ವಿಕಲಚೇತನರ ಸ್ಫೂರ್ತಿಯ ಕಥೆ ; ಮನರಂಜನೆ ಜೊತೆಗೆ ಸಂದೇಶ


Team Udayavani, May 10, 2019, 6:30 AM IST

Suchi-Jakanachari

ಸದೃಢ ಕಾಯ, ಉತ್ತಮ ಆರೋಗ್ಯ, ಒಳ್ಳೆಯ ಸ್ಥಿತಿ-ಗತಿಗಳಿದ್ದರೂ ಅದೆಷ್ಟೋ ಜನರು ತಮ್ಮ ಸಮಯವನ್ನು ವ್ಯರ್ಥ ಮಾಡುತ್ತಾ, ತಮ್ಮ ಬದುಕನ್ನೇ ಹಾಳು ಮಾಡಿಕೊಂಡ ನಿದರ್ಶನಗಳು ನಮ್ಮ ಮುಂದೆ ಸಾಕಷ್ಟಿವೆ. ಆದರೆ ಇದ್ಯಾವುದೂ ಇಲ್ಲದ ಇಬ್ಬರು ಬಾಲಕರು ತಮ್ಮ ಎದುರಿಗಿದ್ದ ಅನೇಕ ಸಂಕಷ್ಟಗಳನ್ನು ಮೆಟ್ಟಿನಿಂತು ಹಲವರಿಗೆ ಮಾದರಿಯಾಗು­ತ್ತಾರೆ. ಇಂಥದ್ದೊಂದು ಪರಿಕಲ್ಪನೆಯನ್ನು ಇಟ್ಟುಕೊಂಡು ಈಗ “ಜಕಣಾಚಾರಿ ಅವನ ತಮ್ಮ ಶುಕ್ಲಾಚಾರಿ’ ಎಂಬ ಹೆಸರಿನಲ್ಲಿ ಮಕ್ಕಳ ಚಿತ್ರವೊಂದು ಈ ವಾರ ತೆರೆಗೆ ಬರುತ್ತಿದೆ.

ಅಂದಹಾಗೆ, “ಜಕಣಾಚಾರಿ ಮತ್ತು ಶುಕ್ಲಾಚಾರಿ’ ಎಂಬ ಹೆಸರು ಚಿತ್ರದಲ್ಲಿದ್ದರೂ, ಈ ಚಿತ್ರದ ಕಥೆಗೂ, ಪುರಾಣ ಪುಣ್ಯಕಥೆಗಳಿಗೂ ಯಾವುದೇ ಸಂಬಂಧವಿಲ್ಲ. ಚಿತ್ರದ ಕಥೆ, ಅದರ ಆಶಯಕ್ಕೆ ಪೂರಕವಾಗಿದೆ ಎಂಬ ಕಾರಣಕ್ಕೆ ಚಿತ್ರತಂಡ ತಮ್ಮ ಚಿತ್ರಕ್ಕೆ “ಜಕಣಾಚಾರಿ ಅವನ ತಮ್ಮ ಶುಕ್ಲಾಚಾರಿ’ ಎಂಬ ಹೆಸರು ಇಟ್ಟುಕೊಂಡಿದೆ. ಸದ್ಯ ಬಿಡುಗಡೆಯ ಹಂತ ತಲುಪಿರುವ “ಜಕಣಾಚಾರಿ ಅವನ ತಮ್ಮ ಶುಕ್ಲಾಚಾರಿ’ ಚಿತ್ರದ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಪತ್ರಕರ್ತರ ಮುಂದೆ ಬಂದಿದ್ದ ಚಿತ್ರತಂಡ, ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು.

ಮೂಲತಃ ಗಾರ್ಮೆಂಟ್ಸ್‌ ಉದ್ಯಮಿ ಆಗಿರುವ ಹೆಚ್‌. ಸೋಮಶೇಖರ್‌, “ರಾಜ್‌ಪ್ರಿಯ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ “ಜಕಣಾಚಾರಿ ಅವನ ತಮ್ಮ ಶುಕ್ಲಾಚಾರಿ’ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ ನಿರ್ಮಾಣದ ಬಗ್ಗೆ ಮಾತನಾಡುವ ಹೆಚ್‌. ಸೋಮಶೇಖರ್‌, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್‌ ಕೀಟನಾಶಕ ಸಿಂಪಡನೆಯಿಂದ ಆರೋಗ್ಯ ಕಳೆದುಕೊಂಡಿರುವ ಕುಟುಂಬವೊಂದರ ಚಿತ್ರಣ ಈ ಸಿನಿಮಾದಲ್ಲಿದೆ. ಎಂಡೋಸಲ್ಫಾನ್‌ನಿಂದ ಆಗಿರುವ ಅನಾಹುತವನ್ನು ಇಂದಿಗೂ ಅದೆಷ್ಟೋ ಕುಟುಂಬಗಳು ಎದುರಿಸುತ್ತಿವೆ.

ಅಂತಹ ಕುಟುಂಬಗಳಲ್ಲಿ ಒಂದು ಕುಟುಂಬದ ಕಥೆ ನಮ್ಮ ಸಿನಿಮಾ. ಒಂದು ಕುಟುಂಬದಲ್ಲಿ ಹುಟ್ಟಿದ ಎರಡೂ ಮಕ್ಕಳು ಅಂಗವಿಕಲರಾಗಿರುತ್ತಾರೆ. ಇಂತಹ ಮಕ್ಕಳನ್ನು ಕರೆದುಕೊಂಡು ಜೀವನ ನಿರ್ವಹಣೆಗಾಗಿ ಕುಟುಂಬವೊಂದು ಬೆಂಗಳೂರಿನಂತಹ ಮಹಾನಗರಕ್ಕೆ ಬರುತ್ತದೆ. ಇಲ್ಲಿ ಆಕುಟುಂಬ ಏನೇನು ಸವಾಲುಗಳನ್ನು ಎದುರಿಸುತ್ತದೆ. ಹಳ್ಳಿಯಿಂದ ಮಹಾನಗರಕ್ಕೆ ಬಂದು ಬದುಕು ಕಟ್ಟಿಕೊಳ್ಳಲು ಯಶಸ್ವಿಯಾಗುತ್ತಾರಾ, ಇಲ್ಲವಾ ಎಂಬುದೇ ಚಿತ್ರದ ಕಥಾಹಂದರ’ ಎನ್ನುತ್ತಾರೆ.

ಕನ್ನಡ ಮತ್ತು ತುಳು ಭಾಷೆಯಲ್ಲಿ ಕೆಲ ಚಿತ್ರಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ವಿಕಲಚೇತನ ಪ್ರತಿಭೆ ರವಿವರ್ಮ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ರವಿವರ್ಮ, “ಪ್ರಪಂಚದಲ್ಲಿ ದುಡ್ಡು ಇರೋರು ಏನು ಬೇಕಾದರೂ ಮಾಡಿ ತೋರಿಸಬಹುದು. ಚೆನ್ನಾಗಿರುವವರು ಸಾಧಿಸಿ ಜೀವನ ಶೈಲಿಯಲ್ಲಿ ಬದಲಾಗಬಹುದು. ಆದರೆ ವಿಕಲಚೇತನರ ಜೀವನ ಹಾಗಲ್ಲ. ಏನಾದರೂ ಮಾಡಬೇಕೆಂದರೆ, ಅದಕ್ಕೆ ಅವರ ದೇಹ ಸ್ಪಂದಿಸುವುದಿಲ್ಲ. ಆದರೂ ಅವೆಲ್ಲವನ್ನೂ ಮೆಟ್ಟಿನಿಂತು ಇಬ್ಬರು ಹುಡುಗರು, ಹಳ್ಳಿಯಿಂದ ನಗರಕ್ಕೆ ಬದುಕು ಸಾಗಿಸಲು ಬರುತ್ತಾರೆ. ತಮ್ಮ ಜೀವನದಲ್ಲಿ ಏನೇನು ಸವಾಲುಗಳನ್ನು ಎದುರಿಸುತ್ತಾರೆ ಅನ್ನೋದೆ ಚಿತ್ರದ ಕಥೆಯ ಒಂದು ಎಳೆ’ ಎಂದರು.

ಇನ್ನೊಂದು ವಿಶೇಷವೆಂದರೆ, ಈ ಚಿತ್ರದ ಪ್ರಮುಖ ಪಾತ್ರವನ್ನು ವಿಕಲಚೇತನ ಮಕ್ಕಳೆ ನಿರ್ವಹಿಸಿದ್ದಾರೆ. ಆರಂಭದಲ್ಲಿ ಈ ಪಾತ್ರಕ್ಕೆ ಡ್ರಾಮ ಜ್ಯೂನಿಯರ್ ಮಕ್ಕಳನ್ನು ಆಯ್ಕೆ ಮಾಡಲು ಯೋಚಿಸಲಾಗಿತ್ತು. ಆದರೆ ಚಿತ್ರದ ಪಾತ್ರಗಳು ನೈಜವಾಗಿ ಮೂಡಿಬರಲಿ ಎಂಬ ಕಾರಣಕ್ಕೆ ವಿಕಲಚೇತನರಾದ ಮಹೇಶ್‌ ಮತ್ತು ಜೇಯಾದ್‌ ಎಂಬ ಇಬ್ಬರು ಮಕ್ಕಳನ್ನು ಆಯ್ಕೆ ಮಾಡಿ ಅವರಿಂದ ಈ ಪಾತ್ರಗಳನ್ನು ಮಾಡಿಸಲಾಗಿದೆ.

ಉಳಿದಂತೆ “ಜಕಣಾಚಾರಿ ಅವನ ತಮ್ಮ ಶುಕ್ಲಾಚಾರಿ’ ಚಿತ್ರದಲ್ಲಿ ಕಿರಣ್‌, ವಿನಯ್‌, ಮುನಿ, ಮನದೀಪ್‌ ರಾಯ್‌, ಮೂಗು ಸುರೇಶ್‌, ಪಂಕಜಾ ರವಿಶಂಕರ್‌, ಗಿರೀಶ್‌ ಜಟ್ಟಿ ಮೊದಲಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಛಾಯಾಗ್ರಹಕ ಸಾಮ್ರಾಟ್‌ ತಮ್ಮ ಕ್ಯಾಮರಾದಲ್ಲಿ ಚಿತ್ರವನ್ನು ಸೆರೆ ಹಿಡಿದಿದ್ದಾರೆ. ರವಿ ಸಂಕಲನ ಕಾರ್ಯವನ್ನು ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು ಸಿ.ಜಿ ಅನಿಲ್‌ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ.

ಚಿತ್ರಕ್ಕೆ ವಿಕ್ರಂ ಯಶೋಧರ್‌ ಮತ್ತು ಪ್ರಶಾಂತ್‌ ಕಾದಲ್‌ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಬೆಂಗಳೂರು ಮತ್ತು ಮಂಗಳೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಒಂದಷ್ಟು ಪ್ರಯೋಗಗಳನ್ನು ಹೊತ್ತು ತೆರೆಮೇಲೆ ಬರುತ್ತಿರುವ “ಜಕಣಾಚಾರಿ ಅವನ ತಮ್ಮ ಶುಕ್ಲಾಚಾರಿ’ ಚಿತ್ರ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಅನ್ನೋದು ಇದೇ ವಾರಾಂತ್ಯದಲ್ಲಿ ಗೊತ್ತಾಗಲಿದೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.