ಲವ್‌ ಕೆ ಬಾದ್‌! ಒಂದಾದ ಮೇಲೆ ಮುನ್ನಡೆ


Team Udayavani, Sep 29, 2017, 6:00 AM IST

Munnade_(117).jpg

“ಎಲ್ಲಾ ಚಿತ್ರಗಳಲ್ಲೂ ಪ್ರೇಮಿಗಳು ಒಂದಾಗುತ್ತಿದ್ದಂತೆ ಶುಭಂ ಅಂತ ಬರುತ್ತೆ. ಅಲ್ಲಿಗೆ ಸಿನಿಮಾನೂ ಮುಗಿದು ಹೋಗುತ್ತೆ. ಪ್ರೇಮಿಗಳು ಒಂದಾದ ಬಳಿಕ ಅವರ ಲೈಫ‌ಲ್ಲಿ ಏನೆಲ್ಲಾ ಆಗುತ್ತೆ ಅನ್ನುವ ವಿಷಯ ಇಟ್ಟುಕೊಂಡು ಚಿತ್ರ ಮಾಡುತ್ತಿದ್ದೇನೆ …’ ಹೀಗೆ ಹೇಳಿ ಸುಮ್ಮನಾದರು ನಿರ್ದೇಶಕ ವಿಜಯಭಾಸ್ಕರ್‌.

ಅವರು ಹೇಳಿದ್ದು “ಮುನ್ನಡೆ’ ಚಿತ್ರದ ಬಗ್ಗೆ. ಇದು ಬಹುತೇಕ ಹೊಸಬರ ಚಿತ್ರ. ಇತ್ತೀಚೆಗೆ ಮುಹೂರ್ತ ನೆರವೇರಿತು. ನಿರ್ದೇಶಕ ವಿಜಯಭಾಸ್ಕರ್‌, ಈ ಹಿಂದೆ ಕಿರುತೆರೆಯಲ್ಲಿ ಕೆಲಸ ಮಾಡಿದವರು. ಆದರೆ, ಕಾರಣಾಂತರಗಳಿಂದ ಬಣ್ಣದ ಲೋಕ ಬಿಟ್ಟು, ಕಳೆದ ಹದಿನೈದು ವರ್ಷಗಳಿಂದ ಸೈಟ್‌ ಇಂಜಿನಿಯರ್‌ ಆಗಿ ಕೆಲಸ ಮಾಡಿದ್ದರು. ದೊಡ್ಡ ಗ್ಯಾಪ್‌ ನಂತರ “ಮುನ್ನಡೆ’ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಅವರಿಗಷ್ಟೇ ಅಲ್ಲ, ಇಲ್ಲಿ ಕೆಲಸ ಮಾಡುತ್ತಿರುವ ಎಲ್ಲರಿಗೂ ಇದು ಮೊದಲ ಅನುಭವ. ಆ ಕುರಿತು ಹೇಳುತ್ತಾ ಹೋದರು ವಿಜಯಭಾಸ್ಕರ್‌.

“ಸಾಮಾನ್ಯವಾಗಿ ಚಿತ್ರಗಳಲ್ಲಿ ನಾಯಕ, ನಾಯಕಿ ಒಂದಾಗುತ್ತಿದ್ದಂತೆಯೇ ಹ್ಯಾಪಿ ಎಂಡಿಂಗ್‌ ಆಗುತ್ತೆ. ಆದರೆ, ಅವರ ಪ್ರೀತಿ ಒಂದಾದ ಮೇಲೆ ಎದುರಾಗುವ ಸಮಸ್ಯೆಗಳು, ಅವರು ಬದುಕುವ ಶೈಲಿ ಇತ್ಯಾದಿ ಕುರಿತು ಕಥೆ ಮಾಡಿದ್ದೇನೆ. ಇದೊಂದು ಮಹಿಳಾ ಪ್ರಧಾನ ಕಥೆ. ಇಲ್ಲಿ ಕಥೆಯೇ ನಾಯಕ, ನಾಯಕಿ ಇದ್ದಂತೆ. ಮೂರು ಪ್ರಮುಖ ಪಾತ್ರಗಳ ಸುತ್ತವೇ ಸಿನಿಮಾ ಸಾಗಲಿದೆ. ಒಂದು ಹುಡುಗಿ ಕಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಾಳೆ. ಅದೇ ಚಿತ್ರದ ಹೈಲೈಟ್‌. ಬೆಂಗಳೂರಲ್ಲಿ ಎರಡು ಹಂತದ ಚಿತ್ರೀಕರಣ ನಡೆಯಲಿದೆ’ ಅಂತ ವಿವರ ಕೊಟ್ಟರು ನಿರ್ದೇಶಕರು.

ನಾಯಕ ಧನಂಜಯ್‌ಗೆ ಇದು ಮೊದಲ ಸಿನಿಮಾ. ಮೂಲತಃ ಮಂಡ್ಯದವರಾದ ಧನಂಜಯ್‌ ಚಿಕ್ಕಂದಿನಿಂದಲೂ ಕಲೆ ಮೇಲೆ ಪ್ರೀತಿ ಇಟ್ಟುಕೊಂಡವರು. ರಂಗಭೂಮಿಯ ನಂಟೂ ಇದೆ. ಹಲವು ನಾಟಕಗಳಲ್ಲಿ ಅಭಿನಯಿಸಿ, ನಿರೂಪಕರಾಗಿ ಕೆಲಸ ಮಾಡಿದ್ದ ಅವರಿಲ್ಲಿ ಪತ್ರಕರ್ತನ ಪಾತ್ರ ನಿರ್ವಹಿಸುತ್ತಿದ್ದಾರೆ. “ಒಬ್ಬ ಪತ್ರಕರ್ತ ನಿರ್ದೇಶಕ ಆಗಬೇಕು ಅಂತ ಹೊರಡುವುದೇ ಕಥೆಯ ಸಾರಾಂಶ’ ಅಂದರು ಅವರು.

ನಾಯಕಿ ಲೀನಾ ಖುಷಿಗೆ ಇದು ಮೊದಲ ಅನುಭವ. ಅವರು ಸಹನಾ ಎಂಬ ಪಾತ್ರ ನಿರ್ವಹಿಸುತ್ತಿದ್ದು, ಸಹನೆ ಇರುವಂತಹ ಪಾತ್ರವಂತೆ ಅದು. ಮೊದಲ ಸಿನಿಮಾದಲ್ಲೇ ಒಳ್ಳೇ ಕಥೆ, ಪಾತ್ರ, ತಂಡ ಸಿಕ್ಕಿರುವುದು ಖುಷಿ ಅಂದರು ಲೀನಾ ಖುಷಿ. ಮನೋಹರ್‌ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಶಂಖನಾದ ಅಂಜಿನಪ್ಪ ಇಲ್ಲಿ ನಾಯಕಿಯ ದೊಡ್ಡಪ್ಪನ ಪಾತ್ರ ಮಾಡುತ್ತಿದ್ದಾರೆ. ಇದುವರೆಗೆ ಸಣ್ಣಪುಟ್ಟ ಪಾತ್ರ ಮಾಡಿದ್ದ ಅರವಿಂದ್‌ಗೆ ಇದು ನೂರನೇ ಚಿತ್ರ. ಅವರಿಗೆ ನಾಯಕಿಯ ತಂದೆ ಪಾತ್ರ ಸಿಕ್ಕಿದೆಯಂತೆ. ಯಶೋವರ್ಧನ್‌ ಸಂಗೀತ ನೀಡಿದರೆ, ಕೇಶವಾದಿತ್ಯ ಮೂರು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಅಂದು ಸಹಕಾರ ನಗರ ಕಾರ್ಪೋರೇಟರ್‌ ರಾಜೇಂದ್ರ ಕುಮಾರ್‌ ಆಗಮಿಸಿ, ತಂಡಕ್ಕೆ ಶುಭಕೋರುತ್ತಿದ್ದಂತೆ, ಆ ಮಾತುಕತೆಗೂ ಬ್ರೇಕ್‌ ಬಿತ್ತು.

– ವಿಜಯ್‌ ಭರಮ ಸಾಗರ

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.