ತಂದೆ ಮಗಳ ಬಾಂಧವ್ಯದ ಸುತ್ತ…: ‘ಮಗಳೇ’ ಚಿತ್ರ ಇಂದು ತೆರೆಗೆ


Team Udayavani, Apr 21, 2023, 10:32 AM IST

ತಂದೆ ಮಗಳ ಬಾಂಧವ್ಯದ ಸುತ್ತ…: ‘ಮಗಳೇ’ ಚಿತ್ರ ಇಂದು ತೆರೆಗೆ

ಕೆಲವು ಸಿನಿಮಾಗಳು ಯಾವುದೇ ಸ್ಟಾರ್‌ ನಟ-ನಟಿಯರು ಇಲ್ಲದಿದ್ದರೂ ತನ್ನ ಕಂಟೆಂಟ್‌ ಮೂಲಕ ಗಮನ ಸೆಳೆಯುತ್ತವೆ. ಹೀಗೆ ಗಮನ ಸೆಳೆದ ಸಿನಿಮಾಗಳು ಮುಂದೆ ಚಿತ್ರಮಂದಿರಗಳಲ್ಲಿ ಗೆದ್ದು ನಗೆ ಬೀರಿದ ಉದಾಹರೆಣೆಗಳು ಸಾಕಷ್ಟಿವೆ. ಈಗ ಇದೇ ಸಾಲಿಗೆ ಸೇರ್ಪಡೆಯಾಗುತ್ತಿರುವ ಸಿನಿಮಾ “ಮಗಳೇ’. ಈ ಚಿತ್ರ ಇಂದು ತೆರೆಕಾಣುತ್ತಿದೆ.

ಕಂಟೆಂಟ್‌ ಅನ್ನು ನಂಬಿಕೊಂಡು, ಹೊಸ ಕಾನ್ಸೆಪ್ಟ್ನೊಂದಿಗೆ ತಯಾರಾಗಿರುವ “ಮಗಳೇ’ ಸಿನಿಮಾದ ಟ್ರೇಲರ್‌ ಹಾಗೂ ಒಂದು ಹಾಡು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆಯಾಗಿತ್ತು. ತಂದೆ-ಮಗಳ ಬಾಂಧವ್ಯ ಹಾಗೂ ಪೋಷಕರು ಹಾಗೂ ಮಗಳ ಸುತ್ತ ನಡೆಯುವ ಕಥಾಹಂದರವನ್ನು ಹೊಂದಿರುವ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಈ ಚಿತ್ರವನ್ನು ಸೋಮು ಕೆಂಗೇರಿ ನಿರ್ದೇಶಿಸಿದ್ದಾರೆ. ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯನ್ನು ಬರೆದಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಸೋಮು, “ನಮ್ಮದು ಸಂಪೂರ್ಣ ಹೊಸಬರ ತಂಡ. ಎಲ್ಲರ ಸಹಕಾರದೊಂದಿಗೆ ಈ ಸಿನಿಮಾ ಮಾಡಿದ್ದೇವೆ. ಇತ್ತೀಚೆಗೆ ಚಿತ್ರದ ಟ್ರೇಲರ್‌ ಹಾಗೂ ಹಾಡು ಬಿಡುಗಡೆಯಾಗಿದ್ದು, ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದೊಳಗೊಂದು ಗಟ್ಟಿ ಕಂಟೆಂಟ್‌ ಇದೆ ಎಂಬ ಮಾತು ಕೇಳಿಬರುತ್ತಿದೆ’ ಎನ್ನುತ್ತಾರೆ. ಇವತ್ತು ಕಂಟೆಂಟ್‌ ಸಿನಿಮಾಗಳು ಪ್ರೇಕ್ಷಕ ಜೈಕಾರ ಹಾಕುತ್ತಿರುವುದರಿಂದ ತಮ್ಮ ಸಿನಿಮಾವನ್ನೂ ಇಷ್ಟಪಡುತ್ತಾನೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಸಿನಿಮಾ ಬಿಡುಗಡೆ ಮಾಡಲು ಕಷ್ಟಪಡುತ್ತಿದ್ದಾಗ ಜಪಾನ್‌ನ ಮ್ಯಾಕಿನ್‌ ಹಾಗೂ ಅವರ ಸ್ನೇಹಿತರು ಬೆಂಬಲವಾಗಿ ನಿಂತರು. ಅವರ ಸಹಕಾರದಿಂದ ಈಗ ಸಿನಿಮಾ ರಿಲೀಸ್‌ ಮಾಡುತ್ತಿದ್ದೇವೆ. ನಮ್ಮ ಆಡಿಯೋವನ್ನು ಪಿಆರ್‌ಕೆ ಬಿಡುಗಡೆ ಮಾಡಿದೆ ಎನ್ನುವುದು ತಂಡದ ಮಾತು.

ಮಡಿಕೇರಿ, ಶುಂಠಿಕೊಪ್ಪ, ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ರೇ. ನೂ. ಸೋಮ್‌ ಛಾಯಾಗ್ರಹಣ, ಎ.ಬಿ.ಎಂ. ಸಂಗೀತ, ಪ್ರಶಾಂತ್‌ ಗುಣಕಿ ಸಾಹಿತ್ಯ, ಕೆಂಪರಾಜ್‌ ಸಂಕಲನವಿದ್ದು, ಚಿತ್ರ ನಿರ್ದೇಶಕ ಸೋಮಶೇಖರ್‌ ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯನ್ನು ಬರೆದಿದ್ದಾರೆ.

ಇನ್ನು ಚಿತ್ರದಲ್ಲಿ ಗುರುರಾಜ ಶೆಟ್ಟಿ, ಬಿಂದು ರಕ್ಷಿಧಿ, ಸುಪ್ರಿತಾ ರಾಜ್‌, ಗ್ರೀಷ್ಮ ಶ್ರೀಧರ್‌, ಬಿಷನ್‌ ಶೆಟ್ಟಿ, ನೀನಾಸಂ ನವೀನ್‌ ಕುಮಾರ್‌ ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರವನ್ನು “ಜೆಡ್‌ ನೆಟ್‌ ಕಮ್ಯುನಿಕೇಷನ್‌’ ಲಾಂಛನದ ಅಡಿಯಲ್ಲಿ ನಿರ್ಮಾಪಕ ಪ್ರವೀಣ್‌ ನಿರ್ಮಿಸುತ್ತಿದ್ದು, ಇವರಿಗೆ ಜಪಾನ್‌ನ ಮ್ಯಾಕಿಮ್‌ ಹಾಗೂ ಅವರ ಸ್ನೇಹಿತರು ಸಾಥ್‌ ನೀಡಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.