ಕ್ರೈಮ್‌ ಬೇಧಿಸಲು ಧ್ಯಾನ


Team Udayavani, Jun 15, 2018, 6:00 AM IST

bb-30.jpg

10 ವರ್ಷಗಳ ಹಿಂದೆ ರಾಹುಲ್‌ ಐನಾಪುರ ಅವರಿಗೆ ಒಂದು ಮಾತು ಕೊಟ್ಟಿದ್ದರಂತೆ ಶಿವಗಣೇಶ್‌. “ನಾನು ಗೆದ್ದರೆ, ನಿಮ್ಮನ್ನ ಹೀರೋ ಮಾಡಿ ಒಂದು ಚಿತ್ರ ಮಾಡುತ್ತೀನಿ …’  ಎಂದು ಹೇಳಿದ್ದರಂತೆ. “ಜಿಗರ್‌ ಥಂಡ’ ಚಿತ್ರದ ನಂತರ ಆ ಮಾತು ಅವರಿಗೆ ನೆನಪಾಗಿ, ಈಗ ರಾಹುಲ್‌ ಅಭಿನಯದಲ್ಲಿ “ತ್ರಾಟಕ’ ಎಂಬ ಚಿತ್ರ ಮಾಡಿದ್ದಾರೆ ಶಿವಗಣೇಶ್‌. ಇಲ್ಲಿ ರಾಹುಲ್‌ ಜೊತೆಗೆ ಅಜಿತ್‌ ಜಯರಾಜ್‌ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಎಲ್ಲಾ ಸರಿ, “ತ್ರಾಟಕ’ ಎಂದರೇನು ಎಂಬ ಪ್ರಶ್ನೆ ಬರದು. “ತ್ರಾಟಕ’ ಎಂದರೆ ಧ್ಯಾನದ ಒಂದು ರೀತಿಯಂತೆ. “ಇಲ್ಲಿ ಪೊಲೀಸ್‌ ಅಧಿಕಾರಿಯೊಬ್ಬ ಹೇಗೆ ಧ್ಯಾನ ಮಾಡಿ, ತನ್ನ ಬುದ್ಧಿಶಕ್ತಿಯನ್ನು ಉಪಯೋಗಿಸಿ ಕ್ರೈಮ್‌ ಬಗೆಹರಿಸುತ್ತಾನೆ ಎಂಬುದೇ ಚಿತ್ರದ ಕಥೆ. ನರು ನಾರಾಯಣ್‌ ಮತ್ತು ಮಹಾಕೀರ್ತಿ ಸ್ಕ್ರಿಪ್ಟ್ ಮಾಡಿಕೊಟ್ಟಿದ್ದಾರೆ. ಕಡಿಮೆ ಬಜೆಟ್‌ನಲ್ಲೇ ಒಂದು ಮರ್ಡರ್‌ ಮಿಸ್ಟ್ರಿ ಮಾಡಿದ್ದೇವೆ. ರಾಹುಲ್‌ ಜೊತೆಗೆ ಅಜಿತ್‌, ಹೃದಯಾ, ದಿಶಾ ಪೂವಯ್ಯ, ಯಶ್‌ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ವಿನೋದ್‌ ಭಾರತಿ ಛಾಯಾಗ್ರಹಣ ಮಾಡಿದರೆ, ಅರುಣ ಸುರದ ಅವರು ಸಂಗೀತ ಸಂಯೋಜಿಸಿದ್ದಾರೆ’ ಎಂದೆಲ್ಲಾ ಮಾಹಿತಿ ಕೊಟ್ಟರು ಶಿವಗಣೇಶ್‌.

ಇನ್ನು ಈ ಚಿತ್ರದಲ್ಲಿ ರಾಹುಲ್‌ ನಾಯಕನಷ್ಟೇ ಅಲ್ಲ, ನಿರ್ಮಾಪಕರು ಕೂಡಾ. ರಾಹುಲ್‌ ಕ್ಯಾಮೆರಾ ಮುಂದೆ ನಿಲ್ಲುವುದಕ್ಕಿಂತ ಮುನ್ನ ಅವರನ್ನು ಹಿರಿಯ ಮೈಮ್‌ ತಜ್ಞ ವಾಲ್ಟರ್‌ ಡಿ’ಸೋಜಾ ಅವರ ಮುಂದೆ ನಿಲ್ಲಿಸಿದರಂತೆ ಶಿವಗಣೇಶ್‌. ವಾಲ್ಟರ್‌ ಅವರ ಗರಡಿಯಲ್ಲಿ ಸುಮಾರು ಮೂರು ತಿಂಗಳ ಕಾಲ ಪಳಗಿದ ನಂತರ ಕ್ಯಾಮೆರಾ ಮುಂದೆ ನಿಲ್ಲಿಸಲಾಯಿತಂತೆ. ನಟನೆ ಅಥವಾ ಚಿತ್ರದ ಬಗ್ಗೆ ರಾಹುಲ್‌ ಏನೂ ಮಾತನಾಡಲಿಲ್ಲ. “ಈ ತಂಡದವರೇ ನನ್ನ ಫ್ಯಾಮಿಲಿ’ ಎಂದು ಭಾವುಕರಾದರು. ಇಲ್ಲಿ ಕಥೆಯೇ ಹೀರೋ ಮಿಕ್ಕವರೆಲ್ಲಾ ಕೇವಲ ಪಾತ್ರಧಾರಿಗಳು ಅಂತ ಅಜಿತ್‌ ಜಯರಾಜ್‌ ಹೇಳಿಕೊಂಡರೆ, ತಮ್ಮ ಪಾಲಿಗೆ ಇದು ಬಹಳ ಒಳ್ಳೆಯ ಕಂಬ್ಯಾಕ್‌ ಎಂದು ನಟಿ ಹೃದಯಾ ಹೇಳಿಕೊಂಡರು.

ಅಂದಹಾಗೆ, ಶಿವಗಣೇಶ್‌ ಮಾತನಾಡಿದ್ದು “ತ್ರಾಟಕ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ. ಇದುವರೆಗೂ “ತ್ರಾಟಕ’ ಬಗ್ಗೆ ಚಿತ್ರತಂಡದವರು ಏನೂ ಮಾತಾಡಿರಲಿಲ್ಲ. ಈಗ ಚಿತ್ರೀಕರಣ ಮುಗಿದಿರುವುದರಿಂದ, ಚಿತ್ರದ ಬಗ್ಗೆ ಮಾತಾಡಿದ ಹಾಗೂ ಆಯಿತು, ಹಾಡುಗಳನ್ನು ಬಿಡುಗಡೆ ಮಾಡಿದಂತೆಯೂ ಆಯಿತು ಎಂದು ಟೂ-ಇನ್‌-ಒನ್‌ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ಅಂಬರೀಶ್‌ ಬಂದಿದ್ದರು. ಜೊತೆಗೆ ಕೆ. ಮಂಜು, ವಾಲ್ಟರ್‌ ಡಿ’ಸೋಜ, ಸಂತೋಷ್‌ ಆರ್ಯನ್‌ ಮುಂತಾದವರು ಇದ್ದರು.

ಅಂಬರೀಶ್‌ ಅವರು ಹೆಚ್ಚು ಮಾತನಾಡಲಿಲ್ಲ. “ಕನ್ನಡಕ್ಕೆ ಹೊಸ ಕಲಾವಿದರು, ನಿರ್ದೇಶಕರು, ತಂತ್ರಜ್ಞರು ಬರುತ್ತಿದ್ದಾರೆ. ಹೊಸ ತರಹದ ಚಿತ್ರಗಳನ್ನು ಮಾಡುತ್ತಿದ್ದಾರೆ. ರಾಹುಲ್‌ ಅವರ ತಂದೆ ನನ್ನ ಹಳೆಯ ಫ್ರೆಂಡು. ನಮ್ಮ ಕಾಲ ಮುಗೀತು. ಇನ್ನು ಹೊಸಬರು ಬರಬೇಕು’ ಎಂದರು ಅಂಬರೀಶ್‌. ಅವರಿಗೆ ಬಿಜಾಪುರದ ಶೈಲಿಯಲ್ಲಿ ಖಾಕಿ ಟೋಪಿ ತೊಡಿಸಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.