![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಚಿತ್ರೀಕರಣದಲ್ಲಿ ಮೆಹಬೂಬಾ ಬಿಝಿ
Team Udayavani, Jan 3, 2020, 5:04 AM IST
![20](https://www.udayavani.com/wp-content/uploads/2020/01/20-513x465.jpg)
“ಮೆಹಬೂಬಾ’ ಎಂಬ ಸಿನಿಮಾವೊಂದು ಆರಂಭವಾಗಿರುವ ಬಗ್ಗೆ ನಿಮಗೆ ಗೊತ್ತಿರಬಹುದು. ಈಗ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಆ ಚಿತ್ರ ದ್ವಿತೀಯ ಹಂತದ ಚಿತ್ರೀಕರಣದಲ್ಲಿ ತೊಡಗಿದೆ. ಬೆಂಗಳೂರಿನ ಹೆಚ್.ಎಂ.ಟಿ ಬಳಿ ನಿರ್ಮಿಸಲಾಗಿರುವ ಪೊಲೀಸ್ ಸ್ಟೇಷನ್ ಸೆಟ್ನಲ್ಲಿ ನಡೆಯುತ್ತಿದೆ.
ಕಬೀರ್ ಸಿಂಗ್, ಶಶಿ, ಪಾವನ, ಬುಲೆಟ್ ಪ್ರಕಾಶ್, ಜೈಜಗದೀಶ್, ಶಿವರಾಂ, ಲಯಕೋಕಿಲ, ಕಲ್ಯಾಣಿರಾಜು ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಈ ಹಿಂದೆ “ಕಥಾ ವಿಚಿತ್ರ’ ಚಿತ್ರವನ್ನು ನಿರ್ದೇಶಿಸಿದ್ದ, ಅನೂಪ್ ಅಂತೋನಿ ನಿರ್ದೇಶನದ ಈ ಚಿತ್ರದ ನಾಯಕರಾಗಿ “ಬಿಗ್ಬಾಸ್’ ಖ್ಯಾತಿಯ ಶಶಿ ಅಭಿನಯಿಸುತ್ತಿದ್ದಾರೆ. “ಗೊಂಬೆಗಳ ಲವ್’ ಖ್ಯಾತಿಯ ಪಾವನಾ ಈ ಚಿತ್ರದ ನಾಯಕಿ. ಈ ಚಿತ್ರದಲ್ಲಿ ಜಾತಿ-ಧರ್ಮ, ಮತ-ಪಂಥಗಳನ್ನು ಮೀರಿದ ಪ್ರೇಮಕಥೆಯೊಂದನ್ನು ಹೇಳುತ್ತಿದ್ದೇವೆ. ಒಬ್ಬ ಹಿಂದೂ ಹುಡುಗ, ಮುಸ್ಲಿಂ ಹುಡುಗಿಯ ನಡುವಿನ ಪ್ರೇಮಕಥೆ ಚಿತ್ರದಲ್ಲಿದೆ. ಹಾಗಂತ ಇಲ್ಲಿ ಯಾವುದೇ ಧರ್ಮ, ಜಾತಿ ಮತ್ತಿತರ ವಿಷಯಗಳನ್ನು ಹೇಳುತ್ತಿಲ್ಲ. ಪ್ರೀತಿ ಎಲ್ಲಾದಕ್ಕೂ ಮಿಗಿಲಾದದ್ದು ಎಂಬ ಸಂದೇಶವಿದೆ. ಲವ್, ಸೆಂಟಿಮೆಂಟ್, ಕಾಮಿಡಿ ಎಲ್ಲವೂ ಈ ಚಿತ್ರದಲ್ಲಿದೆ ಎನ್ನುವುದು ನಿರ್ದೇಶಕರ ಮಾತು. ಈ ಹಿಂದೆ “ನೀರ್ ದೋಸೆ’ ಹಾಗೂ “ಬ್ಯೂಟಿಫುಲ್ ಮನಸುಗಳು’ ಚಿತ್ರವನ್ನು ನಿರ್ಮಿಸಿದ್ದ ಪ್ರಸನ್ನ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮ್ಯಾಥ್ಯೂಸ್ ಮನು ಸಂಗೀತ, ಕಿರಣ್ ಹಂಪಾಪುರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ಕಲೈ ಈ ಚಿತ್ರದ ನೃತ್ಯ ನಿರ್ದೇಶಕರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.