ತಾಜ್‌ಮಹಲ್‌ನಲ್ಲಿ ಮರ್ಯಾದಾ ಹತ್ಯೆ!


Team Udayavani, Jul 5, 2019, 5:00 AM IST

q-34

ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಬಂದ ಪ್ರೀತಿ, ಪ್ರೇಮ, ಪ್ರಣಯದ ಚಿತ್ರಗಳಿಗೆ ಲೆಕ್ಕವಿಲ್ಲ. ಪ್ರತಿವರ್ಷ ಬರುವ ಚಿತ್ರಗಳಲ್ಲಿ ಅರ್ಧಕ್ಕೂ ಹೆಚ್ಚು ಚಿತ್ರಗಳು ಇಂಥ ಸಬ್ಜೆಕ್ಟ್ಗಳಿಗೆ ಮೀಸಲು ಅನ್ನೋದರಲ್ಲೂ ಎರಡು ಮಾತಿಲ್ಲ. ಅದರಲ್ಲೂ ಸ್ಯಾಂಡಲ್ವುಡ್‌ನ‌ಲ್ಲಿ ಇಂಥ ಯಾವುದಾದರೂ ಒಂದು ಚಿತ್ರ ಹಿಟ್ ಆದ್ರೆ ಸಾಕು ಅದೇ ಶೀರ್ಷಿಕೆಯ ಮುಂದೆ ಅಥವಾ ಹಿಂದೆ ಒಂದು ಅಕ್ಷರವನ್ನೊ, ಪದವನ್ನೋ ಸೇರಿಸಿ ತಮ್ಮ ಚಿತ್ರಕ್ಕೆ ಶೀರ್ಷಿಕೆ ಮಾಡಿಕೊಳ್ಳುವುದು ಹೊಸದೇನಲ್ಲ. ಈಗ ಯಾಕೆ ಈ ಬಗ್ಗೆ ಮಾತು ಅಂತೀರಾ? ಅದಕ್ಕೊಂದು ಕಾರಣವಿದೆ. 2008ರಲ್ಲಿ ಆರ್‌.ಚಂದ್ರು ನಿರ್ದೇಶನದಲ್ಲಿ ತೆರೆಗೆ ಬಂದ ‘ತಾಜ್‌ಮಹಲ್’ ಚಿತ್ರ ನಿಮಗೆ ನೆನಪಿರಬಹುದು. ಅಜೇಯ್‌ ರಾವ್‌, ಪೂಜಾ ಗಾಂಧಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದ ಲವ್‌ ಕಂ ರೊಮ್ಯಾಂಟಿಕ್‌ ಚಿತ್ರ ‘ತಾಜ್‌ಮಹಲ್’ ಹಿಟ್ ಲೀಸ್ಟ್‌ ಕೂಡ ಸೇರಿತ್ತು. ಈಗ ಅದೇ ‘ತಾಜ್‌ಮಹಲ್’ ಹೆಸರಿನ ಮುಂದುವರೆದ ಭಾಗ ಎಂಬಂತೆ ‘ತಾಜ್‌ಮಹಲ್-2’ ಎನ್ನುವ ಚಿತ್ರ ಕೂಡ ತೆರೆಗೆ ಬರುತ್ತಿದೆ. ಅಂದಹಾಗೆ, ‘ತಾಜ್‌ಮಹಲ್-2’ ಚಿತ್ರತಂಡದ ಪ್ರಕಾರ, ಈ ಚಿತ್ರಕ್ಕೂ ದಶಕದ ಹಿಂದೆ ಬಂದ ‘ತಾಜ್‌ಮಹಲ್’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ.

ಚಿತ್ರದ ಕಥೆಗೆ ಹೊಂದಾಣಿಕೆಯಾ­ಗುತ್ತದೆ ಎನ್ನುವ ಕಾರಣಕ್ಕೆ ಚಿತ್ರದ ಟೈಟಲ್ ಅನ್ನು ‘ತಾಜ್‌ಮಹಲ್-2’ ಅಂಥ ಇಟ್ಟುಕೊಂಡಿದ್ದೇವೆ ಅನ್ನೋದು ಚಿತ್ರತಂಡದ ಮಾತು. ಅಂದಹಾಗೆ, ಇತ್ತೀಚೆಗೆ ‘ತಾಜ್‌ಮಹಲ್-2’ ಚಿತ್ರ ಮುಹೂರ್ತವನ್ನು ಆಚರಿಸಿಕೊಂಡು, ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇನ್ನು ‘ತಾಜ್‌ಮಹಲ್-2’ ಚಿತ್ರದ ಕಥೆ ಬಗ್ಗೆ ಮಾತನಾಡುವ ಚಿತ್ರತಂಡ, ‘ಕೆಲ ವರ್ಷಗಳ ಹಿಂದೆ ತಮಿಳುನಾಡಿನ ಪೊಲ್ಲಾಚಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗುತ್ತಿದೆ. ಶ್ರೀಮಂತ ಹುಡುಗಿ ಮತ್ತು ಬಡ ಹುಡುಗನ ನಡುವಿನ ಪ್ರೀತಿ ಚಿತ್ರದಲ್ಲಿದೆ. ಕಬ್ಬಿನ ಹಾಲು ಮಾರುವ ಬಡ ಹುಡುಗನ ಮೇಲೆ ಶ್ರೀಮಂತ ಮನೆತನದ ಹುಡುಗಿಗೆ ಪ್ರೀತಿ ಮೂಡುತ್ತದೆ. ಮುಂದೆ ವಿಷಯ ತಿಳಿದ ಆಕೆಯ ಮನೆಯವರು ಹುಡುಗನ ಎರಡು ಕಾಲುಗಳ ಮೇಲೆ ವಾಹನದ ಚಕ್ರ ಹರಿಸಿ ಅವನನ್ನು ಅಂಗವಿಕಲನನ್ನಾಗಿ ಮಾಡುತ್ತಾರೆ. ಆದರೂ ಪ್ರೀತಿ ಬಿಡದ ಆತ ಹೇಗೆ ಸೇಡು ತೀರಿಸಿಕೊಳ್ಳುತ್ತಾನೆ ಎಂಬುದು ಚಿತ್ರದ ಕಥೆಯ ಒಂದು ಏಳೆ. ಮರ್ಯಾದ ಹತ್ಯೆಯ ಸುತ್ತ ಚಿತ್ರದ ಕಥೆ ನಡೆಯುತ್ತದೆ’ ಎಂದು ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಯನ್ನು ಬಿಚ್ಚಿಟ್ಟಿತು.

ಇನ್ನು ಈಗಾಗಲೇ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ದೇವರಾಜ ಕುಮಾರ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಜೊತೆಗೆ ತಾನೇ ನಾಯಕನಾಗಿಯೂ ಅಭಿನಯಿಸುತ್ತಿದ್ದಾರೆ. ಮುಂಬೈ ಮೂಲದ ಸಮೃದ್ಧ ಶುಕ್ಲಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ತಬಲ ನಾಣಿ, ಬಲರಾಜವಾಡಿ, ಶೋಭರಾಜ್‌, ಜಿಮ್‌ ರವಿ, ಹೊನ್ನವಳ್ಳಿ ಕೃಷ್ಣ, ವಿಕ್ಟರಿ ವಾಸು ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ, ಇದೇ ವರ್ಷದ ಡಿಸೆಂಬರ್‌ 20ಕ್ಕೆ ‘ತಾಜ್‌ಮಹಲ್-2’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಆಲೋಚನೆ ಚಿತ್ರತಂಡದ್ದು. ಒಟ್ಟಾರೆ ಕನ್ನಡದಲ್ಲಿ ಈಗಾಗಲೇ ಬಂದ ಹತ್ತು ಹಲವು ಪ್ರೀತಿ-ಪ್ರೇಮ, ಮರ್ಯಾದ ಹತ್ಯೆಯ ಕಥಾಹಂದರ ಹೊಂದಿರುವ ಚಿತ್ರಗಳ ‘ತಾಜ್‌ಮಹಲ್-2’ ಎಷ್ಟು ಭಿನ್ನವಾಗಿರಲಿದೆ, ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗಲಿದೆ ಅನ್ನೋದು ತೆರೆಗೆ ಬಂದ ಮೇಲಷ್ಟೇ ಗೊತ್ತಾಗಬೇಕು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.