ಕಳೆದು ಹೋದ ಸಿಎಂ ಸುತ್ತ…


Team Udayavani, Aug 18, 2017, 6:25 AM IST

kaledu-hoda-cm.jpg

“ಕುರುಡು ದೇಶ, ಅನಾಥ ರಾಜ್ಯ…’
– ಹೀಗೊಂದು ಅಡಿಬರಹ ನೋಡಿದ ಮೇಲೆ, ಇದೊಂದು ರಾಜಕೀಯ ವಿಡಂಬನೆ ಕುರಿತ ಸಿನಿಮಾ ಅಂತ ಪ್ರತ್ಯೇಕವಾಗಿ ಹೇಳುವಂತಿಲ್ಲ. “ಮುಖ್ಯಮಂತ್ರಿ ಕಳದೋದ್ನಪ್ಪೊ’ ಚಿತ್ರದ ಸುದ್ದಿ ಇದು. ಈ ಸಿನಿಮಾದ ಶೀರ್ಷಿಕೆ ಕೆಳಗಿನ ಟ್ಯಾಗ್‌ಲೈನ್‌ ರಾಜಕೀಯದ ಕಥೆ ಎಂಬುದನ್ನು ಸಾರಿ ಹೇಳುವಂತಿತ್ತು. ಈಗಾಗಲೇ ಚಿತ್ರೀಕರಣ ಬಹುತೇಕ ಮುಗಿದಿದ್ದು, ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ತಯಾರು ಮಾಡಿಕೊಳ್ಳುತ್ತಿದೆ.

ಶಿವಕುಮಾರ್‌ ಆರ್‌.ಭದ್ರಯ್ಯ ಈ ಚಿತ್ರದ ನಿರ್ದೇಶಕರು. ನಿರ್ಮಾಣ ಕೂಡ ಇವರದೇ. ಅಷ್ಟೇ ಅಲ್ಲ, ಹಾಡು ಬರೆದು ಮುಖ್ಯಮಂತ್ರಿ ಪಾತ್ರಕ್ಕೆ ಬಣ್ಣ ಕೂಡ ಹಚ್ಚಿದ್ದಾರೆ. ಇನ್ನು, ಇವರ ಪುತ್ರ ಭರತ್‌ ಭದ್ರಯ್ಯ ಹೀರೋ ಆಗಿದ್ದಾರೆ. ಅಲ್ಲಿಗೆ ಇದೊಂದು ಮಗನಿಗಾಗಿ ಅಪ್ಪ ಮಾಡುತ್ತಿರುವ ಸಿನಿಮಾ ಎಂದರ್ಥ.

ಸಾಮಾನ್ಯವಾಗಿ ಸರ್ಕಾರದ ಮಂತ್ರಿಗಳು ಯಾವುದೇ ಕ್ಷೇತ್ರಕ್ಕೆ ಹೋಗದೆ, ಜನರನ್ನು ಭೇಟಿ ಮಾಡದೆ ಇದ್ದಾಗ, ವಿರೋಧ ಪಕ್ಷದವರು, ಸಿಎಂ ಕಳೆದುಹೋಗಿದ್ದಾರೆ ಅಂತ ಬೊಬ್ಬೆ ಹಾಕುವುದು ಗೊತ್ತೇ ಇದೆ. ಅಂತಹ ಹಲವು ಘಟನೆಗಳನ್ನು ಇಟ್ಟುಕೊಂಡು “ಮುಖ್ಯಮಂತ್ರಿ ಕಳದೋದ್ನಪ್ಪೊ’ ಚಿತ್ರ ಮಾಡಿರುವ ನಿರ್ದೇಶಕ ಶಿವಕುಮಾರ್‌ ಅವರಿಗೆ ಚಿಕ್ಕವಯಸ್ಸಿನಿಂದಲೂ ಸಿನಿಮಾ ಹುಚ್ಚು ಇತ್ತಂತೆ. ಆದರೆ, ಅನುಭವ ಇರದೆ ಸಿನಿಮಾ ರಂಗಕ್ಕೆ ಎಂಟ್ರಿಯಾಗಬಾರದು ಅಂತ ಯೋಚಿಸಿ, ಒಂದಷ್ಟು ತಿಳಿದುಕೊಂಡು ಈಗ ಎಂಟ್ರಿಯಾಗಿದ್ದಾರಂತೆ. 

ಚಿತ್ರದಲ್ಲಿ ಇಂದಿನ ವಾಸ್ತವತೆ, ಅಧಿಕಾರ ಸಿಕ್ಕಾಗ ಜನಪ್ರತಿನಿಧಿಗಳು ಹೇಗೆಲ್ಲಾ ಜನರನ್ನು ಯಾಮಾರಿಸುತ್ತಾರೆ, ಈಗಿನ ಯುವಜನಾಂಗದವರು ನಾಯಕ-ನಾಯಕಿ ಆಗಬೇಕು ಅಂತ ಹೇಗೆಲ್ಲಾ ಹಂಬಲಿಸುತ್ತಾರೆ ಎಂಬಿತ್ಯಾದಿ ವಿಷಯಗಳು ಇಲ್ಲಿವೆಯಂತೆ. ಒಟ್ಟಾರೆ, ಜಾತಿ ಪಿಡುಗು ತೊಲಗಬೇಕು, ಒಬ್ಬ ವ್ಯಕ್ತಿಯ ಹಿಂದೆ ಸಮಾಜ ಹೋಗಬಾರದು. ಇಂತಹ ಪರಿಕಲ್ಪನೆಗಳು ಚಿತ್ರದ ಹೈಲೈಟ್‌ ಅಂತೆ.  ಇನ್ನು, ಭರತ್‌ ಭದ್ರಯ್ಯ ಅವರಿಲ್ಲಿ ಪತ್ರಕರ್ತರಾಗಿ ಕಾಣಿಸಿಕೊಂಡಿದ್ದಾರಂತೆ.

ಅಮೂಲ್ಯ ರಾಜ್‌ ನಾಯಕಿಯಾಗಿದ್ದಾರೆ. ಇವರಿಬ್ಬರಿಗೂ ಇದು ಹೊಸ ಅನುಭವ. ಚಿತ್ರದಲ್ಲಿ ಬಾಬು ಹಿರಣಯ್ಯ ಸೇರಿದಂತೆ ಇತರರು ಅಭಿನಯಿಸಿದ್ದಾರೆ. ಎಂಟು ರಾಜ್ಯಗಳಲ್ಲಿ ಚಿತ್ರೀಕರಿಸಿರುವುದು ಚಿತ್ರದ ಇನ್ನೊಂದು ವಿಶೇಷತೆಯಂತೆ. ಚಿತ್ರಕ್ಕೆ ನವೀನ್‌ ಸಂಗೀತವಿದೆ. ಹರೀಶ್‌ ಛಾಯಾಗ್ರಹಣವಿದೆ. ನಾಗೇಂದ್ರಪ್ರಸಾದ್‌, ಮಂಜು ಕವಿ ಸಾಹಿತ್ಯವಿದೆ.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.