ತೆರೆಯತ್ತ ಕಾರ್ಮೋಡ

ಹೊಸಬರ ಸುಂದರ ಸ್ವಪ್ನ

Team Udayavani, May 10, 2019, 6:15 AM IST

Suchi-Karmoda

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ ‘ಕಾರ್ಮೋಡ ಸರಿದು’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಕಳೆದ ಕೆಲದಿನಗಳಿಂದ ಭರ್ಜರಿಯಾಗಿ ಚಿತ್ರದ ಪ್ರಮೋಶನ್‌ ಕೆಲಸಗಳನ್ನು ನಡೆಸುತ್ತಿರುವ ಚಿತ್ರತಂಡ, ಇದೀಗ ಚಿತ್ರದ ಬಿಡುಗಡೆಯ ಮುಹೂರ್ತವನ್ನೂ ಫಿಕ್ಸ್‌ ಮಾಡಿದೆ. ಅಂದಹಾಗೆ, “ಕಾರ್ಮೋಡ ಸರಿದು’ ಚಿತ್ರ ಇದೇ ಮೇ 17ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಚಿತ್ರದ ಬಿಡುಗಡೆಗೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ ಚಿತ್ರತಂಡ, “ಕಾರ್ಮೋಡ ಸರಿದು’ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು.

ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಗರಡಿಯಿಂದ ಬಂದ ನವ ಪ್ರತಿಭೆ ಉದಯ್‌ ಕುಮಾರ್‌ ಪಿ. ಎಸ್‌, “ಕಾರ್ಮೋಡ ಸರಿದು’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಉದಯ್‌ ಕುಮಾರ್‌, “ಮೊದಲು ಈ ಚಿತ್ರಕ್ಕೆ “ಲೈಫ್ ಈಸ್‌ ಬ್ಯೂಟಿಫ‌ುಲ್‌’ ಎಂದು ಶೀರ್ಷಿಕೆ ಇಡುವ ಯೋಚನೆ ಮಾಡಲಾಗಿತ್ತು. ಇದನ್ನು ನಾಗತಿಹಳ್ಳಿ ಅವರಿಗೆ ಹೇಳಿದಾಗ ಪ್ರಥಮ ನಿರ್ದೇಶನ ಮಾಡುತ್ತಿರುವುದರಿಂದ, ಆದಷ್ಟು ಕನ್ನಡ ಶೀರ್ಷಿಕೆ ಇಡುವಂತೆ ಕಿವಿಮಾತು ಹೇಳಿದರು.

ಅದರಂತೆ ಕೊನೆಗೆ ಶೀರ್ಷಿಕೆ ಬದಲಾವಣೆ ಮಾಡಿ “ಕಾರ್ಮೋಡ ಸರಿದು’ ಎಂದು ಇಡಲಾಯಿತು. ಬದುಕಿನಲ್ಲಿ ಖನ್ನತೆಗೆ ಒಳಗಾದಾಗ ಆತ್ಮಹತ್ಯೆ ಒಂದೇ ಪರಿಹಾರ, ಮುಂದೆ ಬದುಕನ್ನು ಹೇಗೆ ಎಂದು ಅನೇಕರು ಭಾವಿಸುತ್ತಾರೆ. ಆದರೆ ಅದನ್ನು ದಾಟಿದಾಗ ಸುಂದರ ಬದುಕು ತೆರೆದುಕೊಳ್ಳುತ್ತದೆ. ಇದೇ ಎಳೆಯನ್ನ ಇಟ್ಟುಕೊಂಡು ಈ ಚಿತ್ರವನ್ನು ಮಾಡಿದ್ದೇವೆ’ ಎಂದು ಚಿತ್ರದ ಕಥಾಹಂದರದ ಬಗ್ಗೆ ವಿವರಣೆ ನೀಡಿದರು.

ಇನ್ನು ಚಿತ್ರದ ಕಥೆಯಲ್ಲಿ “ಇಂದಿನ ಜನರು ತಮ್ಮ ಯಾಂತ್ರಿಕ ಬದುಕಿನಲ್ಲಿ ಹೇಗೆ ಪ್ರಸ್ತುತ ಜನರು ಮಾನವೀಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಇದರಿಂದ ಸಂಬಂಧಗಳು ಹೇಗೆ ದೂರವಾಗುತ್ತಿದೆ. ಕಾಲ ಬದಲಾದಂತೆ ಹೇಗೆ ಎಲ್ಲವು ಬದಲಾಗುತ್ತಿದೆ, ಮನುಷ್ಯನ ಬಾಂಧವ್ಯಗಳು ಎಷ್ಟು ಮುಖ್ಯ ಎಂಬುದನ್ನು ಹೇಳಲಾಗಿದೆ.

ಪ್ರತಿ ಹತ್ತು ನಿಮಿಷಕ್ಕೊಮ್ಮೆ ಹೊಸ ಸನ್ನಿವೇಶಗಳು ಬರುವುದರಿಂದ ಮುಂದೇನು ಎಂದು ಊಹಿಸಲು ಆಗುವುದಿಲ್ಲ. ಆತ್ಮಹತ್ಯೆ ಮೂಲಕ ಚಿತ್ರ ತೆರೆದುಕೊಳ್ಳುತ್ತದೆ. ಕೊನೆಯ ಹತ್ತು ನಿಮಿಷ ಕ್ಲೈಮಾಕ್ಸ್ ನೋಡುಗನಿಗೆ ಚಿತ್ರಮಂದಿರದಿಂದ ಹೊರಬಂದರೂ ಕಾಡುತ್ತಲೇ ಇರುತ್ತದೆ’ ಎಂದು ಚಿತ್ರದ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತದೆ ಚಿತ್ರತಂಡ.

“ಕಾರ್ಮೋಡ ಸರಿದು’ ಚಿತ್ರವನ್ನು ಕುದರೆಮುಖ, ಕಳಸ ಮೊದಲಾದ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ನ್ನು ಸುಮಾರು ಐದು ಲಕ್ಷ ಮತ್ತು ಹಾಡುಗಳನ್ನು ಮೂರು ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಜೊತೆಗೆ ಚಿತ್ರದ ಪ್ರಮೋಷನ್‌ ಸಂದರ್ಭದಲ್ಲಿ ಶಿವಮೊಗ್ಗ, ಮಂಗಳೂರು ಮೊದಲಾದ ಕಡೆಗಳಲ್ಲಿ ಪ್ರವಾಸ ಕೈಗೊಂಡ ಚಿತ್ರತಂಡಕ್ಕೆ ಪ್ರೇಕ್ಷಕರಿಂದಲೂ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆಯಂತೆ. ಹಾಗಾಗಿ, ಇದೇ ಖುಷಿಯಲ್ಲಿರುವ ಚಿತ್ರತಂಡ, “ಕಾರ್ಮೋಡ ಸರಿದು’ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ನಿರೀಕ್ಷೆಯಲ್ಲಿದೆ.

“ಕಾರ್ಮೋಡ ಸರಿದು’ ಚಿತ್ರಕ್ಕೆ ನವನಟ ಮಂಜು ರಾಜಣ್ಣ ನಾಯಕ ಮತ್ತು ನಿರ್ಮಾಪಕ. ಚಿತ್ರದಲ್ಲಿ ಮಲೆನಾಡಿನ ಗ್ರಾಮಾಂತರ ಭಾಗದ ವೈದ್ಯೆಯಾಗಿ ಅದ್ವಿತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಕಾಮಿಡಿ ಕಿಲಾಡಿಗಳಿ ಖ್ಯಾತಿಯ ದಿವ್ಯಾ, ಶ್ರೀಧರ್‌, ಅಶೋಕ್‌, ಮಾ. ಹೇಮಂತ್‌ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಮೂರು ಹಾಡುಗಳಿಗೆ ಸತೀಶ್‌ ಬಾಬು ಸಂಗೀತ ಸಂಯೋಜಿಸಿದ್ದಾರೆ. ಚಿತ್ರವನ್ನು ಸುಮಾರು ಐವತ್ತಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ನಂತರ ಯುರೋಪ್‌, ಗಲ್ಫ್ ದೇಶಗಳಲ್ಲೂ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರ ತಂಡ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.