ಪ್ರೀತಿ ಪ್ರೇಮ ಮತ್ತು ಬದನೆಕಾಯಿ


Team Udayavani, Feb 10, 2017, 3:45 AM IST

Preethi-Prema-(10).jpg

ಹುಡುಗ, ಹುಡುಗಿ ಇಬ್ಬರೂ ಪ್ರೀತಿಯನ್ನು ಹುಡುಕಿಕೊಂಡು ಹೋಗುವ ಕಥೆ ಇದು. ಲವ್‌, ಕಾಮಿಡಿ ಎಲ್ಲವೂ ಇದೆ ಈ ಚಿತ್ರದಲ್ಲಿ. ಬಹುತೇಕ ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲಾಗಿದೆ. ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ.

“ಪ್ರೀತಿ ಪ್ರೇಮ ಅನ್ನೋದೆಲ್ಲಾ ಬರೀ ಪುಸ್ತಕದ ಬದನೆಕಾಯಿ …’
ಇಂಥದ್ದೊಂದು ಡೈಲಾಗ್‌ನ್ನು ಉಪೇಂದ್ರ ಯಾವತ್ತೋ ಹೇಳಿದ್ದಾಯಿತು, ಚಪ್ಪಾಳೆ ಗಿಟ್ಟಿಸಿದ್ದೂ ಆಯಿತು. ಈಗಲೂ ಇದು ಕನ್ನಡ ಚಿತ್ರರಂಗದ ಜನಪ್ರಿಯ ಸಂಭಾಷಣೆಗಳಲ್ಲೊಂದು. ಈ ವಾಕ್ಯವೇ ಈಗ ಚಿತ್ರದ ಹೆಸರಾಗಿದೆ. ಚಿತ್ರದ ಹೆಸರು “ಪ್ರೀತಿ ಪ್ರೇಮ’ವಾದರೆ, “ಬರೀ ಪುಸ್ತಕದ ಬದನೆಕಾಯಿ’ ಎಂಬ ಕ್ಯಾಪ್ಷನ್‌ ಈ ಚಿತ್ರಕ್ಕಿದೆ. ಈ ಚಿತ್ರ ಮುಂದಿನ ವಾರ ಬಿಡುಗಡೆಯಾಗಲಿಕ್ಕಿದೆ ಮತ್ತು ಬಿಡುಗಡೆಯಾಗುವುದಕ್ಕಿಂತ ಮುನ್ನ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಅಂದು ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಖಜಾಂಚಿ ಜಯರಾಜ್‌, ಉದಯ್‌ ಮೆಹ್ತಾ ಮುಂತಾದವರು ಇದ್ದರು.

ಈ ಚಿತ್ರವನ್ನು ನಿರ್ಮಿಸಿರುವುದು ಕೃಷ್ಣ ಚೈತನ್ಯ. ಆಂಧ್ರ ಮೂಲದ ಚೈತನ್ಯ, ಕನ್ನಡದಲ್ಲಿ ಚಿತ್ರ ನಿರ್ಮಿಸುತ್ತಿರುವುದಷ್ಟೇ ಅಲ್ಲ, ತೆಲುಗಿನಲ್ಲಿ ಯಶಸ್ವಿಯಾದ “ಆ ರೋಜುಲು’ ಎಂಬ ಚಿತ್ರವನ್ನು ಕನ್ನಡಕ್ಕೆ ತಂದಿದ್ದಾರೆ. ಈ ಚಿತ್ರಕ್ಕೆ ಅವರೇ ಹೀರೋ. ಇನ್ನು “ನನ್‌ ಲವ್‌ ಟ್ರ್ಯಾಕ್‌’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ನಿಧಿ ಕುಶಾಲಪ್ಪ ಈ ಚಿತ್ರದ ನಾಯಕಿ. ಇದಕ್ಕೂ ಮುನ್ನ ಹಲವು ಚಿತ್ರಗಳಿಗೆ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಕಾಶಿ, ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ಚಿತ್ರತಂಡದವರು ಪುನೀತ್‌, ಶಿವರಾಜಕುಮಾರ್‌ ಮತ್ತು ಸುದೀಪ್‌ ಅವರಿಂದ ಒಂದೊಂದು ಹಾಡುಗಳನ್ನು ಬಿಡುಗಡೆ ಮಾಡಿಸಿಕೊಂಡು ಬಂದಿದ್ದಾರೆ. ಹಾಗೆ ಬಿಡುಗಡೆ ಮಾಡಿಸಿದ ಹಾಡುಗಳನ್ನು ತೋರಿಸಿ ಚಿತ್ರತಂಡದವರು ಮಾತು ಶುರು ಮಾಡಿದರು. ಈ ಚಿತ್ರಕ್ಕೆ, ಆ ಹೆಸರು ಬಹಳ ಸೂಕ್ತವಾಗಿತ್ತು ಎನ್ನುತ್ತಲೇ ಮಾತು ಶುರು ಮಾಡಿದರು ಕಾಶಿ. ಆ ಹೆಸರನ್ನು ಹೇಳಿದ್ದು ಉದಯ್‌ ಎಂಬ ಅಸೋಸಿಯೇಟ್‌ ಅಂತೆ. “ಹುಡುಗ, ಹುಡುಗಿ ಇಬ್ಬರೂ ಪ್ರೀತಿಯನ್ನು ಹುಡುಕಿಕೊಂಡು ಹೋಗುವ ಕಥೆ ಇದು. ಲವ್‌, ಕಾಮಿಡಿ ಎಲ್ಲವೂ ಇದೆ ಈ ಚಿತ್ರದಲ್ಲಿ. ಬಹುತೇಕ ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲಾಗಿದೆ. ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ. “ಚಂದ್ರಲೇಖ’ ಚಿತ್ರಕ್ಕೆ ಕ್ಯಾಮೆರಾಮ್ಯಾನ್‌ ಆಗಿದ್ದ ರವಿಕುಮಾರ್‌, ಬಹಳ ಕಲರ್‌ಫ‌ುಲ್‌ ಆಗಿ ಚಿತ್ರೀಕರಣ ಮಾಡಿಕೊಟ್ಟಿದ್ದಾರೆ’ ಎಂದೆಲ್ಲಾ ವಿವರಿಸಿದರು.

ಚಿತ್ರಕ್ಕೆ ಬಿ.ಜೆ. ಭರತ್‌ ಸಂಗೀತ ಸಂಯೋಜಿಸಿದ್ದಾರೆ. ಆದರೆ, ತಾವು ಸಂಯೋಜಿಸಿರುವುದು ಒಂದೇ ಹಾಡು ಎಂದರು ಭರತ್‌. “ಚಿತ್ರಕ್ಕೆ ಜೆಬಿ ಎನ್ನುವವರು ಸಂಗೀತ ಸಂಯೋಜಿಸಿದ್ದಾರೆ. ನನ್ನ ಸ್ನೇಹಿತರೊಬ್ಬರು, ಈ ಚಿತ್ರಕ್ಕೆ ಸ್ವಲ್ಪ ಸಹಾಯ ಮಾಡಬೇಕು ಎಂದು ಕೇಳಿಕೊಂಡರು. ಒಪ್ಪಿಕೊಂಡು, ಜೆಬಿ ಮಾಡಿದ ಹಾಡುಗಳನ್ನು ಕನ್ನಡಕ್ಕೆ ರೆಕಾರ್ಡ್‌ ಮಾಡಿಕೊಟ್ಟೆ. ಕೊನೆಗೆ ನನ್ನಿಂದಲೂ ಒಂದು ಹಾಡು ಮಾಡಿಸಿದರು ಎಂದರು. ಕೃಷ್ಣ ಚೈತನ್ಯ ತಾವು ಪ್ಯಾಶನ್‌ಗಾಗಿ ಸಿನಿಮಾ ಮಾಡಿದ್ದಾಗಿ ಹೇಳಿದರೆ, ನಿಧಿ ಚಿತ್ರ ಬಹಳ ಕಲರ್‌ಫ‌ುಲ್‌ ಆಗಿ ಬಂದಿರುವುದಾಗಿ ಮಾತು ಮುಗಿಸಿದರು. ಗೀತರಚನೆಕಾರ ಸಾಯಿ ಸಮರ್ಥ್, ನೃತ್ಯ ನಿರ್ದೇಶಕ ಕಲೈ, ನಟಿ ಸ್ವಾತಿ ಮುಂತಾದವರಿದ್ದರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.