ಹೀರೋ- ವಿಲನ್ ಅಂತೇನಿಲ್ಲ, ಪಾತ್ರಗಳಿಗೆ ನ್ಯಾಯ ಕೊಡುವುದೇ ನನ್ನಉದ್ದೇಶ… ನವೀನ್‌ ಶಂಕರ


Team Udayavani, Jun 2, 2023, 2:52 PM IST

Naveen shankar spoke about cini journey

“ಗುಲ್ಟು’ ಸಿನಿಮಾದ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದವರು ನಟ ನವೀನ್‌ಶಂಕರ್‌. ಮೊದಲ ಸಿನಿಮಾದಲ್ಲೇ ಪ್ರೇಕ್ಷಕರು ಮತ್ತು ಸಿನಿ ಮಂದಿಯ ಗಮನ ಸೆಳೆಯುವಲ್ಲಿ ಯಶಸ್ವಿಯಾದ ನವೀನ್‌ ಶಂಕರ್‌, ನಂತರ ಕೆಲ ವರ್ಷ ಗ್ಯಾಪ್‌ ತೆಗೆದುಕೊಂಡು ಬಳಿಕ “ಧರಣಿ ಮಂಡಲ ಮಧ್ಯದೊಳಗೆ’, “ಹೊಂದಿಸಿ ಬರೆಯಿರಿ’ ಹೀಗೆ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಸದ್ಯ ನವೀನ್‌ ಶಂಕರ್‌ ಅಭಿನಯದ “ಕ್ಷೇತ್ರಪತಿ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಇತ್ತೀಚೆಗಷ್ಟೇ ಅದರ ಮೊದಲ ಟೀಸರ್‌ ಬಿಡುಗಡೆಯಾಗಿದೆ. ಇದೇ ವೇಳೆ ಮಾತಿಗೆ ಸಿಕ್ಕ ನವೀನ್‌ ಶಂಕರ್‌ ತಮ್ಮ ಸಿನಿಮಾ ಜರ್ನಿಯ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ.

“ಗುಲ್ಟು’ ಸಿನಿಮಾದ ನಂತರ ಸ್ವಲ್ಪ ಗ್ಯಾಪ್‌ ತೆಗೆದುಕೊಳ್ಳಲು ಕಾರಣ?

“ಗುಲ್ಟು’ ಸಿನಿಮಾ ನಮ್ಮ ನಿರೀಕ್ಷೆಗೂ ಮೀರಿದ ಗೆಲುವನ್ನು ತಂದುಕೊಟ್ಟಿತು. “ಗುಲ್ಟು’ ಸಿನಿಮಾ ಆದ ನಂತರ ಒಂದಷ್ಟು ಸಿನಿಮಾಗಳ ಆಫ‌ರ್ ಕೂಡ ಬಂದವು. ಅದರಲ್ಲಿ ನಾನು ಕೂಡ ಇಷ್ಟಪಟ್ಟು ಮಾಡಬಹುದಾದ ಒಂದೆರಡು ಸಿನಿಮಾಗಳನ್ನು ಒಪ್ಪಿಕೊಂಡೆ. ಆದಕ್ಕಾಗಿ ಒಂದಷ್ಟು ತಯಾರಿ ಕೂಡ ಮಾಡಿಕೊಳ್ಳಬೇಕಾಯಿತು. ಈ ಮಧ್ಯೆ ಬೇರೆ ಒಂದಷ್ಟು ಸಿನಿಮಾಗಳು ಬಂದರೂ, ಕೈಯಲ್ಲಿರುವ ಸಿನಿಮಾಗಳು ಮುಗಿಯಲಿ ಎಂಬ ಕಾರಣಕ್ಕೆ ಬೇರೆ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ. ಆದರೆ ಆನಂತರ ಕಾರಣಾಂತರಗ ಳಿಂದ ನಾನು ಒಪ್ಪಿಕೊಂಡಿದ್ದ ಆ ಸಿನಿಮಾಗಳು ಅರ್ಧಕ್ಕೆ ನಿಂತವು. ಇದರ ನಡುವೆಯೇ ಕೋವಿಡ್‌ ಲಾಕ್‌ಡೌನ್‌ ಕೂಡ ಬಂತು. ಹೀಗಾಗಿ ಸ್ವಲ್ಪ ಗ್ಯಾಪ್‌ ಆಯಿತು.

ನಾಯಕ ನಟನಾಗಿರುವಾಗಲೇ ಖಳನಟನೆಯತ್ತ ಮುಖ ಮಾಡಿದ್ದು ಯಾಕೆ?

ಮೊದಲಿಗೆ ನಾನೊಬ್ಬ ನಟ. ಇಲ್ಲಿ ನಾನೊಬ್ಬ ನಟನಾಗಬೇಕು ಎಂಬ ಕನಸನ್ನು ಇಟ್ಟುಕೊಂಡು ಚಿತ್ರರಂಗಕ್ಕೆ ಬಂದವನು. ಒಂದೇ ಪಾತ್ರಗಳಿಗೆ ಅಂಟಿಕೊಳ್ಳದೆ, ಇಲ್ಲಿ ಎಲ್ಲ ಥರದ ಪಾತ್ರಗಳನ್ನು ಮಾಡಬೇಕು ಎಂಬುದು ನನ್ನಉದ್ದೇಶ. ಹಾಗಾಗಿ ಅದು ಹೀರೋ ಪಾತ್ರವೋ ಅಥವಾ ವಿಲನ್‌ ಪಾತ್ರವೋ ಎಂಬುದು ನನಗೆ ಮುಖ್ಯವಲ್ಲ. ನನಗೆ ಬರುವ ಪಾತ್ರಗಳಿಗೆ ನಾನು ನ್ಯಾಯ ಕೊಡಬೇಕು, ಅದನ್ನು “ದಿ ಬೆಸ್ಟ್‌’ ಎನ್ನುವಂತೆ ಮಾಡಬೇಕು. ಅಷ್ಟೇ ನನ್ನ ಕೆಲಸ. “ಹೊಯ್ಸಳ’ ಸಿನಿಮಾದಲ್ಲೂ ಅಂಥದ್ದೇ ಪಾತ್ರ ಸಿಕ್ಕಿತು. ನಿರ್ದೇಶಕರು ಕಥೆ ಮತ್ತು ಪಾತ್ರ ಹೇಳಿದಾಗ ತುಂಬ ಇಷ್ಟವಾಯ್ತು. ಹಾಗಾಗಿ ತುಂಬ ಖುಷಿಯಿಂದ ಆ ಪಾತ್ರ ಮಾಡಿದೆ.

ಮೊದಲ ಬಾರಿಗೆ ವಿಲನ್‌ ಆಗಿ ಕಾಣಿಸಿಕೊಂಡಾಗ ಸಿಕ್ಕ ಪ್ರತಿಕ್ರಿಯೆ?

ಮೊದಲ ಬಾರಿಗೆ “ಹೊಯ್ಸಳ’ ಸಿನಿಮಾದಲ್ಲಿ ನನ್ನ ಪಾತ್ರ ಕೇಳಿದಾಗಲೇ ಅದರ ಮೇಲೊಂದು ಭರವಸೆಯಿತ್ತು. ತುಂಬ ಮೃಗೀಯವಾಗಿರುವಂಥ, ಅಭಿನಯಕ್ಕೆ ಸಾಕಷ್ಟು ಸ್ಕೋಪ್‌ ಇರುವಂಥ ಪಾತ್ರ ಇದಾಗಿದೆ ಎಂಬುದು ನನಗೂ ಗೊತ್ತಿತ್ತು. ಜೊತೆಗೆ ಚಿತ್ರತಂಡದ ಸಪೋರ್ಟ್‌ ಕೂಡ ತುಂಬ ಚೆನ್ನಾಗಿತ್ತು. ಹಾಗಾಗಿ ತುಂಬ ಎಂಜಾಯ್‌ ಮಾಡಿಕೊಂಡು ಈ ಪಾತ್ರ ಮಾಡಿದೆ. ಸಿನಿಮಾ ರಿಲೀಸ್‌ ಆದ ನಂತರ ನಿಜಕ್ಕೂ ಅದ್ಭುತ ರೆಸ್ಪಾನ್ಸ್‌ ಸಿಕ್ಕಿತು. ಆಡಿಯನ್ಸ್‌, ಇಂಡಸ್ಟ್ರಿಯವರು ಎಲ್ಲರೂ ಆ ಪಾತ್ರದ ಬಗ್ಗೆ ಮಾತನಾಡಿದರು. ಈಗಲೂ ಹೊರಗಡೆ ಹೊದಾಗ ಜನ ಆ ಪಾತ್ರದ ಬಗ್ಗೆ ಮಾತನಾಡುತ್ತಾರೆ.

ನಿಮ್ಮ ಪಾತ್ರಗಳ ಆಯ್ಕೆ ಹೇಗೆ?

ಮೊದಲಿಗೆ ಒಬ್ಬ ಕಲಾವಿದನಾಗಿ, ಆ ಸಿನಿಮಾದ ಕಥೆ ಮತ್ತು ಪಾತ್ರ ನನಗೆ ಇಷ್ಟವಾಗಬೇಕು. ಅದು ಹೀರೋ ಪಾತ್ರವಿರಲಿ, ವಿಲನ್‌ ಪಾತ್ರವಾಗಿರಲಿ, ಪೋಷಕ ಪಾತ್ರವಾಗಿರಲಿ, ಅಥವಾ ಇತರೆ ಯಾವುದೇ ಪಾತ್ರವಾಗಿರಲಿ, ಮೊದಲು ನಾನು ಕಥೆ ಮತ್ತು ಪಾತ್ರವನ್ನು ಎಂಜಾಯ್‌ ಮಾಡಬೇಕು. ಅದು ನನಗೆ ಖುಷಿ ಕೊಡಬೇಕು. ನನಗೆ ಕಥೆ, ಪಾತ್ರ ಇಷ್ಟವಾದರೆ ಮಾತ್ರ ನಾನು ಅದನ್ನು ನನ್ನ ಪಾತ್ರದ ಮೂಲಕ ಆಡಿಯನ್ಸ್‌ಗೆ ತಲುಪಿಸಲು ಸಾಧ್ಯ. ನನಗೆ ಈ ಕಥೆ, ಪಾತ್ರದಲ್ಲಿ ಏನೋ ಇದೆ ಅಂಥ ಅನಿಸಿದರೆ ಖಂಡಿತಾ, ಯಾವುದೇ ಪಾತ್ರವಾದರೂ ಮಾಡುತ್ತೇನೆ.

ಮುಂಬರುವ ಸಿನಿಮಾಗಳ ಬಗ್ಗೆ ಹೇಳಿ?

ಸದ್ಯ ನಾನು ಹೀರೋ ಆಗಿ ಕಾಣಿಸಿಕೊಂಡಿರುವ “ಕ್ಷೇತ್ರಪತಿ’ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈಗಾಗಲೇ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಫೈನಲ್‌ ಹಂತದಲ್ಲಿದ್ದು, ಇದೇ ಜೂನ್‌ ಅಥವಾ ಜುಲೈ ವೇಳೆಗೆ ರಿಲೀಸ್‌ ಆಗಲಿದೆ. ಇದೊಂದು ಉತ್ತರ ಕರ್ನಾಟಕದ ಸೊಗಡಿನ ಸಿನಿಮಾ. ರೈತರ ಹೋರಾಟ, ರಾಜಕಾರಣ ಹೀಗೆ ಅನೇಕ ವಿಷಯಗಳು ಸಿನಿಮಾದಲ್ಲಿದೆ. ಈಗಾಗಲೇ ಇದರ ಟೀಸರ್‌ ರಿಲೀಸ್‌ ಆಗಿದ್ದು, ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.