ಕ್ಷೇತ್ರ ಮಹಮೆ
2ಡಿ, 3ಡಿಯಲ್ಲಿ ಕುರುಕ್ಷೇತ್ರ ರೆಡಿ
Team Udayavani, May 24, 2019, 6:00 AM IST
“ಈ ಸಿನಿಮಾದ ನಿಜವಾದ ಹೀರೋ ನಿರ್ಮಾಪಕ ಮುನಿರತ್ನ’
– ಹೀಗೆ ಹೇಳಿ ಪಕ್ಕದಲ್ಲಿ ಕುಳಿತಿದ್ದ ನಿರ್ಮಾಪಕ ಮುನಿರತ್ನ ಅವರತ್ತ ನೋಡಿದರು ನಿರ್ದೇಶಕ ನಾಗಣ್ಣ. ಅವರು ಹೀಗೆ ಹೇಳಲು ಕಾರಣ “ಕುರುಕ್ಷೇತ್ರ’ದಿಂದ ಬಹುತಾರಾಗಣದ ಸಿನಿಮಾವನ್ನು ನಿರ್ಮಾಪಕ ಮುನಿರತ್ನ ನಿಭಾಯಿಸಿದ ರೀತಿ. ಅದೇ ಕಾರಣದಿಂದ ಅವರನ್ನು ಹೀರೋ ಅಂದಿದ್ದು. ನಿರ್ದೇಶಕ ನಾಗಣ್ಣ ಅವರಿಗೆ “ಕುರುಕ್ಷೇತ್ರ’ ಮತ್ತೂಂದು ಹೊಸ ಅನುಭವವಂತೆ. ಬಹುತಾರಾಗಣದ ಅದ್ಧೂರಿ ಚಿತ್ರವನ್ನು ನಿರ್ದೇಶಿಸುವಲ್ಲಿ ಕಲಾವಿದರು, ತಂತ್ರಜ್ಞರು ಕೊಟ್ಟ ಪ್ರೋತ್ಸಾಹವನ್ನು ಮರೆಯುವಂತಿಲ್ಲ ಎಂದರು. ಇನ್ನು, ಅಂಬರೀಶ್ ಅವರು ಅನಾರೋಗ್ಯವಿದ್ದರೂ ಬಂದು ತಮ್ಮ ಚಿತ್ರೀಕರಣದ ಜೊತೆಗೆ ತಮ್ಮ ಡಬ್ಬಿಂಗ್ ಕೂಡಾ ಮುಗಿಸಿಕೊಟ್ಟ ಬಗ್ಗೆ ಹೇಳಿದರು ನಾಗಣ್ಣ. ಚಿತ್ರ 2ಡಿ ಹಾಗೂ 2ಡಿಯಲ್ಲಿ ತಯಾರಾಗಿದ್ದು, 3ಡಿಯಲ್ಲಿ ಯಾವುದೇ ತೊಂದರೆಯಾಗದಂತೆ ಅದಕ್ಕೆ ಬೇಕಾದ ತಂತ್ರಜ್ಞಾನದೊಂದಿಗೆ ಚಿತ್ರೀಕರಿಸಲಾಗಿದೆ ಎಂದರು.
ನಿರ್ಮಾಪಕ ಮುನಿರತ್ನ ಈ ಚಿತ್ರವನ್ನು ಆಗಸ್ಟ್ 09 ರಂದು ತೆರೆಕಾಣಿಸಲು ಮುಂದಾಗಿದ್ದಾರೆ. ಚಿತ್ರ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲಿ ತಯಾರಾಗಿದ್ದು, ಏಕಕಾಲಕ್ಕೆ ವಿಶ್ವದಾದ್ಯಂತ ಎಲ್ಲಾ ಭಾಷೆಗಳಲ್ಲೂ ಬಿಡುಗಡೆಯಾಗಲಿದೆಯಂತೆ. ಚಿತ್ರ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್ ಆಗಿದೆ. ಚಿತ್ರದ ಪಾತ್ರಗಳ ಧ್ವನಿಗೆ ಹೊಂದಿಕೆಯಾಗುವವರಿಂದಲೇ ಡಬ್ಬಿಂಗ್ ಮಾಡಿಸಲಾಗಿದೆಯಂತೆ. ಪಾತ್ರಗಳ ಮೂಲ ಧ್ವನಿಗೆ ಡಬ್ಬಿಂಗ್ ಹೊಂದಿಕೆಯಾಗದೇ ಇದ್ದರೆ ಚೆನ್ನಾಗಿರುವುದಿಲ್ಲ ಎಂಬ ಕಾರಣಕ್ಕೆ ಪಾತ್ರಕ್ಕೆ ಹೊಂದಿಕೆಯಾಗುವವರಿಂದಲೇ ಡಬ್ಬಿಂಗ್ ಮಾಡಿಸಲಾಗಿದೆಯಂತೆ. ಇನ್ನು, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ “ಕುರುಕ್ಷೇತ್ರ’ ಚಿತ್ರ ಇಷ್ಟೊತ್ತಿಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ, ತಡವಾಗಿ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಇದಕ್ಕೆ ಕಾರಣ ಗ್ರಾಫಿಕ್ಸ್ ಕೆಲಸ ಎನ್ನುತ್ತಾರೆ. ಚಿತ್ರದಲ್ಲಿ ತುಂಬಾ ಗ್ರಾಫಿಕ್ ಕೆಲಸ ಇದ್ದ ಕಾರಣ ಚಿತ್ರ ತಡವಾಗಿದೆಯೇ ಹೊರತು, ಬೇರೆ ಯಾವುದೇ ಕಾರಣದಿಂದಲ್ಲ ಎನ್ನುವುದು ಚಿತ್ರತಂಡದ ಮಾತು. ನಿರ್ದೇಶಕ ನಾಗಣ್ಣ ಅವರ “ಸಂಗೊಳ್ಳಿ ರಾಯಣ್ಣ’ ಚಿತ್ರ ನೋಡಿ, “ಕುರುಕ್ಷೇತ್ರ’ ಚಿತ್ರಕ್ಕೆ ಆಯ್ಕೆ ಮಾಡಿದ್ದಾಗಿ ಹೇಳಿದರು ಮುನಿರತ್ನ.
ಜೊ.ನಿ.ಹರ್ಷ “ಕುರುಕ್ಷೇತ್ರ’ ಚಿತ್ರದ ಸಂಕಲನಕಾರರು. ಈ ಚಿತ್ರ ಅವರ ಕೆರಿಯರ್ನಲ್ಲೇ ಒಂದು ಸಾಹಸ ಮತ್ತು ಹೆಮ್ಮೆಯಂತೆ. ಸುಮಾರು 100 ಗಂಟೆಗಳ ಚಿತ್ರೀಕರಿಸಿದ ದೃಶ್ಯವನ್ನು 2.55 ನಿಮಿಷಕ್ಕೆ ಇಳಿಸುವುದು ಸುಲಭವಲ್ಲ. ಆ ಕೆಲಸವನ್ನು ತಮ್ಮ ತಂಡದೊಂದಿಗೆ ಸೇರಿ ಹರ್ಷ ಮಾಡಿದ್ದಾರೆ. ಅವರಿಗೆ ಒಟ್ಟೊಟ್ಟಿಗೆ ಐದು ಸಿನಿಮಾಗಳಿಗೆ ಕೆಲಸ ಮಾಡಿದ ಅನುಭವ “ಕುರುಕ್ಷೇತ್ರ’ವೊಂದರಲ್ಲೇ ಸಿಕ್ಕಿತಂತೆ.
ಚಿತ್ರದ ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ ಪಡೆದಿದ್ದು, ಚಿತ್ರ ಮೂಡಿಬಂದಿರುವ ಹಾಗೂ ಹಾಡುಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
Ritanya Vijay; ದುನಿಯಾ ವಿಜಯ್ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ
DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್ನಲ್ಲಿ ಡೆವಿಲ್ ಬರೋದು ಪಕ್ಕಾ: ದರ್ಶನ್
Kannada Cinema; ರಿಲೀಸ್ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್ಗೆ ಯಶ ನಾಯಕಿ
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ