ವಿಕ್ಷಿಪ್ತ ಚಿತ್ತಗಳ ವಿರಾಟ ಸ್ವರೂಪ

ಮನರೂಪ ಆಟ ಶುರು

Team Udayavani, Nov 22, 2019, 5:20 AM IST

pp-28

ತನ್ನ ಟೈಟಲ್‌ ಮತ್ತು ಪೋಸ್ಟರ್‌ಗಳ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ಬಹುತೇಕ ಹೊಸ ಪ್ರತಿಭೆಗಳ ಸೈಕಲಾಜಿಕಲ್‌, ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರ “ಮನರೂಪ’ ಈ ವಾರ ತೆರೆಗೆ ಬರುತ್ತಿದೆ. ಸದ್ಯ ಕಳೆದ ಕೆಲ ದಿನಗಳಿಂದ ಭರ್ಜರಿಯಾಗಿ ಪ್ರಮೋಶನ್‌ ಕೆಲಸಗಳಲ್ಲಿ ನಿರತವಾಗಿದ್ದ ಚಿತ್ರತಂಡಕ್ಕೆ ಎಲ್ಲಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಚಿತ್ರದ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದು, ಚಿತ್ರದ ಬಗ್ಗೆ ಒಂದಷ್ಟು ಮಾತನಾಡಿತು.

ಮೊದಲಿಗೆ ಚಿತ್ರದ ಬಗ್ಗೆ ಮಾತಿಗಿಳಿದ ನಿರ್ದೇಶಕ ಕಿರಣ್‌ ಹೆಗಡೆ, “ಇದು ಇಂದಿನ ಜನರೇಶನ್‌ನ ಚಿತ್ರ. ಇಂದಿನ ಯುವ ಪೀಳಿಗೆಯ ಹಿಂಸೆ, ವಿಕ್ಷಿಪ್ತ ಅಸಂಗತೆ ಮತ್ತು ಮನಸ್ಥಿತಿಗಳ ಸುತ್ತ ಚಿತ್ರದ ಕಥೆ ಸಾಗುತ್ತದೆ. ದಟ್ಟ ಕಾಡಿನಲ್ಲಿ ನಿಗೂಢವಾಗಿರುವ ಕರಡಿ ಗುಹೆಯನ್ನು ಹುಡುಕಿಕೊಂಡು ಹೊರಟಿರುವ ಐವರು ಸ್ನೇಹಿತರ ನಡುವಿನ ಕಥನವೇ ಮನರೂಪ ಸಿನಿಮಾದ ತಿರುಳು. ಅದರ ನಡುವೆ ಸಿಗುವ ಹಲವು ಅಚ್ಚರಿಗಳು, ತಿರುವುಗಳು, ಹಿಂಸೆ, ಕಾಡಿನ ಭಯ, ಕರಡಿ ಗುಹೆಯ ನಿಗೂಢತೆ ಮುಂತಾದ ಸಂಗತಿಗಳ ಜೊತೆಗೆ ಈ ಐವರ ನಡುವೆ ಏನು ವಿಷಮ ಸಂಗತಿ ನಡೆಯುತ್ತದೆ ಎಂಬದೇ ಚಿತ್ರದ ಸಸ್ಪೆನ್ಸ್‌ ಅಂಶ. ಅದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುತ್ತಾರೆ.

“ಮನರೂಪ’ ಚಿತ್ರದ ಶೇಕಡಾ ಎಂಬತ್ತರಷ್ಟು ಚಿತ್ರೀಕರಣವನ್ನು ದಟ್ಟ ಕಾಡಿನಲ್ಲೇ ನಡೆಸಲಾಗಿದೆಯಂತೆ. ಹಾಗಾಗಿ ಕಾಡಿನಲ್ಲಿ ಓಟ, ಬೀಳುವುದು, ಭಯದ ಛಾಯೆ, ಹುಡುಕಾಟ, ಅಪನಂಬಿಕೆ, ಪ್ರೇಮ ವೈಫ‌ಲ್ಯ, ಪಯಣ; ಈ ಎಲ್ಲಾ ಅಂಶಗಳನ್ನೂ ನೋಡುಗರಿಗೆ ಹೊಸ ಅನುಭವ ನೀಡಲಿದೆ ಅನ್ನೋದು ಚಿತ್ರತಂಡದ ಮಾತು. ಈಗಾಗಲೇ ಬಿಡುಗಡೆಯಾಗಿರುವ “ಮನರೂಪ’ ಚಿತ್ರದ ಟ್ರೇಲರ್‌ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆಯಂತೆ. ಅದರ ಬಗ್ಗೆ ಮಾತನಾಡುವ ಚಿತ್ರತಂಡ, “ಚಿತ್ರ ಪ್ರೇಕ್ಷಕರಿಗೆ ಥ್ರಿಲ್ಲಿಂಗ್‌ ಅನುಭವ ನೀಡುತ್ತದೆ. ಚಿತ್ರದಲ್ಲಿ ಅನೇಕ ಅಚ್ಚರಿ ಮೂಡಿಸುವ ಸಂಗತಿಗಳಿವೆ. ಕೆಲ ದೃಶ್ಯಗಳು ತನ್ನ
ಕಂಟೆಂಟ್‌ ಮತ್ತು ಯೋಚನೆಗಳಿಂದ ಬೆಚ್ಚಿಬೀಳಿಸುತ್ತವೆ.

ಕುಟುಂಬ ವ್ಯವಸ್ಥೆ, ವ್ಯಕ್ತಿತ್ವ, ಅಸ್ತಿತ್ವ ಮತ್ತು ಇರುವಿಕೆಯ ವಿವಿಧ ಮಜಲನ್ನು ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಕಾಡು ಮತ್ತು ಕಾಡುವ ಪಾತ್ರಗಳು ಪ್ರೇಕ್ಷಕನನ್ನು ಹಿಡಿದಿಡುತ್ತವೆ. ಮನರೂಪ ಚಿತ್ರವನ್ನು ಪ್ರೇಕ್ಷಕ ಕಡೆಗಣಿಸಲಾರ. ಹೊಸ ಬಗೆಯ ಕಥೆ, ನಿರೂಪಣೆ ಮತ್ತು ಮನಸನ್ನು ನಾಟುವಂತಹ ವಿಷಯವೇ “ಮನರೂಪ’ದ ಶಕ್ತಿ. ವಿಕ್ಷಿಪ್ತ ಸಂಭಾಷಣೆ, ಅಸಂಗತ ಪರಿಕಲ್ಪನೆಯೇ “ಮನರೂಪ’ ಚಿತ್ರದ ಅಂದವನ್ನು ಹೆಚ್ಚಿಸಿದೆ. ಈಗಾಗಲೇ ಪ್ರೇಕ್ಷಕರಿಂದ ಸಿಗುವ ಪ್ರತಿಕ್ರಿಯೆ ನೋಡಿದರೆ, ಪ್ರೇಕ್ಷಕರು “ಮನರೂಪ’ವನ್ನು ಬೇರೆಯದೇ ಆಯಾಮದಲ್ಲಿ ನೋಡುತ್ತಾರೆಂಬ ನಂಬಿಕೆ ಇದೆ’ ಎಂಬ ಭರವಸೆಯ ಮಾತುಗಳನ್ನಾಡುತ್ತದೆ.

ಇನ್ನು “ಮನರೂಪ’ ಚಿತ್ರದಲ್ಲಿ ದಿಲೀಪ್‌ ಕುಮಾರ್‌, ಅನೂಷಾ ರಾವ್‌, ನಿಶಾ ಬಿ.ಆರ್‌, ಆರ್ಯನ್‌,
ಶಿವಪ್ರಸಾದ್‌, ಅಮೋಘ… ಸಿದ್ದಾರ್ಥ್, ಗಜಾ ನೀನಾಸಂ, ಪ್ರಜ್ವಲ್‌ ಗೌಡ, ರಮಾನಂದ ಐನಕೈ,
ಸತೀಶ್‌ ಗೋಳಿಕೊಪ್ಪ ಹಾಗೂ ವಿಶೇಷ ಪಾತ್ರದಲ್ಲಿ ಬಿ. ಸುರೇಶ್‌ ಅಭಿನಯಿಸಿದ್ದಾರೆ. “ಸಿಎಂಸಿಆರ್‌ ಮೂವೀಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಚಿತ್ರಕ್ಕೆ ಗೋವಿಂದರಾಜ್‌ ಛಾಯಾಗ್ರಹಣ,
ಸೂರಿ ಮತ್ತು ಲೋಕಿ ಸಂಕಲನ ಕಾರ್ಯವಿದೆ. ಚಿತ್ರಕ್ಕೆ ಸರವಣ ಸಂಗೀತ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.