ಮಾಸ್‌ ಹಫ್ತಾ

ವಿಲನ್‌ನಿಂದ ಹೀರೋ...

Team Udayavani, May 17, 2019, 6:00 AM IST

13

ಹೀರೋ ಆಗಬೇಕೆಂದು ಬಂದವರು ವಿಲನ್‌ ಆಗುತ್ತಾರೆ, ಸಂಗೀತ ನಿರ್ದೇಶಕನಾಗಬೇಕೆಂದು ಕನಸು ಕಂಡವರು ಹೀರೋ ಆಗುತ್ತಾರೆ. ಈಗ ವಿಚಾರ ಯಾಕೆ ಅಂತೀರಾ, ಅದಕ್ಕೆ ಕಾರಣ “ಹಫ್ತಾ’ ಚಿತ್ರ. “ಹಫ್ತಾ’ ಎಂಬ ಚಿತ್ರವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ನಾಯಕರಾಗಿರುವವರು ವರ್ಧನ್‌ ತೀರ್ಥಹಳ್ಳಿ. ಚಿತ್ರರಂಗಕ್ಕೆ ವಿಲನ್‌ ಆಗಬೇಕೆಂಬ ಕನಸು ಹೊತ್ತು ಬಂದ ವರ್ಧನ್‌, ಇಲ್ಲಿವರೆಗೆ ಸುಮಾರು 45ಕ್ಕೂ ಹೆಚ್ಚು ಚಿತ್ರಗಳಲ್ಲಿ ನೆಗೆಟಿವ್‌ ಶೇಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾರೆ. ಈಗ “ಹಫ್ತಾ’ ಚಿತ್ರದ ಮೂಲಕ ಹೀರೋ ಆಗಿದ್ದಾರೆ. ಈ ಚಿತ್ರದಲ್ಲಿ ವರ್ಧನ್‌ ಎರಡು ಶೇಡ್‌ನ‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀರೋ ಅಂದಕೂಡಲೇ ಸದ್ಗುಣ ಸಂಪನ್ನವಿರುವ ಹೀರೋ ಎಂದುಕೊಳ್ಳುವಂತಿಲ್ಲ. ಚಿತ್ರದ ಹೆಸರಿಗೆ ತಕ್ಕಂತೆ ವರ್ಧನ್‌ ನೆಗೆಟಿವ್‌ ಶೇಡ್‌ನ‌ಲ್ಲೇ ಕಾಣಿಸಿಕೊಂಡಿದ್ದಾರೆ. ಒಂದರಲ್ಲಿ ಮಂಗಳಮುಖೀಯಾದರೆ, ಇನ್ನೊಂದು ಶೇಡ್‌ನ‌ಲ್ಲಿ ಪಕ್ಕಾ ಅಂಡರ್‌ವರ್ಲ್ಡ್ ಹಿನ್ನೆಲೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ರಾಘವ್‌ ನಾಗ್‌ ಕೂಡಾ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರವನ್ನು ಪ್ರಕಾಶ್‌ ಹೆಬ್ಟಾಳ ನಿರ್ದೇಶಿಸಿದ್ದು, ಇದು ಅವರ ಕನಸಿನ ಕೂಸಂತೆ. ಮಾಸ್‌ ಪ್ರಿಯರಿಗೆ ಇಷ್ಟವಾಗುವ ಅಂಶ ಈ ಚಿತ್ರದಲ್ಲಿದೆ ಎನ್ನುವುದು ಅವರ ಮಾತು. ಚಿತ್ರದಲ್ಲಿ ಬಿಂಬಶ್ರೀ ನೀನಾಸಂ ಹಾಗೂ ಸೌಮ್ಯ ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರವನ್ನು ಮೈತ್ರಿ ಮಂಜುನಾಥ್‌ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಇಬ್ಬರು ಸಂಗೀತ ನಿರ್ದೇಶಕರು. ಗೌತಮ್‌ ಶ್ರೀವತ್ಸ ಹಾಗೂ ವಿಜಯ್‌. ಚಿತ್ರದ ಒಂದು ಹಾಡು ಹಾಗೂ ಹಿನ್ನೆಲೆ ಸಂಗೀತವನ್ನು ಗೌತಮ್‌ ಮಾಡಿದರೆ, ಮಿಕ್ಕ ಎರಡು ಹಾಡುಗಳಿಗೆ ವಿಜಯ್‌ ಸಂಗೀತವಿದೆ. ಉಳಿದಂತೆ ಚಿತ್ರದಲ್ಲಿ ಬಲರಾಜು ವಾಡಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಲಹರಿ ವೇಲು ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಚಿತ್ರದ ಟೈಟಲ್‌ ತುಂಬಾ ಕ್ಯಾಚಿಯಾಗಿದ್ದು, ಮಾಸ್‌ ಪ್ರಿಯರಿಗೆ ಇಷ್ಟವಾಗುತ್ತದೆ ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.