ಬೆಟ್ಟದ ಮೇಲೊಂದು ಚಿತ್ರ ಮಾಡಿ


Team Udayavani, Jan 26, 2018, 12:15 PM IST

26-35.jpg

ಕನ್ನಡದಲ್ಲಿ ಮಕ್ಕಳ ಚಿತ್ರಗಳ ಸಂಖ್ಯೆಗೇನೂ ಕಮ್ಮಿ ಇಲ್ಲ. ಈಗ ಆ ಸಾಲಿಗೆ “ಬೆಟ್ಟದ ದಾರಿ’ ಎಂಬ ಮಕ್ಕಳ ಚಿತ್ರವೂ ಒಂದು. ಶೀರ್ಷಿಕೆಯೇ ಹೇಳುವಂತೆ, ಇದೊಂದು ಅಪ್ಪಟ ಮಕ್ಕಳ ಕುರಿತಾದ ಕಥೆ. ಇಲ್ಲಿ ಮಕ್ಕಳ ಮೇಲೆ ಕಥೆ ಸಾಗಿದರೂ, ಒಂದಷ್ಟು ಕಮರ್ಷಿಯಲ್‌ ಅಂಶಗಳೊಂದಿಗೆ “ಬೆಟ್ಟದ ದಾರಿ’ ಹಿಡಿದಿದ್ದಾರೆ ನಿರ್ದೇಶಕ ಮಾ.ಚಂದ್ರು. ಇತ್ತೀಚೆಗೆ ಚಿತ್ರಕ್ಕೆ ಮುಹೂರ್ತ ನೆರವೇರಿತು. ಮಕ್ಕಳ ಚಿತ್ರವಾದ್ದರಿಂದ “ಚಿನ್ನಾರಿ ಮುತ್ತ’ ವಿಜಯ್‌ ರಾಘವೇಂದ್ರ ಅವರು ಚಿತ್ರಕ್ಕೆ ಕ್ಲಾಪ್‌ ಮಾಡುವ ಮೂಲಕ ಶುಭಹಾರೈಸಿದರು. ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್‌ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಶುಭಕೋರಿದರು.

ಮಾತಿಗಿಳಿದ ನಿರ್ದೇಶಕ ಮಾ.ಚಂದ್ರು, “ಇದೊಂದು ಕುಡಿಯುವ ನೀರಿನ ಸಮಸ್ಯೆ ಮೇಲೆ ಸಾಗುವ ಕಥೆ. ಉತ್ತರಕರ್ನಾಟಕದಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ. ಉತ್ತರ ಕರ್ನಾಟಕದಲ್ಲಿ ನೀರಿಗೆ ಹಾಹಾಕಾರ ಇರುವುದು ಗೊತ್ತೇ ಇದೆ. ಬರ ಇರುವಂತಹ ಒಂದು ಹಳ್ಳಿಯಲ್ಲಿ ಕುಡಿಯೋಕು ನೀರು ಇಲ್ಲದೆ ಅಲ್ಲಿನ ಜನ ಒದ್ದಾಡುತ್ತಾರೆ. ಸರ್ಕಾರ, ಅಧಿಕಾರಿಗಳಿಂದ ಆಗದಂತಹ ಕೆಲಸವನ್ನು ಆ ಊರಿನ ಐದು ಮಕ್ಕಳು ಮಾಡುತ್ತಾರೆ. ಅವರು ಆ ಊರಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಗೆ ಯಾವ ಜಾಡು ಹಿಡಿಯುತ್ತಾರೆ ಎಂಬುದು ಕಥೆ. ಇಲ್ಲಿ ಮಾಸ್ಟರ್‌ ನಿಶಾಂತ್‌ ಟಿ. ರಾಥೋಡ್‌, ಮಾಸ್ಟರ್‌ ಅಂಕಿತ್‌ ನವನಿಧಿ, ಬೇಬಿ ಲಕ್ಷ್ಮೀಶ್ರೀ, ಮಾಸ್ಟರ್‌ ರಂಗಸ್ವಾಮಿ, ಮಾಸ್ಟರ್‌ ರೋಹಿತ್‌ ಗೌಡ, ಮಾಸ್ಟರ್‌ ವಿಘ್ನೇಶ್‌, ಬ್ಯಾಂಕ್‌ ಜನಾರ್ದನ್‌, ಉಮೇಶ್‌ ಇತರರು ನಟಿಸುತ್ತಿದ್ದಾರೆ. ಈ ಹಿಂದೆ “ಮೂಕ ಹಕ್ಕಿ’ ನಿರ್ಮಿಸಿದ್ದ ಚಂದ್ರಕಲಾ ಅವರು ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. “ಕಳೆದ ಬಾರಿ ವಿತರಣೆ ಸರಿಹೋಗದಿದ್ದರಿಂದ “ಮೂಕಹಕ್ಕಿ’ ಸೋಲುಂಡಿತು. ಆದರೆ, ಮಾಧ್ಯಮಗಳಿಂದ ಉತ್ತಮ ಪ್ರಶಂಸೆ ಸಿಕ್ಕಿತ್ತು. ಅದೇ ಧೈರ್ಯದಿಂದ ಈ ಬಾರಿ ಮಕ್ಕಳ ಚಿತ್ರ ಮಾಡುತ್ತಿದ್ದೇನೆ. ಈ ಮೂಲಕ ಒಂದು ಸಂದೇಶ ಕೊಡುವ ಪ್ರಯತ್ನ ನನ್ನದು. ಒಳ್ಳೆಯ ಕಥೆ, ಉದ್ದೇಶ ಇಲ್ಲಿರುವುದರಿಂದ ನಿಮ್ಮಗಳ ಸಹಕಾಚರ ಬೇಕು’ ಎಂದರು ಚಂದ್ರಕಲಾ.

ಸಂಗೀತ ನಿರ್ದೇಶಕ ವೀರ್‌ ಸಮರ್ಥ್ ಅವರು ಚಿತ್ರಕ್ಕೆ ನಾಲ್ಕು ಹಾಡುಗಳನ್ನು ಕೊಡುತ್ತಿದ್ದಾರೆ. ಎಲ್ಲವೂ ಮಾಂಟೇಜ್‌ ಹಾಡುಗಳು. “ಹಳ್ಳಿಸೊಗಡಿನ ಮೇಲೆ, ಮಕ್ಕಳ ಗೆಳೆತನ ಹಾಗು ನೀರಿಗಾಗಿ ಹೋರಾಡುವ ಮತ್ತು ಪರಿತಪಿಸುವ ಕುರಿತ ಗೀತೆಗಳಿವೆ. ಉತ್ತರಕರ್ನಾಟಕ ಶೈಲಿಯಲ್ಲೊಂದು ಹಾಡಿದೆ. ಹೇಳುವಂತಹ ಹಾಡದು’ ಎಂದರು ವೀರ್‌ಸಮರ್ಥ್.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.