ಕರ್ಚಿಫ್ ಲವ್‌ಸ್ಟೋರಿ 


Team Udayavani, Sep 28, 2018, 6:00 AM IST

d-26.jpg

ಚಿತ್ರರಂಗಕ್ಕೆ ಹೊಸದಾಗಿ ಬರುವವರಿಗೆ ಹಳೆಯ ಟೈಟಲ್‌ಗ‌ಳ ವ್ಯಾಮೋಹ ಹೆಚ್ಚುತ್ತಿದೆ. ಈಗಾಗಲೇ ಸಾಕಷ್ಟು ಹಳೆಯ ಹಾಗೂ ಯಶಸ್ವಿ ಚಿತ್ರಗಳ ಶೀರ್ಷಿಕೆಗಳು ರಿಪೀಟ್‌ ಆಗಿವೆ. ಈ ಸಾಲಿಗೆ ಹೊಸ ಸೇರ್ಪಡೆ “ಒಂದಾನೊಂದು ಕಾಲದಲ್ಲಿ’. ಶಂಕರ್‌ನಾಗ್‌ ನಟನೆಯಲ್ಲಿ “ಒಂದಾನೊಂದು ಕಾಲದಲ್ಲಿ’ ಚಿತ್ರ ಬಂದಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಅದೇ ಟೈಟಲ್‌ನಡಿ ಹೊಸಬರ ಸಿನಿಮಾವೊಂದು ಸೆಟ್ಟೇರಿದೆ. ಇತ್ತೀಚೆಗೆ ಈ ಚಿತ್ರಕ್ಕೆ ಮುಹೂರ್ತ ನಡೆದಿದ್ದು, ಹಿರಿಯ ನಿರ್ದೇಶಕ ಭಗವಾನ್‌ ಕ್ಲಾಪ್‌ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಗಜ ಎನ್ನುವವರು ಈ ಚಿತ್ರದ ಮೂಲಕ ನಾಯಕರಾಗುತ್ತಿದ್ದಾರೆ. ಮಂಜುನಾಥ್‌ ಈ ಚಿತ್ರದ ನಿರ್ದೇಶಕರು. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, “ಇದು 1980ರಲ್ಲಿ ನಡೆಯುವ ಪ್ರೇಮಕಥೆ. ಆ ಕಾರಣದಿಂದ ಚಿತ್ರಕ್ಕೆ “ಒಂದಾ­ನೊಂದು ಕಾಲದಲ್ಲಿ’ ಎಂದು ಟೈಟಲ್‌ ಇಡಲಾಗಿದೆಯೇ ಹೊರತು, ಶಂಕರ್‌ನಾಗ್‌ ಅವರ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇಡೀ ಸಿನಿಮಾದಲ್ಲಿ ಕರ್ಚಿಫ್ ಪ್ರಮುಖ ಪಾತ್ರ ವಹಿಸುತ್ತದೆ. ಏಕೆಂದರೆ ಇದು ಕರ್ಚಿಫ್ ಮೇಲೆ ನಡೆಯುವ ಲವ್‌ಸ್ಟೋರಿ. ಇಡೀ ಸಿನಿಮಾ ರೆಟ್ರೋ ಶೈಲಿಯಲ್ಲಿ ಮೂಡಿಬರಲಿದೆ. ಆಗಿನ ಕಾಲದ ಪರಿಸರವನ್ನು ನಾವಿಲ್ಲಿ ಮರುಸೃಷ್ಟಿ ಮಾಡುತ್ತಿದ್ದೇವೆ’ ಎಂದು ಚಿತ್ರದ ಬಗ್ಗೆ ಹೇಳಿಕೊಂಡರು ಮಂಜುನಾಥ್‌. ಬನ್ನೇರುಘಟ್ಟ, ಬನವಾಸಿ, ಪಾಂಡವಪುರ, ಸಕಲೇಶಪುರ ಸುತ್ತಮುತ್ತ ಚಿತ್ರೀಕರಣ ಮಾಡಲು ತಯಾರಿ ಮಾಡಿಕೊಂಡಿದ್ದಾರಂತೆ.  

ಚಿತ್ರದ ನಾಯಕ ಗಜ ಅವರಿಗೆ ನಿರ್ದೇಶಕ ಮಂಜು ತುಂಬಾ ವರ್ಷಗಳ ಸ್ನೇಹಿತರಂತೆ. ಈಗ ಗೆಳೆಯನ ಸಿನಿಮಾದಲ್ಲಿ ನಟಿಸುತ್ತಿರುವ ಖುಷಿ ಅವರಿಗಿದೆ. ಚಿತ್ರದ ರೆಟ್ರೋ ಶೈಲಿಯಲ್ಲಿರುವುದರಿಂದ ಇವರ ಪಾತ್ರಕ್ಕೆ ಬೇಕಾದ ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ. “ಆಗಿನ ಕಾಲದ ಹುಡುಗರು ಹೇಗಿದ್ದರು ಎಂಬುದನ್ನು ತಿಳಿದುಕೊಳ್ಳುತ್ತಿದ್ದೇನೆ. ಅವರು ಹಾಕುತ್ತಿದ್ದ ಬಟ್ಟೆಯಿಂದ ಹಿಡಿದು ಎಲ್ಲಾ ಅಂಶಗಳ ಬಗ್ಗೆ ಹೆಚ್ಚಿನ ಗಮನಹರಿಸುತ್ತಿದ್ದೇನೆ. ನಟನೆಯ ಬಗ್ಗೆ ನಿರ್ದೇಶಕರು ಸಾಕಷ್ಟು ತರಬೇತಿ ನೀಡಿದ್ದಾರೆ’ ಎಂದರು. ಇಲ್ಲಿ ಅವರು ನಿರ್ದೇಶಕರಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಚಿತ್ರದಲ್ಲಿ ಜಾಹ್ನವಿ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗ­ ಭೂಮಿಯ ಅನುಭವವಿರುವ ಜಾಹ್ನವಿಯ ಪಾತ್ರ ಕೂಡಾ ಭಿನ್ನವಾಗಿದೆಯಂತೆ. ನೀನಾಸಂ ಅಶ್ವತ್ಥ್ ಇಲ್ಲಿ ನಾಯಕ ಅಣ್ಣ ನಾಗಿ ನಟಿಸುತ್ತಿದ್ದಾರೆ. ಉಳಿದಂತೆ ಸಂಗೀತ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರವನ್ನು ವೈ. ನಾರಾಯಣಸ್ವಾಮಿ, ಮುನೇಶ್‌, ಅಕ್ಷಿತ್‌ ಸೇರಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ರಾಕೇಶ್‌ ಸಿ. ತಿಲಕ್‌ ಛಾಯಾಗ್ರಹಣ, ಯಶವಂತ್‌ ಭೂಪತಿ ಸಂಗೀತವಿದೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.