‘ಪುಕ್ಸಟ್ಟೆ ಲೈಫು’ ಇನ್‌ಸೈಡ್‌ ಸ್ಟೋರಿ: ಸಂಚಾರಿ ವಿಜಯ್‌ ಚಿತ್ರಕ್ಕೆ ಕಿಚ್ಚನ ಮೆಚ್ಚುಗೆ


Team Udayavani, Sep 17, 2021, 1:57 PM IST

ಪುಕ್ಸಟ್ಟೆ  ಲೈಫು

ನಟ ಸಂಚಾರಿ ವಿಜಯ್‌ ಅಭಿನಯಿಸಿದ್ದ ಚಿತ್ರಗಳು ಅವರ ನಿಧನದ ನಂತರ ಒಂದೊಂದಾಗಿ ತೆರೆಗೆ ಬರುತ್ತಿವೆ. ಅದರಲ್ಲಿ “ಪುಕ್ಸಟ್ಟೆ ಲೈಫ‌ು’ ಕೂಡ ಒಂದು. ಎಲ್ಲ ಅಂದುಕೊಂಡಂತೆ ಆಗಿದ್ದರೆ, ಕಳೆದ ವರ್ಷ ಮೇನಲ್ಲಿ “ಪುಕ್ಸಟ್ಟೆ ಲೈಫ‌ು’ ರಿಲೀಸ್‌ ಆಗಬೇಕಿತ್ತು. ಆದರೆ ಕೋವಿಡ್‌ ಆತಂಕ, ಎರಡು ಬಾರಿ ಎದುರಾದ ಲಾಕ್‌ ಡೌನ್‌ನಿಂದ ಚಿತ್ರದ ರಿಲೀಸ್‌ ಮುಂದೂಡುತ್ತ ಬಂದಿದ್ದ ಚಿತ್ರತಂಡ ಅಂತಿಮವಾಗಿ ಇದೇ ಸೆ.24 ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಂಡಿದೆ.

ಅಂದಹಾಗೆ, “ಸರ್ವಸ್ವ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ಪುಕ್ಸಟ್ಟೆ ಲೈಫ‌ು’ ಚಿತ್ರಕ್ಕೆ ಸ್ವತಃ ವಿಜಯ್‌ ಅವರೇಕಥೆ ನೀಡಿದ್ದು, ಅರವಿಂದ್‌ ಕುಪ್ಶಿಕರ್‌ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಇನ್ನು ಈ ಚಿತ್ರದಲ್ಲಿ ಸಂಚಾರಿ ವಿಜಯ್‌ ಬೀಗ ರಿಪೇರಿ ಮಾಡುವ ಮುಸ್ಲಿಂ ಹುಡುಗನ ಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ. ಇನ್ನು ಈ ಚಿತ್ರದ ಪಾತ್ರಕ್ಕಾಗಿ ಸಂಚಾರಿ ವಿಜಯ್‌ ತಮ್ಮ ತೂಕವನ್ನು ಇಳಿಸಿಕೊಂಡಿದ್ದರಂತೆ. “ಯಾವುದೇ ಪಾತ್ರವಿರಲಿ ಅದಕ್ಕೆ ವಿಜಯ್‌ ತನ್ನದೇ ಆದ ಪರಿಶ್ರಮ ಹಾಕುತ್ತಿದ್ದರು.

ಚಿತ್ರೀಕರಣ ಮತ್ತಿತರ ಚಿತ್ರದಕೆಲಸಕ್ಕೆಕೂಡ ಸೈಕಲ್‌ನಲ್ಲೇ ಓಡಾಡುತ್ತಿದ್ದರು. ಈ ಚಿತ್ರದಲ್ಲೂಕೂಡ ಪಾತ್ರಕ್ಕೆ ಬೇಕಾದಷ್ಟು ತೂಕ ಇಳಿಸಿಕೊಂಡು, ಸಣ್ಣಗಾಗಿದ್ದರು. ಸಾಮಾನ್ಯವಾಗಿ ಸಿನಿಮಾಗಳಲ್ಲಿ ಮುಸ್ಲಿಂ ಪಾತ್ರಗಳು ಉರ್ದು, ಹಿಂದಿ ಮಿಶ್ರಿತ ಅರೆಬರೆಕನ್ನಡದಲ್ಲಿ ಮಾತನಾಡುತ್ತವೆ. ಆದ್ರೆ ತುಂಬಾ ಚೆನ್ನಾಗಿ ಕನ್ನಡ ಮಾತನಾಡುವ ಮುಸ್ಲಿಮರೂ ಇ¨ªಾರೆ. ಹಾಗೆ ಅಪ್ಪಟ ಕನ್ನಡದಲ್ಲೇ ಮಾತನಾಡುವ ಮುಸ್ಲಿಂ ಯುವಕನ ಪಾತ್ರ ವಿಜಯ್‌ ಅವರದ್ದು’ ಎನ್ನುತ್ತದೆ ಚಿತ್ರತಂಡ.

ಇತ್ತೀಚೆಗೆ “ಪುಕ್ಸಟ್ಟೆ ಲೈಫ‌ು’ ಚಿತ್ರದ ಟ್ರೇಲರ್‌ ಮತ್ತು ಹಾಡುಗಳು ಬಿಡುಗಡೆಯಾಗಿದ್ದು, ನೋಡುಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ವಿಜಯ್‌ ಅವರ ಪಾತ್ರ ನಿರ್ವಹಣೆ ಬಗ್ಗೆ ಚಿತ್ರರಂಗದಿಂದಲೂ ಪ್ರಶಂಸೆಯ ಮಾತುಗಳು ವ್ಯಕ್ತವಾಗುತ್ತಿವೆ. ಇನ್ನು ವಿಜಯ್‌ ಬದುಕಿದ್ದಾಗಲೇ, “ಪುಕ್ಸಟ್ಟೆ ಲೈಫ‌ು’ ಚಿತ್ರವನ್ನು ವೀಕ್ಷಿಸಿದ್ದ ನಟ ಕಿಚ್ಚ ಸುದೀಪ್‌, “ಬೀಗ ರಿಪೇರಿ ಮಾಡುವ ಹುಡುಗನ ಪಾತ್ರದಲ್ಲಿ ವಿಜಯ್‌ ಅದ್ಭುತವಾಗಿ ನಟಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.  ಅಲ್ಲದೆ, ಇಂಥದ್ದೇ ವಿಭಿನ್ನ ಪಾತ್ರಗಳಲ್ಲಿ ನಟಿಸುವಂತೆ ಹೇಳಿದ್ದರು’ ಎನ್ನುತ್ತದೆ ಚಿತ್ರತಂಡ.

“ಪುಕ್ಸಟ್ಟೆ ಲೈಫ‌ು’ ಚಿತ್ರದಲ್ಲಿ ಸಂಚಾರಿ ವಿಜಯ್‌ ಅವರಿಗೆ ಮಾತಂಗಿ ಪ್ರಸನ್ನ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು, ಅಚ್ಯುತ ಕುಮಾರ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆ ತನ್ನ ಟೈಟಲ್‌ ಮತ್ತು ಸಬ್ಜೆಕ್ಟ್ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ “ಪುಕ್ಸಟ್ಟೆ ಲೈಫ‌ು’ ನೋಡುಗರಿಗೆ ಎಷ್ಟರ ಇಷ್ಟವಾಗಲಿದೆ ಅನ್ನೋದು ಮುಂದಿನವಾರ ಗೊತ್ತಾಗಲಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.