ನಾಗಶೇಖರ್‌ ಮತ್ತೂಂದು ಕನಸು


Team Udayavani, May 24, 2019, 6:00 AM IST

q-28

ಮುಹೂರ್ತದ ಬಳಿಕ ಎಲ್ಲಿಯೂ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿರದ “ಅಮರ್‌’ ಚಿತ್ರತಂಡ, ಚಿತ್ರದ ಬಿಡುಗಡೆಗೂ ಮುನ್ನ ಪತ್ರಿಕಾಗೋಷ್ಟಿಯನ್ನು ನಡೆಸಿ “ಅಮರ್‌’ ಸಿನಿ ಜರ್ನಿಯನ್ನು ತೆರೆದಿಟ್ಟಿತು. ಇದೇ ವೇಳೆ ಮಾತನಾಡಿದ ನಿರ್ದೇಶಕ ನಾಗಶೇಖರ್‌, “ಇದೊಂದು ಪಕ್ಕಾ ಲವ್‌ಸ್ಟೋರಿ ಸಿನಿಮಾವಾಗಿದೆ. ಸ್ಕ್ರೀನ್‌ ಮೇಲೆ ಅಭಿಷೇಕ್‌-ತಾನ್ಯಾ ಹೋಪ್‌ ಜೋಡಿಯನ್ನ ನೋಡುತ್ತಿದ್ದರೆ, ರವಿಚಂದ್ರನ್‌-ಜೂಹಿ ಚಾವ್ಲಾ ಜೋಡಿ ನೆನಪಿಗೆ ಬರುತ್ತದೆ. ಚಿತ್ರದಲ್ಲಿ ಅಂಬರೀಶ್‌ ಪ್ರಭಾವ ಜಾಸ್ತಿಯಿದೆ. ಯಾಕಂದ್ರೆ ಸಿನಿಮಾ ಮಾಡುವಾಗ ಮಗನ ವೀಕ್ನ್ ಸ್‌ ಏನು ಅನ್ನೋದನ್ನು ತಿಳಿಸಿಕೊಟ್ಟಿದ್ರು. ವಾಕಿಂಗ್‌ ಸ್ಟೈಲ್‌ ಬದಲಾಯಿಸು ಜೊತೆಗೆ ಆದಷ್ಟು ನಟನೆಯನ್ನು ಚೆನ್ನಾಗಿ ಮಾಡಿಸು ಅಂತೆಲ್ಲಾ ಹೇಳಿದ್ರು. ಚಿತ್ರಕ್ಕಾಗಿ ಸುಮಲತಾ ಅಂಬರೀಶ್‌ ಕೂಡ ಒಳ್ಳೆಯ ಸಹಕಾರ ನೀಡಿದ್ದಾರೆ. ಸಿನಿಮಾದ ಆರಂಭದಲ್ಲೇ ಅಂಬಿಯ ಡೈಲಾಗ್‌ ನೋಡುಗರಿಗೆ ಸಖತ್‌ ಮಜಾ ನೀಡಲಿದೆ. ಇನ್ನು ಚಿತ್ರದ ಹಾಡೊಂದಕ್ಕೆ ರಜನಿಕಾಂತ್‌, ಮೋಹನ್‌ ಬಾಬು, ಶತ್ರುಘ್ನ ಸಿನ್ಹಾ ಸೇರಿದಂತೆ ದೊಡ್ಡ ಸ್ಟಾರ್‌ಗಳನ್ನು ಒಟ್ಟುಗೂಡಿಸಿ ತೆರೆಮೇಲೆ ತರುವ ಆಸೆಯಿತ್ತು. ಆದರೆ ಅಂಬರೀಶ್‌ ನಿಧನದಿಂದಾಗಿ ಆ ಪ್ಲಾನ್‌ ಎಲ್ಲಾ ಬದಲಾಯಿತು’ ಎಂದರು.

“ಅಮರ್‌’ ಚಿತ್ರವನ್ನು ಸುಮಾರು 87 ದಿನಗಳ ಕಾಲ ಚಿತ್ರೀಕರಿಸಲಾಗಿದ್ದು, ಬೆಂಗಳೂರು, ಮಂಗಳೂರು, ಮಣಿಪಾಲ್‌, ಊಟಿ, ಕೊಯಮತ್ತೂರು, ಸ್ವಿಡ್ಜರ್‌ಲ್ಯಾಂಡ್‌, ಮಲೇಷಿಯಾ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಅಭಿಷೇಕ್‌, ತಾನ್ಯ ಹೋಪ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಉಳಿದಂತೆ ದೇವರಾಜ್‌, ಅರುಣ್‌ ಸಾಗರ್‌, ಚಿಕ್ಕಣ್ಣ, ಸಾಧುಕೋಕಿಲಾ, ಸುಧಾರಾಣಿ ಸೇರಿದಂತೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನಿರೂಪ್‌ ಭಂಡಾರಿ, ರಚಿತಾ ರಾಮ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು “ಅಮರ್‌’ 90ರ ದಶಕದ ಪಂಚಭಾಷಾ ನಟಿಯೊಬ್ಬರ ಜೀವನ ಆಧಾರಿತ ಚಿತ್ರ ಎಂದು ಹೇಳಲಾಗುತ್ತಿದ್ದು, ಆ ನಟಿ ಯಾರು ಎನ್ನುವುದು ಚಿತ್ರ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ. ಚಿತ್ರದ ಇನ್ನೊಂದು ವಿಶೇಷವೆಂದರೆ, ಚಿತ್ರದಲ್ಲಿ ಬರುವ ಕೊಡವ ಹಾಡು. ಇಲ್ಲಿಯವರೆಗೆ ಕನ್ನಡ ಚಿತ್ರಗಳಲ್ಲಿ ಹಾಡುಗಳ ಒಂದೆರಡು ಸಾಲುಗಳಲ್ಲಿ ಕೊಡವ ಹಾಡನ್ನು ಬಳಸಿಕೊಳ್ಳಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ “ಅಮರ್‌’ ಚಿತ್ರದಲ್ಲಿ ಕೊಡವ ಭಾಷೆಯ ಒಂದು ಹಾಡನ್ನು ಪೂರ್ಣವಾಗಿ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಈ ಹಾಡಿನಲ್ಲಿ ದರ್ಶನ್‌ ಹಾಗೂ ರಚಿತಾ ರಾಮ್‌ ಹೆಜ್ಜೆ ಹಾಕಿದ್ದು, ಇತ್ತೀಚೆಗೆ ಈ ಹಾಡಿನ ಲಿರಿಕಲ್‌ ವಿಡಿಯೋ ಕೂಡ ರಿಲೀಸ್‌ ಆಗಿದೆ. ಅಂದಹಾಗೆ, “ಅಮರ್‌’ ಚಿತ್ರ ರಾಜ್ಯಾದ್ಯಂತ ಸುಮಾರು 300ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿದ್ದು, ಕರ್ನಾಟಕದ ಹೊರಭಾಗ ಸುಮಾರು 60 ಕಡೆಗಳಲ್ಲಿ ಬಿಡುಗಡೆಯಾಗುತ್ತಿದೆ. ಜೂನ್‌ ಮೊದಲವಾರ ಚಿತ್ರವನ್ನು ವಿದೇಶಗಳಲ್ಲೂ ಬಿಡುಗಡೆ ಮಾಡಲು ಪ್ಲಾನ್‌ ಮಾಡಿಕೊಳ್ಳಲಾಗಿದೆ ಎನ್ನುವುದು ಚಿತ್ರತಂಡ ನೀಡಿದ ಮಾಹಿತಿ. ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದ ಚಿತ್ರದ ನಾಯಕ ನಟ ಅಭಿಷೇಕ್‌, ನಾಯಕಿ ತಾನ್ಯಾ ಹೋಪ್‌, ನಿರ್ಮಾಪಕ ಸಂದೇಶ್‌. ಎನ್‌, ಛಾಯಾಗ್ರಹಕ ಸತ್ಯ ಹೆಗಡೆ, ಚಿತ್ರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.