆ ಹೋಗಿ ‘ಯು/ಎ’ ಪ್ರಮಾಣ ಪತ್ರ ಪಡೆದುಕೊಂಡೆವು’ ಎಂದು ವಿವರ ಕೊಟ್ಟರು ಅವರು.

ಚಿತ್ರಕ್ಕೆ ಕುನ್ನಿ ಗುಡಿಪಾಟಿ ಸಂಗೀತ ನೀಡಿದ್ದು, ಕಥೆಗೆ ಪೂರಕ ಹಾಡುಗಳಿವೆ. ಚಿತ್ರದಲ್ಲಿ ಯೋಗೇಶ್‌, ಮಹೇಶ್‌ ಸಿದ್ದು, ಅವಿನಾಶ್‌, ಓಂ ಪ್ರಕಾಶ್‌ರಾವ್‌, ವಿನಯ ಪ್ರಸಾದ್‌ ಇತರರು ನಟಿಸಿದ್ದಾರೆ. ಚಿತ್ರಕ್ಕೆ ರಮೇಶ್‌ ತಿರುಪತಿ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.