ಕೃಷ್ಣ ಟಾಕೀಸ್ ನಲ್ಲೊಬ್ಬ ಸೈಲೆಂಟ್ ವಿಲನ್


Team Udayavani, Apr 23, 2021, 9:38 AM IST

niranth

ಕಳೆದ ವಾರವಷ್ಟೇ “ಕೃಷ್ಣ ಟಾಕೀಸ್‌’ ಚಿತ್ರ ತೆರೆಗೆ ಬಂದಿದ್ದು ನಿಮಗೆ ಗೊತ್ತಿರಬಹುದು. ಈ ಚಿತ್ರದ ಕಥಾಹಂದರ, ನಟ ಅಜೇಯ್‌ ರಾವ್‌ ಅಭಿನಯ, ವಿಜಯಾನಂದ್‌ ನಿರ್ದೇಶನದ ಜೊತೆಗೆ ತೆರೆಮೇಲೆ ನೋಡುಗರ ಗಮನ ಸೆಳೆಯುವ ಮತ್ತೂಂದು ಪಾತ್ರ ಚಿತ್ರದ ಖಳನಾಯಕನದ್ದು. ಅಂದಹಾಗೆ, ಸಸ್ಪೆನ್ಸ್‌ ಕಂ ಹಾರರ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಕೃಷ್ಣ ಟಾಕೀಸ್‌’ ಚಿತ್ರದಲ್ಲಿ ಅಜೇಯ್‌ ರಾವ್‌ ಎದುರು ಖಳನಾಯಕನಾಗಿ ಅಬ್ಬರಿಸಿರುವ ಪ್ರತಿಭೆ ಹೆಸರು ನಿರಂತ್‌.

ಯುವನಟ ನಿರಂತ್‌ ನಿರ್ದೇಶಕನಾಗಬೇಕು ಎಂಬ ಕನಸನ್ನ ಇಟ್ಟುಕೊಂಡು ಚಿತ್ರರಂಗಕ್ಕೆ ಬಂದ ಹುಡುಗ. ಎರಡು ಮೂರು ಸಿನಿಮಾಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿ, ಒಂದಷ್ಟು ಅನುಭವ ಕೂಡ ಗಳಿಸಿಕೊಂಡ ನಿರಂತ್‌ಗೆ, ಕೊನೆಗೆ ನಟನಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಅವಕಾಶ ತಾನಾಗಿಯೇ ಹುಡುಕಿಕೊಂಡು ಬಂತು. 2016ರಲ್ಲಿ ತೆರೆಕಂಡ “ಲೈಫ್ ಸೂಪರ್‌’ ಚಿತ್ರದ ಮೂಲಕ ಬೆಳ್ಳಿತೆರೆ ಮೇಲೆ ಪರಿಚಯವಾದ ನಿರಂತ್‌, ಆ ನಂತರ ತಮಿಳಿನ “ಸಂತೋಷ ತಿಲ್‌ ಕಲವರಂ’, ಮತ್ತೆ ಕನ್ನಡದಲ್ಲಿ “ಕಾರ್ನಿ’, “ಪುರಾವೆ’ ಹೀಗೆ ಇಲ್ಲಿಯವರೆಗೆ ಸುಮಾರು ಐದಾರು ಚಿತ್ರಗಳಲ್ಲಿ ಬೇರೆ ಬೇರೆ ಪಾತ್ರದಲ್ಲಿ ಕಾಣಿಸಿಕೊಂಡು ಸೈ ಎನಿಸಿಕೊಂಡ ನಟ. ಸದ್ಯ ನೆಗೆಟಿವ್‌ ಶೇಡ್‌ ಪಾತ್ರಗಳತ್ತಲೂ ಮುಖ ಮಾಡಿರುವ ನಿರಂತ್‌, “ಕೃಷ್ಣ ಟಾಕೀಸ್‌’ ಚಿತ್ರದ ಮೂಲಕ ಖಡಕ್‌ ವಿಲನ್‌ ಆಗಿ ಪ್ರೇಕ್ಷಕರ ಮುಂದೆ ಎಂಟ್ರಿ ಕೊಟ್ಟಿದ್ದಾರೆ.

ಇದನ್ನೂ ಓದಿ:ಲೆಕ್ಕಾಚಾರ ಉಲ್ಟಾಪಲ್ಟಾ: ಚೇತರಿಕೆಯ ಮೊದಲೇ ಸಿನಿ ಮಂದಿಯ ಕನಸು ನುಂಗಿದ ಕೊರೋನಾ

ಈ ಬಗ್ಗೆ ಮಾತನಾಡುವ ನಿರಂತ್‌, “ಡೈರೆಕ್ಟರ್‌ ಆಗಬೇಕೆಂದು ಬಂದವನು ಈಗ ಆ್ಯಕ್ಟರ್‌ ಆಗಿದ್ದೇನೆ. ನನಗೆ ಸಿಕ್ಕ ಕ್ಯಾರೆಕ್ಟರ್‌ಗಳನ್ನು ಎಷ್ಟು ಚೆನ್ನಾಗಿ ನನ್ನಿಂದ ಮಾಡಲು ಸಾಧ್ಯವೋ ಅಷ್ಟು ಚೆನ್ನಾಗಿ ಮಾಡಲು ಎಲ್ಲ ಎಫ‌ರ್ಟ್‌ ಹಾಕುತ್ತಿದ್ದೇನೆ. ಮುಂದೆ ಕೂಡ ಅಷ್ಟೇ, ಕೇವಲ ಹೀರೋ ಮಾತ್ರವಲ್ಲದೆ, ಹೊಸಥರದ ಪ್ರಯೋಗದ ಪಾತ್ರಗಳನ್ನೂ ಮಾಡಲು ಸಿದ್ಧ ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ “ಕೃಷ್ಣ ಟಾಕೀಸ್‌’ ಸಿನಿಮಾದಲ್ಲಿತ್ತು. ನನ್ನ ಪಾತ್ರಕ್ಕಾಗಿ ತುಂಬ ಹೋಮ್‌ ವರ್ಕ್‌, ಪ್ರಿಪರೇಷನ್‌ ಇತ್ತು. ಉದ್ದ ಕೂದಲು ಬಿಟ್ಟು ಬ್ಯಾಡ್‌ಬಾಯ್‌ ಥರ ಕಾಣಬೇಕಿತ್ತು’ ಎನ್ನುತ್ತಾರೆ.

ಒಟ್ಟಾರೆ “ಕೃಷ್ಣ ಟಾಕೀಸ್‌’ ಮೂಲಕ ನಿರಂತ್‌ ಸಿನಿಮಂದಿಯ ಗಮನ ಸೆಳೆಯಲು ಯಶಸ್ವಿಯಾಗಿದ್ದು, ನಿರಂತ್‌ ಅಭಿನಯದ ಬಗ್ಗೆ ಪ್ರೇಕ್ಷಕರು, ವಿಮರ್ಶಕರು, ಚಿತ್ರೋದ್ಯಮದ ಮಂದಿ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಇದರ ನಡುವೆಯೇ ನಿರಂತ್‌, ಇನ್ನೂ ಎರಡು – ಮೂರು ಹೊಸ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, ಆ ಚಿತ್ರಗಳು ಸದ್ಯ ಮಾತುಕಥೆಯ ಹಂತದಲ್ಲಿದ್ದು, ಇನ್ನಷ್ಟೇ ಅಧಿಕೃತವಾಗಿ ಅನೌನ್ಸ್‌ ಆಗಬೇಕಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.