ಲೋಕಲ್‌ ಹಾಡುಗಳಿಗೆ ಪವರ್‌ ಟಚ್‌

ಮದರಂಗಿ ಕೃಷ್ಣ ಹಳೇ ಪ್ರಾಜೆಕ್ಟ್

Team Udayavani, Jan 31, 2020, 5:42 AM IST

youth-22

ಪ್ರೀತಿ ಎನ್ನುವುದು ಎಲ್ಲಿ ಬೇಕಾದರೂ, ಹೇಗೆ ಬೇಕಾದರೂ, ಯಾವಾಗ ಬೇಕಾದರೂ ಶುರುವಾಗಬಹುದು. ಪ್ರೀತಿ ಹುಟ್ಟಲು ಸಮಯ, ಸ್ಥಳ, ಹೊತ್ತು-ಗೊತ್ತು ಯಾವುದೂ ಇರುವುದಿಲ್ಲ. ಹಾಗೇ ಪ್ರೀತಿ ಅನ್ನೋದು ಬಸ್ಸು, ಕಾರು, ಟ್ರೈನು, ಫ್ಲೈಟಿನಲ್ಲೂ ಕೂಡ ಹುಟ್ಟಬಹುದು. ಈಗ ಇದೇ ವಿಷಯವನ್ನು ಇಟ್ಟುಕೊಂಡು ಇಲ್ಲೊಂದು ಚಿತ್ರತಂಡ ಟ್ರೈನ್‌ನಲ್ಲಿ ಶುರುವಾದ ಪ್ರೇಮಕಥೆಯನ್ನು ತೆರೆಮೇಲೆ ಹೇಳಲು ಹೊರಟಿದೆ. ಅಂದಹಾಗೆ ಆ ಚಿತ್ರದ ಹೆಸರು “ಲೋಕಲ್‌ ಟ್ರೈನ್‌’.

ಗ್ರಾಮೀಣ ಭಾಗದಿಂದ ಬೆಂಗಳೂರಿಗೆ ಬರುವ ಟ್ರೈನ್‌ ಒಂದರಲ್ಲಿ ಶುರುವಾದ ಲವ್‌ ಸ್ಟೋರಿ ಮತ್ತು “ಲೋಕಲ್‌ ಟ್ರೈನ್‌’ ಸುತ್ತ ಈ ಚಿತ್ರದ ಕಥೆ ನಡೆಯಲಿದೆ. ಹಾಗಾಗಿ ಚಿತ್ರಕ್ಕೆ “ಲೋಕಲ್‌ ಟ್ರೈನ್‌’ ಎಂದು ಟೈಟಲ್‌ ಇಡಲಾಗಿದೆ ಎನ್ನುತ್ತದೆ ಚಿತ್ರತಂಡ. “ಲೋಕಲ್‌ ಟ್ರೈನ್‌’ ಚಿತ್ರದಲ್ಲಿ ಮದರಂಗಿ ಕೃಷ್ಣ ನಾಯಕನಾಗಿ ಕಾಣಿಸಿ ಕೊಂಡಿದ್ದು, ಎಸ್ತಾರ್‌ ನರೋನಾ, ಮೀನಾ ದೀಕ್ಷಿತ್‌ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಖಳನಾಯಕನಾಗಿ ಭಜರಂಗಿ ಲೋಕಿ, ಕಾಮಿಡಿ ಕಮಾಲ್‌ ಮಾಡಲು ಟೆನ್ನಿಸ್‌ ಕೃಷ್ಣ, ಸಾಧುಕೋಕಿಲ, ಸೆಂಟಿಮೆಂಟ್‌ಗಾಗಿ ಸುಚೇಂದ್ರಪ್ರಸಾದ್‌, ಗುರುದತ್‌ ಸೇರಿದಂತೆ ಅನೇಕ ಕಲಾವಿದರು ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರುದ್ರಮುನಿ ವೈ.ಎನ್‌ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಸುಮಾರು ಮೂರು ವರ್ಷಗಳ ಹಿಂದೆ ಶುರುವಾದ ಈ ಚಿತ್ರ, ಕೆಲವು ತಾಂತ್ರಿಕ ಕಾರಣಗಳಿಂದ ತೆರೆಗೆ ಬರಲು ವಿಳಂಬವಾಗಿದ್ದು, ಇದೇ ಫೆಬ್ರವರಿ ವೇಳೆಗೆ ಚಿತ್ರವನ್ನು ರಿಲೀಸ್‌ ಮಾಡುವ ಯೋಚನೆಯಲ್ಲಿದೆ ಚಿತ್ರತಂಡ. ಇತ್ತೀಚೆಗೆ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, “ಲೋಕಲ್‌ ಟ್ರೈನ್‌’ ಚಿತ್ರದ ಆಡಿಯೋವನ್ನು ಬಿಡುಗಡೆ­ಗೊಳಿಸಿತು. ನಟ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ “ಲೋಕಲ್‌ ಟ್ರೈನ್‌’ ಹಾಡುಗಳನ್ನು ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ಚಿತ್ರತಂಡ, “ಟ್ರೈನ್‌ ಒಂದರಲ್ಲಿ ಶುರುವಾಗಿ, ಅದರ ಸುತ್ತ ನಡೆಯುವ ಪ್ರೇಮಕಥೆಯೇ ಈ ಚಿತ್ರದ ಹೈಲೈಟ್‌. ಹಳ್ಳಿಯೊಂದರಿಂದ ಬೆಂಗಳೂರಿಗೆ ಬರುವ ಸ್ಥಳೀಯ ಟ್ರೆçನ್‌ನಲ್ಲಿ ಪ್ರತಿದಿನ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಂಚರಿಸುತ್ತಿರುತ್ತಾರೆ. ಇದೇ ವೇಳೆ ಟ್ರೈನ್‌ನಲ್ಲಿ ಹುಟ್ಟುವ ನವಿರಾದ ಪ್ರೇಮಕಥೆ ತೆರೆದುಕೊಳ್ಳುತ್ತದೆ. ಇದನ್ನೆ ಆಧಾರವಾಗಿಟ್ಟುಕೊಂಡು, ಅದರಲ್ಲಿ ಬರುವ ಹಲವು ಸನ್ನಿವೇಶಗೊಂದಿಗೆ ಚಿತ್ರವನ್ನು ತೆರೆಗೆ ತಂದಿದ್ದೇವೆ’ ಎಂದು ವಿವರಣೆ ನೀಡುತ್ತದೆ.

ಚಿತ್ರದ ಐದು ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆಯಿದ್ದು, ಜಯಂತ್‌ ಕಾಯ್ಕಿಣಿ ಸಾಹಿತ್ಯ ರಚಿಸಿದ್ದಾರೆ. ಹಿರಿಯ ನೃತ್ಯ ನಿರ್ದೇಶಕರಾದ ಚಿನ್ನಿಪ್ರಕಾಶ್‌, ರಾಜುಸುಂದರ್‌ ಮತ್ತು ಗಣೇಶ್‌ ಈ ಹಾಡುಗಳಿಗೆ ನೃತ್ಯ ಸಂಯೋಜಿಸಿದ್ದಾರೆ. ಈ ಪೈಕಿ ಒಂದು ಹಾಡಿನಲ್ಲಿ ಸುಮಾರು 200ಕ್ಕೂ ಹೆಚ್ಚು ನೃತ್ಯ ಕಲಾವಿದರು ಹೆಜ್ಜೆ ಹಾಕಿದ್ದು, ಅದ್ದೂರಿ ಏಳು ಸೆಟ್‌ಗಳಲ್ಲಿ ಈ ಹಾಡನ್ನು ಚಿತ್ರೀಕರಿಸಲಾಗಿದೆಯಂತೆ.

ಇನ್ನು “ಲೋಕಲ್‌ ಟ್ರೈನ್‌’ ಚಿತ್ರಕ್ಕೆ ರಮೇಶ ಬಾಬು ಛಾಯಾಗ್ರಹಣ, ಕೆ.ಎಂ ಸೌಂದರ್‌ ರಾಜು ಸಂಕಲನ ಕಾರ್ಯವಿದೆ. ಈಶ್ವರಿ ಕುಮಾರ್‌ ಕಲೆ, ಮಾಸ್‌ಮಾದ ಸಾಹಸ ನಿರ್ದೇಶನವಿದೆ. ಕುಮುಟದ ಸುಬ್ರಾಯ ವಾಳ್ಕೆ “ಸಂಜನಾ ಸಿನಿ ಆರ್ಟ್ಸ್’ ಬ್ಯಾನರ್‌ನಲ್ಲಿ ಸುಬ್ರಾಯ ವಾಳ್ಕೆ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಒಟ್ಟಾರೆ ಹಾಡುಗಳ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ “ಲೋಕಲ್‌ ಟ್ರೈನ್‌’ ಜರ್ನಿ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಹಿತಾನುಭವ ಕೊಡುತ್ತದೆ ಅನ್ನೋದು ಫೆಬ್ರವರಿ ಕೊನೆಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.