ಗಾರ್ಮೆಂಟ್ಸ್‌ ತುಂಬಾ ಮಾತು

ನಿರ್ದೇಶಕರ ಉತ್ಸಾಹಕ್ಕೆ ಮಿಕ್ಕವರು ಸುಸ್ತು!

Team Udayavani, Apr 26, 2019, 11:06 AM IST

Suchi-Krishna

ಕೆಲವರು ಮೈಕ್‌ ಹಿಡಿದರೆ, ಪಕ್ಕದಲ್ಲಿ ಇರೋರು, “ಇವರು ಯಾವಾಗ ಮಾತು ನಿಲ್ಲಿಸುತ್ತಾರೆ’ ಎಂದು ಚಡಪಡಿಸುತ್ತಾರೆ. ಆ ಮಟ್ಟಿಗೆ ಒಂದೇ ಸಮನೆ ಮಾತನಾಡುತ್ತಾರೆ. “ಕೃಷ್ಣ ಗಾರ್ಮೆಂಟ್ಸ್‌’ ಚಿತ್ರದ ನಿರ್ದೇಶಕ ಸಿದ್ಧು ಪೂರ್ಣಚಂದ್ರ ಕೂಡಾ ಇದೇ ಕೆಟಗರಿಗೆ ಸೇರುವ ವ್ಯಕ್ತಿ. ವೇದಿಕೆ ತುಂಬಾ ತಮ್ಮ ತಂಡವನ್ನು ಕೂರಿಸಿಕೊಂಡು ಮೈಕ್‌ ಎತ್ತಿಕೊಂಡ ಸಿದ್ಧು, ಜೋಶ್‌ನಲ್ಲಿ ಒಂದೇ ಸಮನೆ ಮಾತನಾಡುತ್ತಾ ಹೋದರು.

ಸಿನಿಮಾ ಆರಂಭವಾದ ದಿನದಿಂದ ಮುಗಿಯುವ ವೇಳೆಗೆ ಏನೇನಾಯಿತು, ಯಾರ್ಯಾರು ಏನೇನು ಅಂದರು, ಸೆಟ್‌ನಲ್ಲಿ ನಡೆದ ಕಾಮಿಡಿ, ಸಿಟ್ಟು ಮಾಡಿಕೊಂಡ ರೀತಿ, ಛಾಯಾಗ್ರಾಹಕರ ಲವ್‌ಸ್ಟೋರಿ… ಸಿನಿಮಾದ ಅಗತ್ಯ ಮಾಹಿತಿಯೊಂದನ್ನು ಬಿಟ್ಟು ಮಿಕ್ಕಂತೆ ಮಾತನಾಡಿದ್ದೇ ಮಾತನಾಡಿದ್ದು. ಅವರ ಉದ್ದೇಶ ಚೆನ್ನಾಗಿತ್ತು. ಸಿನಿಮಾಕ್ಕೆ ದುಡಿದ ಪ್ರತಿಯೊಬ್ಬರ ಬಗ್ಗೆ ನಾಲ್ಕು ಪ್ರೋತ್ಸಾಹದ ಮಾತುಗಳನ್ನಾಡಬೇಕೆಂಬುದು.

ಈ “ಪ್ರೋತ್ಸಾಹ’ದಲ್ಲಿ ಅವರು ಸ್ವಲ್ಪ ಹೆಚ್ಚೇ ಸಮಯ ತಗೊಂಡರು. ಅಂದಹಾಗೆ, “ಕೃಷ್ಣ ಗಾರ್ಮೆಂಟ್ಸ್‌’ ಚಿತ್ರ ಈಗಾಗಲೇ ಚಿತ್ರೀಕರಣ ಮುಗಿಸಿ, ಬಿಡುಗಡೆಯ ಹಂತಕ್ಕೆ ಬಂದಿದೆ. ಮುಂದಿನ ತಿಂಗಳು ತೆರೆಕಾಣಲಿದೆ. ಹೆಸರಿಗೆ ತಕ್ಕಂತೆ ಇದು ಮಧ್ಯಮ ವರ್ಗದ ಕುಟುಂಬದ ಕಥೆ. ಬಹುತೇಕ ನಿರ್ದೇಶಕರು ಹೇಳುವಂತೆ, ಇದು ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟ ಸಿನಿಮಾ ಎನ್ನಲು ಸಿದ್ಧು ಕೂಡಾ ಮರೆಯಲಿಲ್ಲ. ಜಿ ಬೆಂಡಿಗೇರಿ ಅವರು ಈ ಚಿತ್ರದ ನಿರ್ಮಾಪಕರು. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆ ನಡೆಯಿತು. ಚಿತ್ರದ ಮೂರು ಹಾಡುಗಳನ್ನು ಆನಂದ್‌ ಆಡಿಯೋ ಮೂಲಕ ಹೊರತರಲಾಯಿತು. ಸಸ್ಪೆನ್ಸ್‌ ಥ್ರಿಲ್ಲರ್‌ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ.

‘ಶ್ರೀಮಾನ್‌ ಶ್ರೀಮತಿ’ ಧಾರಾವಾಹಿ ಖ್ಯಾತಿಯ ಭಾಸ್ಕರ್‌ ನೀನಾಸಂ ಚಿತ್ರದ ನಾಯಕರಾಗಿ ನಟಿಸಿದ್ದು, “ಬ್ರಹ್ಮಾಸ್ತ್ರ” ಧಾರಾವಾಹಿ ರಶ್ಮಿತಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಇಬ್ಬರು ಹೆಚ್ಚು ಮಾತನಾಡುವ ಗೋಜಿಗೆ ಹೋಗಲಿಲ್ಲ. ನಿರ್ದೇಶಕರ ಮಾತಿನ ಬಳಿಕ ವೇದಿಕೆ ಮೇಲಿದ್ದವರೆಲ್ಲ ಎರಡೆರಡೇ ಮಾತುಗಳನ್ನಾಡಿ ತೃಪ್ತರಾದರು.

ಚಿತ್ರದಲ್ಲಿ ಚಂದು, ರಾಜೇಶ್‌ ನಟರಂಗ, ಲಕ್ಷ್ಮೀನರಸಿಂಹ, ರಜನಿಕಾಂತ್‌, ವರ್ಧನ್‌ ಹೆಚ್‌.ಎಂ.ಟಿ. ಜಯ್‌, ಕಿರಣ್‌ ಹೊನ್ನಾವರ ಮುಂತಾ­ದವರು ನಟಿಸಿದ್ದಾರೆ. ಚಿತ್ರಕ್ಕೆ ರಘು ಧನ್ವಂತ್ರಿ ಸಂಗೀತವಿದೆ. ಹಾಸನ, ದೊಡ್ಡ­ಬಳ್ಳಾಪುರ, ಬೆಂಗ­ಳೂರು, ಶ್ರವಣ ಬೆಳಗೊಳ, ಚನ್ನಪಟ್ಟಣ­ದಲ್ಲಿ 35ದಿನಗಳ ಕಾಲ ಚಿತ್ರೀಕರಣ ನಡೆದಿದೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.